23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪಘಾತಗ್ರಾಮಾಂತರ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ: ಸಂಚರಿಸುತ್ತಿದ್ದ ಲಾರಿಗೆ ಆಕಸ್ಮಿಕ ಬೆಂಕಿ ಸಂಪೂರ್ಣ ಸುಟ್ಟು ಹೋದ ಮೆಕ್ಕೆಜೋಳದ ಲಾರಿ

ಬೆಳ್ತಂಗಡಿ : ಮೆಕ್ಕೆಜೋಳ ಸಾಗಿಸುತ್ತಿದ್ದ ಲಾರಿಗೆ ಅಕಸ್ಮಿಕ ಲಾರಿಗೆ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಹೋದ ಘಟನೆ ಚಾರ್ಮಾಡಿ ಘಾಟಿಯಲ್ಲಿ ನಡೆದಿದೆ.

ಚಿಕ್ಕಮಗಳೂರಿನಿಂದ ಮೂಡಬಿದಿರೆ ಕಡೆಗೆ ಮೆಕ್ಕೆಜೋಳದ ಲೋಡು ತೆಗೆದುಕೊಂಡು ಹೋಗುತ್ತಿದ್ದ KA-13-AA-4758 ನಂಬರಿನ ಲಾರಿ ಜ.9 ರಂದು ಮಧ್ಯರಾತ್ರಿ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟಿಯ ಎರಡನೇ ತಿರುವಿನಲ್ಲಿ ಅಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಘಟನೆ ವೇಳೆ ಲಾರಿಯಲ್ಲಿದ್ದ ಚಾಲಕ ಸೇರಿ ಮೂವರು ಲಾರಿಯಿಂದ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ. ಲಕ್ಷಾಂತರ ರೂಪಾಯಿ ಮೌಲ್ಯದ ಮೆಕ್ಕೆಜೋಳ ಬೆಂಕಿಗಾಹುತಿಯಾಗಿದೆ. ಈ ಹೊಸ ಲಾರಿ ಮಾಲೀಕರಿಗೆ ಬಂದು 40 ದಿನವಾಗಿದೆ ಅಷ್ಟೇ.

ಘಟನೆ ಬಗ್ಗೆ ಮಾಹಿತಿ ತಿಳಿದು ಸ್ಥಳೀಯ ಯವಕರು ಬೆಳ್ತಂಗಡಿ ಅಗ್ನಿಶಾಮಕ ದಳ ಮತ್ತು ಬೆಳ್ತಂಗಡಿ ಸಂಚಾರಿ ಪೊಲೀಸರಿಗೆ ಮಾಹಿತಿ ನೀಡಿದ್ದು‌. ಸ್ಥಳಕ್ಕೆ ಆಗಮಿಸಿ ಲಾರಿ ನಂದಿಸಲು ಸಹಕಾರಿಸಿದ್ದಾರೆ. ಬಳಿಕ ಸುಗಮ ಸಂಚಾರಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸರು ಕ್ರಮ ಕೈಗೊಂಡರು. ಲಾರಿ ಬೆಂಕಿಗಾಹುತಿಯಾದ ವಿಡಿಯೋಗಳು ವೈರಲ್ ಅಗಿದೆ.

Related posts

ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ನೂತನ ಅಧ್ಯಕ್ಷರಾಗಿ ಇಸ್ಮಾಯಿಲ್ ಐ.ಬಿ

Suddi Udaya

ರೆಖ್ಯ: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು: 6 ಮಂದಿಗೆ ಗಂಭೀರ ಗಾಯ

Suddi Udaya

ಕಳೆಂಜ: ನಡುಜರು ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ರಾಜೇಶ್ ಎಮ್.ಕೆ

Suddi Udaya

ನಾರಾವಿ ಸಂತ ಅಂತೋನಿ ಪ.ಪೂ. ಕಾಲೇಜಿನಲ್ಲಿ ವನಮಹೋತ್ಸವ ಕಾರ್ಯಕ್ರಮ

Suddi Udaya

ಗೇರುಕಟ್ಚೆ ಮುಖ್ಯ ರಸ್ತೆಯಲ್ಲಿ ಕೃತಕ ನೆರೆ

Suddi Udaya

ನ.23 : ವಿಮುಕ್ತಿ ಸ್ವ-ಸಹಾಯ ಸಂಘಗಳ ಟ್ರಸ್ಟ್ ಲಾಯಿಲ ಇದರ ಬೆಳ್ಳಿ ಹಬ್ಬ ಸಂಭ್ರಮ

Suddi Udaya
error: Content is protected !!