ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಾಳೆ(ಜ.11): ಗುರುವಾಯನಕೆರೆ ಎಕ್ಸೆಲ್ ಶಿಕ್ಷಣ ಸಂಸ್ಥೆಯಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಮತ್ತು ಪಾಲಕರಿಗೆ ಪರೀಕ್ಷಾ ನಿಮಿತ್ತ ವಿಶೇಷ ಕಾರ್ಯಾಗಾರ:ಎಕ್ಸೆಲ್ ಬೆಳಕು ಫೌಂಡೇಶನ್ಉಚಿತ ಶಿಕ್ಷಣ ಯೋಜನೆ ಬಗ್ಗೆ ವಿಸ್ಕೃತ ಮಾಹಿತಿ ನೀಡಲಿದ್ದೇವೆ: ಸುಮಂತ್ ಕುಮಾರ್ ಜೈನ್:ಬರುವ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ,ಕಾರ್ಯಾಗಾರವೂ ಮಧ್ಯಾಹ್ನ 2:00 ರಿಂದ ಸಂಜೆ 4:30 ರ ವರೆಗೆ ಜರುಗಲಿದೆ

ಗುರುವಾಯನಕೆರೆ; ಗುರುವಾಯನಕೆರೆ ಎಕ್ಸೆಲ್ ಪಿಯು ಕಾಲೇಜಿನಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಮತ್ತು ಪಾಲಕರಿಗೆ ಪರೀಕ್ಷಾ ನಿಮಿತ್ತ ವಿಶೇಷ ಕಾರ್ಯಾಗಾರ ಹಾಗೂ ಎಕ್ಸೆಲ್ ಬೆಳಕು ಫೌಂಡೇಶನ್ಉಚಿತ ಶಿಕ್ಷಣ ಯೋಜನೆ ಬಗ್ಗೆ ವಿಸ್ಕೃತ ಮಾಹಿತಿಯು ಎಕ್ಸೆಲ್ ಕಾಲೇಜಿನ ವಿದ್ಯಾಸಾಗರ ಕ್ಯಾಂಪಸ್ ಸಭಾಂಗಣ ಜ.11ರಂದು ಜರುಗಲಿದೆ ಎಂದು ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ತಿಳಿಸಿದ್ದಾರೆ.

ಈ ವಿಶೇಷ ಕಾರ್ಯಾಗಾರದಲ್ಲಿ 10ನೇ ತರಗತಿ ಪರೀಕ್ಷೆಯಲ್ಲಿ ಟಾಪರ್ ಆಗಲು ಬಯಸುವ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ, 10ನೇ ತರಗತಿ ನಂತರದ ಶೈಕ್ಷಣಿಕ ಅವಕಾಶಗಳ ಬಗ್ಗೆ ವಿಸ್ತ್ರತ ಮಾಹಿತಿ, ಪರೀಕ್ಷಾ ಸಮಯದಲ್ಲಿ ಮಕ್ಕಳ ದಿನಚರಿ ಮತ್ತು ಪಾಲಕರ ಕರ್ತವ್ಯಗಳ ಬಗ್ಗೆ ಮಾಹಿತಿ, ಮಾದರಿ ಪ್ರಶ್ನೆ ಪತ್ರಿಕೆಗಳ ಕಿರಿ ಹೊತ್ತಿಗೆಯ ವಿತರಣೆ, ಶಿಕ್ಷಣ ತಜ್ಞರೊಂದಿಗೆ ಸಂವಾದ ನಡೆಯಲಿರುತ್ತದೆ.

ಮುಖ್ಯ ಅತಿಥಿಗಳಾಗಿ ಯುವ ಸಾಧಕ, ತರಭೇತಿದಾರ ಸ್ಮಿತೇಶ್ ಬಾರ್ಯ ಭಾಗವಹಿಸಲಿದ್ದಾರೆ ಎಂದರು. ವಿಶೇಷ ಸೂಚನೆ: ಬೆಳ್ತಂಗಡಿ, ಮುಂಡಾಜೆ, ಉಜಿರೆ,ಕನ್ಯಾಡಿ, ಬೆಳ್ತಂಗಡಿ, ಪುಂಜಾಲಕಟ್ಟೆ, ಮತ್ತು ಬಿಸಿರೋಡ್ ಭಾಗದಿಂದ ಬರುವ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಹಾಗೂ ಮಧ್ಯಾಹ್ನದ ಊಟ ಹಾಗೂ ಸಂಜೆಯ ಉಪಹಾರದ ವ್ಯವಸ್ಥೆ ಕಲ್ಪಿಸಲಾಗಿದೆ. ಕಾರ್ಯಾಗಾರವೂ ಮಧ್ಯಾಹ್ನ 2:00 ರಿಂದ ಸಂಜೆ 4:30 ರ ವರೆಗೆ ಜರುಗಲಿದೆ ಎಂದು ಅವರು ತಿಳಿಸಿದ್ದಾರೆ.

Related posts

ಅಟ್ಲಾಜೆ ಸರ್ವೋದಯ ಫ್ರೆಂಡ್ಸ್ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಅಟ್ಲಾಜೆ ಇದರ ವತಿಯಿಂದ ಗಣರಾಜ್ಯೋತ್ಸವ ಆಚರಣೆ ಹಾಗೂ ವಾರ್ಷಿಕ ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆಗೆ ಚಾಲನೆ: ಧ್ವಜಾರೋಹಣ, ಉತ್ಸವ ಬಲಿ, ಭಕ್ತರಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಜಲಮಂಗಲ ಕಾರ್ಯಕ್ರಮದಡಿಯಲ್ಲಿ ವಾಟರ್ ಬೆಡ್ ವಿತರಣೆ

Suddi Udaya

ಮಾ.31ರೊಳಗೆ ಶಾಲಾ ಹಳೇ ವಿದ್ಯಾರ್ಥಿಗಳ ಸಂಘ ರಚಿಸುವಂತೆ ಶಿಕ್ಷಣ ಇಲಾಖೆ ಸೂಚನೆ

Suddi Udaya

ಭಾರತ್ ಬ್ಯಾಂಕಿಗೆ 48 ವರ್ಷಗಳ ಸಂಭ್ರಮ: ಬೆಳ್ತಂಗಡಿ ಶಾಖೆಯಲ್ಲಿ ಆಚರಣೆ

Suddi Udaya

ಮುಂಡಾಜೆ ಪ. ಪೂ. ಕಾಲೇಜಿನಲ್ಲಿ ಪೋಷಕರ ಸಭೆ

Suddi Udaya
error: Content is protected !!