September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದಕ್ಷಿಣ ಆಫ್ರಿಕಾದಲ್ಲಿ ಅಂತ್ಯಕ್ರಿಯೆವಾಗಲಿದ್ದ ಲಾಯಿಲದ ದಾಮೋದರ ಗೌಡ ರವರ ಮೃತದೇಹವನ್ನು ಊರಿಗೆ ತರುವಲ್ಲಿ ಸಹಕರಿಸಿದ ಸಂಸದ ಕ್ಯಾ| ಬ್ರಿಜೇಶ್ ಚೌಟ ಮತ್ತು ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ : ಲಾಯಿಲ ಗ್ರಾಮದ ದಾಮೋದರ ಗೌಡ ಇವರು ಮಧ್ಯ ಆಫ್ರಿಕಾದ ಕ್ಯಾಮರೂನ್ ದೇಶದಲ್ಲಿ ಕಳೆದ ಹಲವಾರು ವರ್ಷಗಳಿಂದ ಉದ್ಯೋಗದಲ್ಲಿದ್ದರು, ಕಳೆದ ಡಿಸೆಂಬರ್ 28 ರಂದು ಹೃದಯಾಘಾತದಿಂದ ನಿಧನರಾದರು.
ಆದರೆ ಗೊತ್ತು ಪರಿಚಯ ಇಲ್ಲದ ಪರದೇಶದಿಂದ ಮೃತ ದೇಹ ಮನೆಗೆ ತರುವುದು ಹೇಗೆ ಎಂಬ ವೇದನೆ ಮನೆಯವರಿಗೆ. ಈ ಸಮಯದಲ್ಲಿ ನೆರವಿಗೆ ಬಂದವರು ದಕ್ಷಿಣ ಕನ್ನಡ ಜಿಲ್ಲೆಯ ಸಂಸದರಾದ ಬ್ರಿಜೇಶ್ ಚೌಟರವರು. ಸಂಸದರನ್ನು ಫೋನ್ ಕರೆಯ ಮೂಲಕ ಸಂಪರ್ಕಿಸಿ ಪರಿಸ್ಥಿತಿಯನ್ನು ವಿವರಿಸಿದಾಗ, ಕೂಡಲೇ ಸ್ಪಂದಿಸಿ ಅಲ್ಲಿನ ರಾಯಭಾರ ಕಚೇರಿ ಜೊತೆ ಸಂಪರ್ಕ ಸಾಧಿಸಿ ದೇಹವನ್ನು ಆದಷ್ಟು ಬೇಗ ಊರಿಗೆ ತಲುಪಲು ಸಹಾಯ ಮಾಡಿದರು.

ಅಲ್ಲಿನ ವೈದ್ಯಕೀಯ ವೆಚ್ಚ, ವಿಮಾನದ ವೆಚ್ಚ ಮತ್ತಿತರ ಖರ್ಚುಗಳನ್ನು ಭರಿಸಲು ಕುಟುಂಬ ಸಾದ್ಯವಾಗಲಿಲ್ಲ. ಆ ಸಮಯದಲ್ಲಿ ಅಲ್ಲಿ ನೆಲೆಸಿರುವ ಭಾರತೀಯ ಬಂಧುಗಳು ಬಹಳಷ್ಟು ಸಹಾಯಹಸ್ತ ನೀಡಿ ಸುಮಾರು ರೂ.8ಲಕ್ಷಕ್ಕೂ ಹೆಚ್ಚು ಹಣದ ಅವಶ್ಯಕತೆಯನ್ನು ನಿಭಾಯಿಸಿ ಮೃತದೇಹವನ್ನು ವಿಮಾನದ ಮೂಲಕ ಬೆಂಗಳೂರಿಗೆ ಕಳುಹಿಸಿದರು.

ಬೆಂಗಳೂರಿನಿಂದ ಪುನಃ ಅಂಬ್ಯುಲೆನ್ಸ್ ಮೂಲಕ ತರಲು ಕುಟುಂಬದವರಿಗೆ ಕಷ್ಟವಾದಾಗ ನೆರವಿಗೆ ಬಂದವರು ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು. ಮನೆಯವರ ಅಸಹಾಯಕತೆಯನ್ನು ಅರಿತ ಶಾಸಕರು ಅಂಬ್ಯುಲೆನ್ಸ್ ವ್ಯವಸ್ಥೆಯ ಜವಾಬ್ದಾರಿ ಹೊತ್ತರು. ಈ‌ ಮೂಲಕ ವಿದೇಶದಲ್ಲಿ ನಿಧನರಾದ ದಾಮೋದರರ ಮೃತ ದೇಹ ಊರಿಗೆ ತರುವಲ್ಲಿ ಸಹಕರಿಸಿದ ಸಂಸದ ಮತ್ತು ಶಾಸಕರಿಗೆ ಕುಟುಂಬದ ಪರವಾಗಿ ಧನ್ಯವಾದವನ್ನು ತಿಳಿಸಿದ್ದಾರೆ.

Related posts

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ಪದವಿ ವಿಭಾಗದ ವಿದ್ಯಾರ್ಥಿ‌‌ಸಂಘ ಉದ್ಘಾಟನಾ ಸಮಾರಂಭದೊಂದಿಗೆ ಸ್ವಾಗತ ಕಾರ್ಯಕ್ರಮ

Suddi Udaya

ಭರತನಾಟ್ಯ ಶಾಸ್ತ್ರೀಯ ನೃತ್ಯದ ಜೂನಿಯರ್ ಗ್ರೇಡ್ ಪರೀಕ್ಷೆ: ಮಡಂತ್ಯಾರು ನಿಯತಿ ನೃತ್ಯ ನಿಕೇತನ ವಿದ್ಯಾರ್ಥಿನಿಯರು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಮಚ್ಚಿನ ಸರಕಾರಿ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya

ವಿ.ಹಿಂ.ಪ. ಭಜರಂಗದಳ ಮದ್ದಡ್ಕ ಘಟಕ ವತಿಯಿಂದ ಅಶಕ್ತ ಕುಟುಂಬಕ್ಕೆ ಧನ ಸಹಾಯ ವಿತರಣೆ

Suddi Udaya

ಬೆಳ್ತಂಗಡಿ: “ಗೃಹಜ್ಯೋತಿ ಹೆಚ್ಚುವರಿ ಮಾಹಿತಿ ಸಂಗ್ರಹಣೆಯ” ಪ್ರಗತಿ ಸಭೆ

Suddi Udaya

ನಡ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya
error: Content is protected !!