ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಾಲೇದು ಪರಿಸರದಲ್ಲಿ ಚಿರತೆ ಓಡಾಟ: ಅರಣ್ಯ ಇಲಾಖೆಯಿಂದ ಗಸ್ತು

ತಣ್ಣೀರುಪಂತ: ಉಪ್ಪಿನಂಗಡಿ ವಲಯ ಅರಣ್ಯ ಇಲಾಖೆಯ ವ್ಯಾಪ್ತಿಯ ತಣ್ಣೀರುಪಂತ ಗ್ರಾಮದ ಪಾಲೇದು ಪರಿಸರದಲ್ಲಿ ಚಿರತೆ ಓಡಾಟ ನಡೆಸಿದ ಘಟನೆ ಜ.8 ರಂದು ನಡೆದಿದೆ.

ಪಾಲೇದು ಪರಿಸರದ ಮಡಪ್ಪಾಡಿ ಗೇಟು, ಕಜೆ, ಕಂಡಂಬರಪಲ್ಕೆ, ಎರುಕಲ್ಲು ಪ್ರದೇಶದಲ್ಲಿ ಚಿರತೆ ಓಡಾಟ ನಡೆಸಿದ್ದನ್ನು ಸಾರ್ವಜನಿಕರು ಕಂಡಿದ್ದಾರೆ. ಮಾಹಿತಿ ತಿಳಿದ ಅರಣ್ಯ ಇಲಾಖೆ ತಂಡ ರಾತ್ರಿ 9:45 ಗಂಟೆಯಿಂದ ಸುತ್ತಮುತ್ತಲಿನ ಪ್ರದೇಶದಲ್ಲಿ ಗಸ್ತು ನಡೆಸಿದೆ ಅಲ್ಲದೇ ಎರಡು ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಅಧಿಕಾರಿಗಳು ಚಿರತೆಯನ್ನು ಸೆರೆ ಹಿಡಿಯಲು ಬೋನ್ ಇರಿಸಲು ತಿರ್ಮಾನಿಸಿದ್ದಾರೆ. ಚಿರತೆ ಸಂಜೆ ವೇಳೆಗೆ ಕೂಗು ಶಬ್ದವನ್ನು ಕೆಲ ಮಂದಿ ಕೇಳಿದ್ದು ಕಳೆದ ಹಲವು ದಿನಗಳಿಂದ ಚಿರತೆ ಈ ಪ್ರದೇಶದಲ್ಲಿ ಸುತ್ತಾಡುತ್ತಿದೆ ಅಲ್ಲದೇ ಒಂದೇ ನಿರ್ದಿಷ್ಟ ಸ್ಥಳದಲ್ಲಿ ಚಿರತೆ ಇರಾದ ಕಾರಣ ಬೋನ್ ಇರಿಸಲು ಅರಣ್ಯ ಇಲಾಖೆ ಸಿಬ್ಬಂದಿಗಳನ್ನು ಹೈರಾಣಿಸಿದೆ. ಈ ಸಂದರ್ಭದಲ್ಲಿ ಅರಣ್ಯ ಪಾಲಕ ನಾಗಲಿಂಗಪ್ಪ ಡಿ., ವಾಹನ ಚಾಲಕ ಕಿಶೋರ್ ಕುಮಾರ್ ಹಾಗೂ ಸ್ಥಳೀಯರಾದ ವಿಜಯ್ ಪುಪಾಡಿಕಲ್ಲು, ಪುರಂದರ ಕಜೆ, ಪತ್ರಕರ್ತ ಮನೀಶ್ ವಿ.ಅಂಚನ್ ಪಾಲೇದು ಮತ್ತಿತರು ಉಪಸ್ಥಿತರಿದ್ದರು.

Related posts

ಉಜಿರೆಯಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿಜಯದಶಮಿ ಪಥಸಂಚಲನ

Suddi Udaya

ದ್ವಿತೀಯ ಪಿಯು ಫಲಿತಾಂಶ: ಅರಸಿನಮಕ್ಕಿ ಪದವಿ ಪೂರ್ವ ಕಾಲೇಜಿಗೆ ಶೇ. 84.6 ಫಲಿತಾಂಶ

Suddi Udaya

ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವತಿಯಿಂದ “ಅನುಭವವನ್ನು ಅನುಭವಿಸಿ” ವಿನೂತನ ಕಾರ್ಯಕ್ರಮ

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರಕ್ಕೆ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಭೇಟಿ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಹೆಗ್ಗಡೆಯವರಿಗೆ ‘ಕರ್ನಾಟಕ ಪರಿವರ್ತನೆಯ ರೂವಾರಿ’ ಗೌರವ ಪ್ರಶಸ್ತಿ: ಸಿರಿ ಸಿಬ್ಬಂದಿಗಳಿಂದ ಅಭಿನಂದನಾ ಕಾರ್ಯಕ್ರಮ

Suddi Udaya

ಕೊಕ್ಕಡ ಪ್ರಾ.ಕೃ.ಪ.ಸ. ಸಂಘದಿಂದ ದಿ. ಪದ್ಮನಾಭ ಆಚಾರ್ಯ ಕುಟುಂಬಕ್ಕೆ ಧನ ಸಹಾಯ ಹಸ್ತಾಂತರ

Suddi Udaya
error: Content is protected !!