ಉಜಿರೆ: ಉಜಿರೆ ಗ್ರಾಮದ ಕಲ್ಲೆ, ಅಜಿತ್ ನಗರದಲ್ಲಿರುವ ಶ್ರೀ ವನದುರ್ಗಾ ಶ್ರೀ ನಾಗರಕ್ತೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ ದುರ್ಗಾಪೂಜೆ, ಆಶ್ಲೇಷ ಬಲಿ, ರಂಗಪೂಜೆ ವೇದಮೂರ್ತಿ ಪಿ.ಆರ್. ಯಡಪಡಿತ್ತಾಯ ರವರ ಪೌರೋಹಿತ್ಯದಲ್ಲಿ ವಿವಿಧ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ವಿಜೃಂಭಣೆಯಿಂದ ನಡೆಯಿತು.

ಜ.8 ರಂದು ಸಂಜೆ ಪ್ರಾರ್ಥನೆ, ದುರ್ಗಾಪೂಜೆ , ಮಹಾಪೂಜೆ, ಆರಾಧನೆ, ತೀರ್ಥ ಪ್ರಸಾದ, ಅನ್ನಸಂತರ್ಪಣೆ , ಜ.9ರಂದು ಪ್ರಾತಃಕಾಲ ಪುಣ್ಯಾಹ, ಕಲಶ ಪ್ರತಿಷ್ಠೆ, ಬೆಳಿಗ್ಗೆ ಗಣಪತಿ ಹೋಮ, ಕಲಷಾಭಿಷೇಕ, ಪರ್ವಾರಾಧನೆ, ದುರ್ಗಾಹೋಮ ಪೂರ್ಣಾಹುತಿ, ‘ಆಶ್ಲೇಷಬಲಿ’ ಆರಂಭ, ಮಧ್ಯಾಹ್ನ ಮಹಾಪೂಜೆ, ಬ್ರಾಹ್ಮಣ ವಟು ಆರಾಧನೆ, ತೀರ್ಥ ಪ್ರಸಾದ , ಸಂಜೆ ಸಂಕಲ್ಪ, ರಂಗಪೂಜೆ ಆರಂಭ, ರಾತ್ರಿ ಮಹಾಮಂಗಳಾರತಿ, ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಿತು.
ಈ ವೇಳೆ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ ಕೆ. ಮೋಹನ್ ಕುಮಾರ್ ಅವರ ಸೇವೆಯಿಂದ ಕ್ಷೇತ್ರವು ಹೂಗಳಿಂದ ಅಲಂಕೃತಗೊಂಡು ಕಂಗೊಳಿಸುತ್ತಿತ್ತು.
ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರದ ಗಣ್ಯರು, ಭಕ್ತರು ಭಾಗವಹಿಸಿ ದೇವರ ಪ್ರಸಾದವನ್ನು ಸ್ವೀಕರಿಸಿದರು.
ಇಂದು ( ಜ.10) ಸಂಜೆ ಪ್ರಾರ್ಥನೆ, ರಾತ್ರಿ ಮಹಿಷಾಂತಾಯ, ರಕ್ತೇಶ್ವರಿ, ಕಲ್ಲುರ್ಟಿ, ಪಂಜುರ್ಲಿ ಗುಳಿಗ ದೈವಗಳಿಗೆ ನರ್ತನ ಸೇವೆ ಜರುಗಲಿರುವುದು. ರಾತ್ರಿ ಭಕ್ತರಿಗೆ ಅನ್ನಸಂತರ್ಪಣೆ, ಫಲಾಹಾರ ವ್ಯವಸ್ಥೆ ಕಲ್ಪಿಸಲಾಗಿದೆ.











