July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದಕ್ಷಿಣ ಆಫ್ರಿಕಾದಲ್ಲಿ ಅಂತ್ಯಕ್ರಿಯೆವಾಗಲಿದ್ದ ಲಾಯಿಲದ ದಾಮೋದರ ಗೌಡ ರವರ ಮೃತದೇಹವನ್ನು ಊರಿಗೆ ತರುವಲ್ಲಿ ಸಹಕರಿಸಿದ ಸಂಸದ ಕ್ಯಾ| ಬ್ರಿಜೇಶ್ ಚೌಟ ಮತ್ತು ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ : ಲಾಯಿಲ ಗ್ರಾಮದ ದಾಮೋದರ ಗೌಡ ಇವರು ಮಧ್ಯ ಆಫ್ರಿಕಾದ ಕ್ಯಾಮರೂನ್ ದೇಶದಲ್ಲಿ ಕಳೆದ ಹಲವಾರು ವರ್ಷಗಳಿಂದ ಉದ್ಯೋಗದಲ್ಲಿದ್ದರು, ಕಳೆದ ಡಿಸೆಂಬರ್ 28 ರಂದು ಹೃದಯಾಘಾತದಿಂದ ನಿಧನರಾದರು.
ಆದರೆ ಗೊತ್ತು ಪರಿಚಯ ಇಲ್ಲದ ಪರದೇಶದಿಂದ ಮೃತ ದೇಹ ಮನೆಗೆ ತರುವುದು ಹೇಗೆ ಎಂಬ ವೇದನೆ ಮನೆಯವರಿಗೆ. ಈ ಸಮಯದಲ್ಲಿ ನೆರವಿಗೆ ಬಂದವರು ದಕ್ಷಿಣ ಕನ್ನಡ ಜಿಲ್ಲೆಯ ಸಂಸದರಾದ ಬ್ರಿಜೇಶ್ ಚೌಟರವರು. ಸಂಸದರನ್ನು ಫೋನ್ ಕರೆಯ ಮೂಲಕ ಸಂಪರ್ಕಿಸಿ ಪರಿಸ್ಥಿತಿಯನ್ನು ವಿವರಿಸಿದಾಗ, ಕೂಡಲೇ ಸ್ಪಂದಿಸಿ ಅಲ್ಲಿನ ರಾಯಭಾರ ಕಚೇರಿ ಜೊತೆ ಸಂಪರ್ಕ ಸಾಧಿಸಿ ದೇಹವನ್ನು ಆದಷ್ಟು ಬೇಗ ಊರಿಗೆ ತಲುಪಲು ಸಹಾಯ ಮಾಡಿದರು.

ಅಲ್ಲಿನ ವೈದ್ಯಕೀಯ ವೆಚ್ಚ, ವಿಮಾನದ ವೆಚ್ಚ ಮತ್ತಿತರ ಖರ್ಚುಗಳನ್ನು ಭರಿಸಲು ಕುಟುಂಬ ಸಾದ್ಯವಾಗಲಿಲ್ಲ. ಆ ಸಮಯದಲ್ಲಿ ಅಲ್ಲಿ ನೆಲೆಸಿರುವ ಭಾರತೀಯ ಬಂಧುಗಳು ಬಹಳಷ್ಟು ಸಹಾಯಹಸ್ತ ನೀಡಿ ಸುಮಾರು ರೂ.8ಲಕ್ಷಕ್ಕೂ ಹೆಚ್ಚು ಹಣದ ಅವಶ್ಯಕತೆಯನ್ನು ನಿಭಾಯಿಸಿ ಮೃತದೇಹವನ್ನು ವಿಮಾನದ ಮೂಲಕ ಬೆಂಗಳೂರಿಗೆ ಕಳುಹಿಸಿದರು.

ಬೆಂಗಳೂರಿನಿಂದ ಪುನಃ ಅಂಬ್ಯುಲೆನ್ಸ್ ಮೂಲಕ ತರಲು ಕುಟುಂಬದವರಿಗೆ ಕಷ್ಟವಾದಾಗ ನೆರವಿಗೆ ಬಂದವರು ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು. ಮನೆಯವರ ಅಸಹಾಯಕತೆಯನ್ನು ಅರಿತ ಶಾಸಕರು ಅಂಬ್ಯುಲೆನ್ಸ್ ವ್ಯವಸ್ಥೆಯ ಜವಾಬ್ದಾರಿ ಹೊತ್ತರು. ಈ‌ ಮೂಲಕ ವಿದೇಶದಲ್ಲಿ ನಿಧನರಾದ ದಾಮೋದರರ ಮೃತ ದೇಹ ಊರಿಗೆ ತರುವಲ್ಲಿ ಸಹಕರಿಸಿದ ಸಂಸದ ಮತ್ತು ಶಾಸಕರಿಗೆ ಕುಟುಂಬದ ಪರವಾಗಿ ಧನ್ಯವಾದವನ್ನು ತಿಳಿಸಿದ್ದಾರೆ.

Related posts

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಭೇಟಿ

Suddi Udaya

ಕನ್ಯಾಡಿ-2 ಅಂಗನವಾಡಿ ಕೇಂದ್ರದಲ್ಲಿ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ವಾರ್ಷಿಕೋತ್ಸವ ಪ್ರಯುಕ್ತ ಕ್ರೀಡಾ ಕಲರವ ಉದ್ಘಾಟನೆ

Suddi Udaya

ಸುಲ್ಕೇರಿ ಕುಲಾಲ ಕುಂಭಶ್ರೀ ಸಂಘದ ಅಧ್ಯಕ್ಷರಾಗಿ ಜಯ ಮೂಲ್ಯ , ಕಾರ್ಯದರ್ಶಿಯಾಗಿ ರಾಕೇಶ್ ಕುಲಾಲ್ ಆಯ್ಕೆ

Suddi Udaya

ಭಾರತೀಯ ಜೈನ್ ಮಿಲನ್ ನ ಕೆನಡಾ ಘಟಕವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ವೆಬಿನಾರ್ ಮೂಲಕ ಉದ್ಘಾಟನೆ

Suddi Udaya

ಸುದ್ದಿ ಉದಯ ವಾರಪತ್ರಿಕೆಯ ವತಿಯಿಂದ ಮುಳಿಯ ಸಂಸ್ಥೆಯ ಪ್ರಾಯೋಜಕತ್ವದಲ್ಲಿ ಶ್ರೀ ಕೃಷ್ಣಜನ್ಮಾಷ್ಟಮಿ ಪ್ರಯುಕ್ತ ಹಮ್ಮಿಕೊಂಡ ‘ರಾಧೆ-ಕೃಷ್ಣ’ ಪೋಟೋ ಸ್ಪರ್ಧಾ ವಿಜೇತ ಪುಟಾಣಿ ಮಕ್ಕಳಿಗೆ ಬಹುಮಾನ ವಿತರಣೆ

Suddi Udaya
error: Content is protected !!