July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗಬ್ರಹ್ಮಮಂಡಲೋತ್ಸವ, ಕಾರ್ಯಲಯ ಉದ್ಘಾಟನೆ

ಬೆಳ್ತಂಗಡಿ: ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಸನ್ನಿಧಾನದಲ್ಲಿ ಲೋಕಕಲ್ಯಾಣಾರ್ಥವಾಗಿ ವೇದಮೂರ್ತಿ ಮುಂಡೂರು ಶ್ರೀ ಗೋಪಾಲಕೃಷ್ಣ ತಂತ್ರಿಗಳ ಸಂಕಲ್ಪದಂತೆ ಅಷ್ಟೋತ್ತರ ಶತಸಂಖ್ಯೆ ನಾರಿಕೇಳ ಶ್ರೀ ಮಹಾಗಣಪತಿ ಹವನ, ನಾಗತನುತರ್ಪಣ ಹಾಗೂ ನಾಗಬ್ರಹ್ಮಮಂಡಲ ಸೇವೆಯು ಜ.10, 11 ರಂದು ನಡೆಯಲಿದೆ.

ಈ ವೇಳೆ ನಾಗಬ್ರಹ್ಮಮಂಡಲೋತ್ಸವ ಕಾರ್ಯಲಯವನ್ನು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಪ್ರಧಾನ ಅರ್ಚಕ ಅನಂತ ಇರ್ವತ್ರಾಯ, ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ನಾರಾಯಣ ಪೂಜಾರಿ ಬರಮೇಲು, ಕಾರ್ಯದರ್ಶಿ ಮಧುರ ರಾಘವ ಅತ್ತೋಡಿ, ಕೋಶಾಧಿಕಾರಿ ಹರ್ಷ ಆರ್ ಪಕ್ಕಿದಕಲ, ಮೇಲಂತಬೆಟ್ಟು ಗ್ರಾ.ಪಂ ಉಪಾಧ್ಯಕ್ಷ ಲೋಕನಾಥ ಶೆಟ್ಟಿ, ಪಂಚಾಯತ್ ಸದಸ್ಯರಾದ ಚಂದ್ರರಾಜ್, ಹರ್ಷ ಹೆಚ್.ಆರ್, ಧಾರ್ಮಿಕ ಪರಿಷತ್ ಸದಸ್ಯ ಕೆ.ಎಸ್ ಯೋಗೀಶ್ ಕುಮಾರ್ ನಡಕ್ಕರ, ಸಮಿತಿಯ ಸದಸದಯರಾದ ಜಯಂತಿ ಪಕ್ಕಿದಕಲ, ಗಿರೀಶ್ ಕುಮಾರ್, ಸೋಮಪ್ಪ ಪೂಜಾರಿ, ಬೋಜ ಪೂಜಾರಿ, ಅವಿನಾಶ್ , ರಾಧಾಕೃಷ್ಣ ರೈ ಅಟ್ಲಾಜೆ, ನಾಗೇಶ್ ಮುಡಲ, ಪ್ರದೀಪ್ ಶೆಟ್ಟಿ ವಾತ್ಸಲ್ಯ, ಪುರಂದರ ಶೆಟ್ಟಿ ಪಾಡ್ಯಾರು, ರಮಾನಾಥ ರೈ ಬಳಂಜ, ಯೋಗೀಶ್ ಕುಮಾರ್ ನೂಜೇಲು, ದಯಾನಂದ ಸವಣಾಲು, ಗುರು ಭಟ್, ನೀತ್ ಕುಮಾರ್, ರೂಪ ಮೊದಲಾದವರು, ಭಕ್ತರು ಉಪಸ್ಥಿತರಿದ್ದರು.

ಇಂದು (ಜ.10) ಬೆಳಗ್ಗೆ ಶ್ರೀ ನಾಗಬ್ರಹ್ಮ ದೇವರ ಸನ್ನಿಧಿಯಲ್ಲಿ ಸಾಮೂಹಿಕ ದೇವತಾ ಪ್ರಾರ್ಥನೆ. ಸ್ವಸ್ತಿ ಪುಣ್ಯಾಹ ವಾಚನ, ಸಪ್ತಶುದ್ಧಿ, ಪಂಚಾಮೃತ ಅಭಿಷೇಕ, ಪ್ರಧಾನ ಹೋಮ ಕಲಶಪೂರಣೆ, ಕಲಶಾಭಿಷೇಕ, ಗಣಪತಿ ಅಥರ್ವಶೀರ್ಷ ಪಾರಾಯಣ, ಸ್ಥಳದ ದೈವಗಳಿಗೆ ಕಲಶಾಭಿಷೇಕ, ಪಂಚಪರ್ವ, ಮಧ್ಯಾಹ್ನ ಅಷ್ಟೋತ್ತರ ಶತಸಂಖ್ಯೆ ನಾರಿಕೇಳ ಶ್ರೀ ಮಹಾಗಣಪತಿ ಹವನ ನಡೆಯಿತು.

Related posts

ಭೀಕರ ರಸ್ತೆ ಅಪಘಾತದಲ್ಲಿ ಗಾಯಗೊಂಡು 14 ವರ್ಷ ಜೀವನ್ಮರಣ ಹೋರಾಟ ನಡೆಸಿದ ಶಿಕ್ಷಕಿ ಭಾರತಿ ನಿಧನ

Suddi Udaya

ಪದ್ಮುಂಜ: ವಾಹನ ತಡೆದು ಅವಾಚ್ಯವಾಗಿ ನಿಂದಿಸಿ ಹಲ್ಲೆ : ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಕುಟುಂಬೋತ್ಸವ ಕಾರ್ಯಕ್ರಮ

Suddi Udaya

ಎ.13-22: ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ: ಎ.25 : ಭದ್ರಕಾಳಿ ದೇವಿಯ ಪ್ರತಿಷ್ಠಾ ಮಹೋತ್ಸವ

Suddi Udaya

ಮಹಾಕುಂಭಮೇಳದಲ್ಲಿ ಉಜಿರೆ ಎಸ್.ಡಿ.ಎಂ ಆಸ್ಪತ್ರೆಯ ಸಿಬ್ಬಂದಿಗಳಿಂದ ಪುಣ್ಯ ಸ್ನಾನ

Suddi Udaya

ಶ್ರೀ ಕ್ಷೇತ್ರ ಕೊಲಕಾಡಿಯಿಂದ ಧರ್ಮಸ್ಥಳ ಭೇಟಿ

Suddi Udaya
error: Content is protected !!