September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಶ್ರೀ ವನದುರ್ಗಾ ಶ್ರೀ ನಾಗರಕ್ತೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ದುರ್ಗಾಪೂಜೆ, ಆಶ್ಲೇಷ ಬಲಿ, ರಂಗಪೂಜೆ

ಉಜಿರೆ: ಉಜಿರೆ ಗ್ರಾಮದ ಕಲ್ಲೆ, ಅಜಿತ್ ನಗರದಲ್ಲಿರುವ ಶ್ರೀ ವನದುರ್ಗಾ ಶ್ರೀ ನಾಗರಕ್ತೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ ದುರ್ಗಾಪೂಜೆ, ಆಶ್ಲೇಷ ಬಲಿ, ರಂಗಪೂಜೆ ವೇದಮೂರ್ತಿ ಪಿ.ಆರ್. ಯಡಪಡಿತ್ತಾಯ ರವರ ಪೌರೋಹಿತ್ಯದಲ್ಲಿ ವಿವಿಧ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ವಿಜೃಂಭಣೆಯಿಂದ ನಡೆಯಿತು.

ಜ.8 ರಂದು ಸಂಜೆ ಪ್ರಾರ್ಥನೆ, ದುರ್ಗಾಪೂಜೆ , ಮಹಾಪೂಜೆ, ಆರಾಧನೆ, ತೀರ್ಥ ಪ್ರಸಾದ, ಅನ್ನಸಂತರ್ಪಣೆ , ಜ.9ರಂದು ಪ್ರಾತಃಕಾಲ ಪುಣ್ಯಾಹ, ಕಲಶ ಪ್ರತಿಷ್ಠೆ, ಬೆಳಿಗ್ಗೆ ಗಣಪತಿ ಹೋಮ, ಕಲಷಾಭಿಷೇಕ, ಪರ್ವಾರಾಧನೆ, ದುರ್ಗಾಹೋಮ ಪೂರ್ಣಾಹುತಿ, ‘ಆಶ್ಲೇಷಬಲಿ’ ಆರಂಭ, ಮಧ್ಯಾಹ್ನ ಮಹಾಪೂಜೆ, ಬ್ರಾಹ್ಮಣ ವಟು ಆರಾಧನೆ, ತೀರ್ಥ ಪ್ರಸಾದ , ಸಂಜೆ ಸಂಕಲ್ಪ, ರಂಗಪೂಜೆ ಆರಂಭ, ರಾತ್ರಿ ಮಹಾಮಂಗಳಾರತಿ, ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಿತು.

ಈ ವೇಳೆ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ ಕೆ. ಮೋಹನ್ ಕುಮಾರ್ ಅವರ ಸೇವೆಯಿಂದ ಕ್ಷೇತ್ರವು ಹೂಗಳಿಂದ ಅಲಂಕೃತಗೊಂಡು ಕಂಗೊಳಿಸುತ್ತಿತ್ತು.

ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರದ ಗಣ್ಯರು, ಭಕ್ತರು ಭಾಗವಹಿಸಿ ದೇವರ ಪ್ರಸಾದವನ್ನು ಸ್ವೀಕರಿಸಿದರು.


ಇಂದು ( ಜ.10) ಸಂಜೆ ಪ್ರಾರ್ಥನೆ, ರಾತ್ರಿ ಮಹಿಷಾಂತಾಯ, ರಕ್ತೇಶ್ವರಿ, ಕಲ್ಲುರ್ಟಿ, ಪಂಜುರ್ಲಿ ಗುಳಿಗ ದೈವಗಳಿಗೆ ನರ್ತನ ಸೇವೆ ಜರುಗಲಿರುವುದು. ರಾತ್ರಿ ಭಕ್ತರಿಗೆ ಅನ್ನಸಂತರ್ಪಣೆ, ಫಲಾಹಾರ ವ್ಯವಸ್ಥೆ ಕಲ್ಪಿಸಲಾಗಿದೆ.

Related posts

ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ವ್ಯಾಪ್ತಿಯ ಪ್ರಮುಖರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಚುನಾವಣಾ ಪ್ರಚಾರ

Suddi Udaya

ಮರೋಡಿ ಗ್ರಾ.ಪಂ ನೂತನ ಅಧ್ಯಕ್ಷರಾಗಿ ಯುವ ನಾಯಕ ರತ್ನಾಕರ ಬುಣ್ಣನ್ , ಉಪಾಧ್ಯಕ್ಷರಾಗಿ ಶುಭರಾಜ್ ಹೆಗ್ಡೆ ಅವಿರೋಧವಾಗಿ ಆಯ್ಕೆ

Suddi Udaya

ಕೂಟ ಮಹಾ ಜಗತ್ತು ಬೆಳ್ತಂಗಡಿ ಅಂಗಸಂಸ್ಥೆಯ ಮಹಿಳಾ ವೇದಿಕೆಯಿಂದ ಆಟಿಕೂಟ ಆಚರಣೆ

Suddi Udaya

ಅಳದಂಗಡಿ: ಉಚಿತ ನೇತ್ರ ಚಿಕಿತ್ಸಾ ಶಿಬಿರ

Suddi Udaya

ಅಪಘಾತದಲ್ಲಿ ನಿಧನರಾದ ನಾವೂರು ಸ.ಹಿ.ಪ್ರಾ. ಶಾಲಾ ವಿದ್ಯಾರ್ಥಿ ಶಾಝಿನ್ ರವರಿಗೆ ಶ್ರದ್ಧಾಂಜಲಿ

Suddi Udaya

ಬಂಗಾಡಿ ಶ್ರೀ ವೀರಭದ್ರ ಭದ್ರಕಾಳಿ ಲಿಂಗತ್ಯಾರ್ ನಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya
error: Content is protected !!