July 23, 2026
ಅಪಘಾತಗ್ರಾಮಾಂತರ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ: ಸಂಚರಿಸುತ್ತಿದ್ದ ಲಾರಿಗೆ ಆಕಸ್ಮಿಕ ಬೆಂಕಿ ಸಂಪೂರ್ಣ ಸುಟ್ಟು ಹೋದ ಮೆಕ್ಕೆಜೋಳದ ಲಾರಿ

ಬೆಳ್ತಂಗಡಿ : ಮೆಕ್ಕೆಜೋಳ ಸಾಗಿಸುತ್ತಿದ್ದ ಲಾರಿಗೆ ಅಕಸ್ಮಿಕ ಲಾರಿಗೆ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಹೋದ ಘಟನೆ ಚಾರ್ಮಾಡಿ ಘಾಟಿಯಲ್ಲಿ ನಡೆದಿದೆ.

ಚಿಕ್ಕಮಗಳೂರಿನಿಂದ ಮೂಡಬಿದಿರೆ ಕಡೆಗೆ ಮೆಕ್ಕೆಜೋಳದ ಲೋಡು ತೆಗೆದುಕೊಂಡು ಹೋಗುತ್ತಿದ್ದ KA-13-AA-4758 ನಂಬರಿನ ಲಾರಿ ಜ.9 ರಂದು ಮಧ್ಯರಾತ್ರಿ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟಿಯ ಎರಡನೇ ತಿರುವಿನಲ್ಲಿ ಅಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಘಟನೆ ವೇಳೆ ಲಾರಿಯಲ್ಲಿದ್ದ ಚಾಲಕ ಸೇರಿ ಮೂವರು ಲಾರಿಯಿಂದ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ. ಲಕ್ಷಾಂತರ ರೂಪಾಯಿ ಮೌಲ್ಯದ ಮೆಕ್ಕೆಜೋಳ ಬೆಂಕಿಗಾಹುತಿಯಾಗಿದೆ. ಈ ಹೊಸ ಲಾರಿ ಮಾಲೀಕರಿಗೆ ಬಂದು 40 ದಿನವಾಗಿದೆ ಅಷ್ಟೇ.

ಘಟನೆ ಬಗ್ಗೆ ಮಾಹಿತಿ ತಿಳಿದು ಸ್ಥಳೀಯ ಯವಕರು ಬೆಳ್ತಂಗಡಿ ಅಗ್ನಿಶಾಮಕ ದಳ ಮತ್ತು ಬೆಳ್ತಂಗಡಿ ಸಂಚಾರಿ ಪೊಲೀಸರಿಗೆ ಮಾಹಿತಿ ನೀಡಿದ್ದು‌. ಸ್ಥಳಕ್ಕೆ ಆಗಮಿಸಿ ಲಾರಿ ನಂದಿಸಲು ಸಹಕಾರಿಸಿದ್ದಾರೆ. ಬಳಿಕ ಸುಗಮ ಸಂಚಾರಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸರು ಕ್ರಮ ಕೈಗೊಂಡರು. ಲಾರಿ ಬೆಂಕಿಗಾಹುತಿಯಾದ ವಿಡಿಯೋಗಳು ವೈರಲ್ ಅಗಿದೆ.

Related posts

ಬದ್ಯಾರು ಶ್ರೀ ಲೋಕನಾಥೇಶ್ವರ ದೇವರ ಜಾತ್ರಾ ಮಹೋತ್ಸವದ ಪ್ರಯುಕ್ತ ಚಪ್ಪರ ಮುಹೂರ್ತ

Suddi Udaya

ವೇಣೂರು ಪೊಲೀಸ್ ಠಾಣಾ ಪಿಎಸ್ಐ ಆಗಿ ಅಕ್ಷಯ್ ಡಿ ನೇಮಕ

Suddi Udaya

ಬೆಳ್ತಂಗಡಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಉಜಿರೆ: ಎಸ್.ಡಿ.ಎಂ ವಸತಿ ಪ.ಪೂ. ಕಾಲೇಜಿನ ಪ್ರಥಮ ಪ.ಪೂ. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಕಾರ್ಯಕ್ರಮ

Suddi Udaya

ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಖ್ಯಾತ ಚಲನಚಿತ್ರ ನಿರ್ಮಾಪಕ ಆರ್ ಶ್ರೀನಿವಾಸ್ ಭೇಟಿ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ

Suddi Udaya
error: Content is protected !!