ತಣ್ಣೀರುಪಂತ: ಉಪ್ಪಿನಂಗಡಿ ವಲಯ ಅರಣ್ಯ ಇಲಾಖೆಯ ವ್ಯಾಪ್ತಿಯ ತಣ್ಣೀರುಪಂತ ಗ್ರಾಮದ ಪಾಲೇದು ಪರಿಸರದಲ್ಲಿ ಚಿರತೆ ಓಡಾಟ ನಡೆಸಿದ ಘಟನೆ ಜ.8 ರಂದು ನಡೆದಿದೆ.
ಪಾಲೇದು ಪರಿಸರದ ಮಡಪ್ಪಾಡಿ ಗೇಟು, ಕಜೆ, ಕಂಡಂಬರಪಲ್ಕೆ, ಎರುಕಲ್ಲು ಪ್ರದೇಶದಲ್ಲಿ ಚಿರತೆ ಓಡಾಟ ನಡೆಸಿದ್ದನ್ನು ಸಾರ್ವಜನಿಕರು ಕಂಡಿದ್ದಾರೆ. ಮಾಹಿತಿ ತಿಳಿದ ಅರಣ್ಯ ಇಲಾಖೆ ತಂಡ ರಾತ್ರಿ 9:45 ಗಂಟೆಯಿಂದ ಸುತ್ತಮುತ್ತಲಿನ ಪ್ರದೇಶದಲ್ಲಿ ಗಸ್ತು ನಡೆಸಿದೆ ಅಲ್ಲದೇ ಎರಡು ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಅಧಿಕಾರಿಗಳು ಚಿರತೆಯನ್ನು ಸೆರೆ ಹಿಡಿಯಲು ಬೋನ್ ಇರಿಸಲು ತಿರ್ಮಾನಿಸಿದ್ದಾರೆ. ಚಿರತೆ ಸಂಜೆ ವೇಳೆಗೆ ಕೂಗು ಶಬ್ದವನ್ನು ಕೆಲ ಮಂದಿ ಕೇಳಿದ್ದು ಕಳೆದ ಹಲವು ದಿನಗಳಿಂದ ಚಿರತೆ ಈ ಪ್ರದೇಶದಲ್ಲಿ ಸುತ್ತಾಡುತ್ತಿದೆ ಅಲ್ಲದೇ ಒಂದೇ ನಿರ್ದಿಷ್ಟ ಸ್ಥಳದಲ್ಲಿ ಚಿರತೆ ಇರಾದ ಕಾರಣ ಬೋನ್ ಇರಿಸಲು ಅರಣ್ಯ ಇಲಾಖೆ ಸಿಬ್ಬಂದಿಗಳನ್ನು ಹೈರಾಣಿಸಿದೆ. ಈ ಸಂದರ್ಭದಲ್ಲಿ ಅರಣ್ಯ ಪಾಲಕ ನಾಗಲಿಂಗಪ್ಪ ಡಿ., ವಾಹನ ಚಾಲಕ ಕಿಶೋರ್ ಕುಮಾರ್ ಹಾಗೂ ಸ್ಥಳೀಯರಾದ ವಿಜಯ್ ಪುಪಾಡಿಕಲ್ಲು, ಪುರಂದರ ಕಜೆ, ಪತ್ರಕರ್ತ ಮನೀಶ್ ವಿ.ಅಂಚನ್ ಪಾಲೇದು ಮತ್ತಿತರು ಉಪಸ್ಥಿತರಿದ್ದರು.











