July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಾಲೇದು ಪರಿಸರದಲ್ಲಿ ಚಿರತೆ ಓಡಾಟ: ಅರಣ್ಯ ಇಲಾಖೆಯಿಂದ ಗಸ್ತು

ತಣ್ಣೀರುಪಂತ: ಉಪ್ಪಿನಂಗಡಿ ವಲಯ ಅರಣ್ಯ ಇಲಾಖೆಯ ವ್ಯಾಪ್ತಿಯ ತಣ್ಣೀರುಪಂತ ಗ್ರಾಮದ ಪಾಲೇದು ಪರಿಸರದಲ್ಲಿ ಚಿರತೆ ಓಡಾಟ ನಡೆಸಿದ ಘಟನೆ ಜ.8 ರಂದು ನಡೆದಿದೆ.

ಪಾಲೇದು ಪರಿಸರದ ಮಡಪ್ಪಾಡಿ ಗೇಟು, ಕಜೆ, ಕಂಡಂಬರಪಲ್ಕೆ, ಎರುಕಲ್ಲು ಪ್ರದೇಶದಲ್ಲಿ ಚಿರತೆ ಓಡಾಟ ನಡೆಸಿದ್ದನ್ನು ಸಾರ್ವಜನಿಕರು ಕಂಡಿದ್ದಾರೆ. ಮಾಹಿತಿ ತಿಳಿದ ಅರಣ್ಯ ಇಲಾಖೆ ತಂಡ ರಾತ್ರಿ 9:45 ಗಂಟೆಯಿಂದ ಸುತ್ತಮುತ್ತಲಿನ ಪ್ರದೇಶದಲ್ಲಿ ಗಸ್ತು ನಡೆಸಿದೆ ಅಲ್ಲದೇ ಎರಡು ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಅಧಿಕಾರಿಗಳು ಚಿರತೆಯನ್ನು ಸೆರೆ ಹಿಡಿಯಲು ಬೋನ್ ಇರಿಸಲು ತಿರ್ಮಾನಿಸಿದ್ದಾರೆ. ಚಿರತೆ ಸಂಜೆ ವೇಳೆಗೆ ಕೂಗು ಶಬ್ದವನ್ನು ಕೆಲ ಮಂದಿ ಕೇಳಿದ್ದು ಕಳೆದ ಹಲವು ದಿನಗಳಿಂದ ಚಿರತೆ ಈ ಪ್ರದೇಶದಲ್ಲಿ ಸುತ್ತಾಡುತ್ತಿದೆ ಅಲ್ಲದೇ ಒಂದೇ ನಿರ್ದಿಷ್ಟ ಸ್ಥಳದಲ್ಲಿ ಚಿರತೆ ಇರಾದ ಕಾರಣ ಬೋನ್ ಇರಿಸಲು ಅರಣ್ಯ ಇಲಾಖೆ ಸಿಬ್ಬಂದಿಗಳನ್ನು ಹೈರಾಣಿಸಿದೆ. ಈ ಸಂದರ್ಭದಲ್ಲಿ ಅರಣ್ಯ ಪಾಲಕ ನಾಗಲಿಂಗಪ್ಪ ಡಿ., ವಾಹನ ಚಾಲಕ ಕಿಶೋರ್ ಕುಮಾರ್ ಹಾಗೂ ಸ್ಥಳೀಯರಾದ ವಿಜಯ್ ಪುಪಾಡಿಕಲ್ಲು, ಪುರಂದರ ಕಜೆ, ಪತ್ರಕರ್ತ ಮನೀಶ್ ವಿ.ಅಂಚನ್ ಪಾಲೇದು ಮತ್ತಿತರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕಿನ 11 ಸರ್ಕಾರಿ ಶಾಲೆಗಳಗೆ ಕೆ.ಪಿ.ಎಸ್ ಸ್ಥಾನಮಾನ; ರಾಜ್ಯ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya

ಕಲ್ಮಂಜ: ಬೂತ್ 89ರ ಪಂ. ಮಾಜಿ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಮಂಡ್ಯದಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬೆಳ್ತಂಗಡಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಭಾಗಿ

Suddi Udaya

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ ” ಸ್ಮಾರ್ಟ್ ಕಾರ್ಡ್ ಬಳಕೆಯ ಮಾಹಿತಿ ಕಾರ್ಯಗಾರ

Suddi Udaya

ಪಡ್ಡಂದಡ್ಕ ನೂರುಲ್ ಹುಧಾ ಕೇಂದ್ರ ಮಸೀದಿ ಖತೀಬ್ ಜನಾಬ್ ಅಶ್ರಫ್ ಫೈಝಿ ಅರ್ಕಾನರವರಿಗೆ ಪವಿತ್ರ ಉಮ್ರಾ ಯಾತ್ರೆಗೆ ಬೀಳ್ಕೊಡುಗೆ

Suddi Udaya

ಕುಣಿತ ಭಜನಾ ಪಂಥೋ 2024: ಗುರುವಾಯನಕೆರೆ ಶ್ರೀ ಭ್ರಾಮರಿ ಭಜನಾ ಮಂಡಳಿಗೆ ದ್ವಿತೀಯ ಸ್ಥಾನ

Suddi Udaya
error: Content is protected !!