July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬದ್ಯಾರು ಮನೆಯಂಗಳದಲ್ಲಿ ನಾಗರಹಾವುಗಳ ಕಾದಾಟ: ಲಾಯಿಲದ ಸ್ನೇಕ್ ಅಶೋಕ್ ರಿಂದ ರಕ್ಷಣೆ

ಬೆಳ್ತಂಗಡಿ: ಮನೆಯೊಂದರ ಅಂಗಳದಲ್ಲಿ ಎರಡು ನಾಗರಹಾವುಗಳು ಪರಸ್ಪರ ಕಾದಾಟ ನಡೆಸಿದ ಘಟನೆ
ಗುರುವಾಯನಕೆರೆ ಸಮೀಪದ ಬದ್ಯಾರು ಎಂಬಲ್ಲಿ ಜ.8 ರಂದು ಮಧ್ಯಾಹ್ನ ನಡೆದಿದೆ.

ಕಾದಾಟದಲ್ಲಿ ಒಂದು ಹಾವು ಗಾಯಗೊಂಡಿದೆ. ಮಧ್ಯಾಹ್ನ ವೇಳೆ ಮನೆ ಅಂಗಳಕ್ಕೆ ಬಂದ ಎರಡು ಹಾವುಗಳು ಏಕಾಏಕಿ ದಾಳಿ ನಡೆಸುತ್ತಿದ್ದನ್ನು ಗಮನಿಸಿದ ಮನೆಯವರು ಉರಗ ರಕ್ಷಕ ಸ್ನೇಕ್ ಅಶೋಕ್ ಲಾಯಿಲ ಅವರನ್ನು ಸಂಪರ್ಕಿಸಿದ್ದರು. ಸ್ಥಳಕ್ಕೆ ಆಗಮಿಸಿದ ಅವರು ಹಾವುಗಳ ಕಾದಾಟವನ್ನು ತಪ್ಪಿಸಿ ಎರಡು ಹಾವುಗಳನ್ನು ಸುರಕ್ಷಿತವಾಗಿ ಹಿಡಿದು ಅರಣ್ಯಕ್ಕೆ ಸೇರಿಸಿದ್ದಾರೆ. ಹಾವುಗಳು ಕಾದಾಟ ನಡೆಸಿದ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಹಿಡಿಯಲಾಗಿದೆ. ಈ ಸಮಯ ಹಾವುಗಳ ಮಿಲನ ಕಾಲವಾಗಿದ್ದು ಗಂಡು ಹಾವಿನ ಹುಡಾಕಾಟದಲ್ಲಿ ಎರಡು ಹೆಣ್ಣು ಹಾವುಗಳು ಕಾದಾಟ ನಡೆಸಿದೆ. ಅಂದಾಜು 5
4-5ಅಡಿ ಉದ್ದ ವರೆಗೆ ಈ ಎರಡು ಹಾವುಗಳು ಗಾತ್ರವಿತ್ತು ಎಂದು ಅಶೋಕ್ ಸುದ್ದಿ ಉದಯಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

Related posts

ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ನಿವೃತ್ತ ಕೆ. ಜಯಕೀರ್ತಿ ಜೈನ್ ರವರಿಗೆ ಬೆಳ್ತಂಗಡಿ ಸರಕಾರಿ ನೌಕರರ ಸಂಘದಿಂದ ಸನ್ಮಾನ

Suddi Udaya

ಕಲ್ಮoಜದಲ್ಲಿ ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರ ಉದ್ಘಾಟನೆ

Suddi Udaya

ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯಿಂದ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಇರ್ವತ್ತೂರು ಭಾಸ್ಕರ್ ಎಸ್ ಕೋಟ್ಯಾನ್ ರವರಿಗೆ ಅಭಿನಂದನೆ

Suddi Udaya

ಮಲವಂತಿಗೆ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಣಕು ಸಂಸತ್ತು ಅಧಿವೇಶನ.

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ಕ್ವಾಟ್ರಸ್ ನಲ್ಲಿ ಬಾಲಕ ಆತ್ಮಹತ್ಯೆ

Suddi Udaya
error: Content is protected !!