July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ಜನಸ್ಪಂದನ ಸಭೆಯ ಫಲಶ್ರುತಿ 108 ಹಕ್ಕು ಪತ್ರ, 54 ಮಂದಿಗೆ ನಡಾವಳಿ ವಿತರಣೆ

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜ ಅವರ ನೇತೃತ್ವದಲ್ಲಿ ಜನರ ಬಳಿಗೆ ತಾಲೂಕು ಮಟ್ಟದ ಆಡಳಿತ ವಿನೂತನ ಪರಿಕಲ್ಪನೆಯ ಜನಸ್ಪಂದನ ಸಭೆಯ ಫಲಶ್ರುತಿಯಾಗಿ ತಾಲೂಕು ಆಡಳಿತ ಸೌಧದಲ್ಲಿ ಅರ್ಹ ಫಲಾನುಭವಿಗಳಿಗೆ 94ಸಿ, 94ಸಿಸಿ ಹಕ್ಕುಪತ್ರಗಳನ್ನು ವಿತರಣಾ ಕಾರ್ಯಕ್ರಮ ಜ.10 ರಂದು ನಡೆಯಿತು.

ತಾಲೂಕಿನ 48 ಗ್ರಾಮ ಪಂಚಾಯತ್ ಹಾಗೂ ಒಂದು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಯಶಸ್ವಿಯಾಗಿ ನಡೆದ ಜನಸ್ಪಂದನ ಸಭೆಯಲ್ಲಿ ಗ್ರಾಮಸ್ಥರು ತಮ್ಮ 94/ಸಿ, ನಡಾವಳಿ ಕಡತಗಳ ವಿಲೇಗೆ ಶಾಸಕರಲ್ಲಿ ವಿನಂತಿಸಿದ್ದರು. ಈ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದ ಶಾಸಕರು ಜನಸ್ಪಂದನ ಸಭೆಯ ಫಲಶ್ರುತಿಯಾಗಿ 108 ಮಂದಿಗೆ ಹಕ್ಕು ಪತ್ರ ಹಾಗೂ 54 ಮುಂದಿಗೆ ನಡವಾಳಿ ನೀಡಲಾಯಿತು.

ಹಕ್ಕು ಪತ್ರ ವಿತರಿಸಿ ಮಾತನಾಡಿದ ಶಾಸಕ ಹರೀಶ್ ಪೂಂಜ ಕಳೆದ ಮೂರು ತಿಂಗಳಿಂದ ನಿರಂತರವಾಗಿ ತಾಲೂಕಿನ 48 ಗ್ರಾಮ ಪಂಚಾಯತ್ ನಲ್ಲಿ ಆಯೋಜಿಸಿದ ಜನಸ್ಪಂದನ ಸಭೆಯಲ್ಲಿ ಜನರಿಂದ 94ಸಿ ವಿತರಣೆಗೊಳಿಸಲು ಅಡ್ಡಿಯಾಗಿರುವ ಸಮಸ್ಯೆಗಳ ಬಗ್ಗೆ ದೂರುಗಳು ಬಂದಿದ್ದು ಮುಂದೆ ಈ ಬಗ್ಗೆ ಅಧಿಕಾರಿಗಳಿಗೆ ಸ್ಥಳ ತನಿಖೆ ನಡೆಸಲು ಸೂಚಿಸಲಾಗಿತ್ತು. ಕೆಲ ಕಡತಗಳಲ್ಲಿ ಅರಣ್ಯದ ಎನ್ ಒಸಿ ನೀಡುವಂತೆ ಅರಣ್ಯಾಧಿಕಾರಿಗಳಿಗೆ ಸೂಚನೆ ನೀಡಲಾಗಿತ್ತು. ಇದರ ಪ್ರತಿಫಲವಾಗಿ ಇಂದು 108 ಮುಂದಿಗೆ ಹಕ್ಕು ಪತ್ರ ಹಾಗೂ 54 ಮುಂದಿಗೆ ನಡವಾಳಿ ನೀಡಲಾಗಿದೆ. ರಾಜ್ಯದಲ್ಲಿಯೇ 32 ಇಲಾಖೆಗಳ ಅಧಿಕಾರಿಗಳೊಂದಿಗೆ ಗ್ರಾಮ ಪಂಚಾಯತ್ ಮಟ್ಟದಲ್ಲಿ ಜನಸ್ಪಂದನ ಸಭೆ ನಡೆದಿರುವುದು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಪ್ರಪ್ರಥಮವಾಗಿದೆ ಎಂದು ಹೇಳಿದ ಶಾಸಕರು ಕಡತಗಳ ವಿಲೇಗೆ ಕ್ರಮ ವಹಿಸಿದ ಅಧಿಕಾರಿಗೆ ಅಭಿನಂದನೆ ಸಲ್ಲಿಸಿದರು.

ಗ್ರಾಮ ಪಂಚಾಯತ್ ಅಧ್ಯಕ್ಷರುಗಳಾದ ಮಲವಂತಿಗೆಯ ಪ್ರಕಾಶ್ ಜೈನ್ ಎಳನೀರು, ಪಟ್ರಮೆಯ ಮನೋಜ್, ಕುಕ್ಕೇಡಿಯ ಅನಿತಾ ಕೆ. ಹಾಗೂ ಉಪ ತಹಶೀಲ್ದಾರ್ ಜಯ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಶ್ರೀ ಧ.ಮ. ಆಂ.ಮಾ. ಶಾಲೆ ಧರ್ಮಸ್ಥಳದ ಜಂಟಿ ಆಶ್ರಯದಲ್ಲಿ ಸ್ಕೌಟ್ಸ್ ಗೈಡ್ಸ್ ಕಬ್ ಬುಲ್ ಬುಲ್ ಪೂರ್ವ ಸಿದ್ಧತಾ ಪರೀಕ್ಷಾ ಶಿಬಿರ

Suddi Udaya

ಸಾಮಾಜಿಕ ಜಾಲ ತಾಣದಲ್ಲಿ ಅಪರಾಧಿಕ ಕೃತ್ಯಗಳನ್ನು ನಡೆಸಲು ದುಷ್ಪ್ರೇರಣೆ-ಜನರ ನಡುವೆ ವೈಮನಸ್ಸು ಉಂಟಾಗುವಂತಹ ಹೇಳಿಕೆಗಳ ಪ್ರಚಾರ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಗಿರೀಶ್ ಮಟ್ಟಣ್ಣನವರ್ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಶಾಲಾ ಮಕ್ಕಳಿಗೆ ಬರೆಯುವ ಪುಸ್ತಕ ವಿತರಣೆ :

Suddi Udaya

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ

Suddi Udaya

ಉಜಿರೆ: ರಮ್ಯಾ 1 ಗ್ರಾಮ್ ಗೋಲ್ಡ್ ಫ್ಯಾನ್ಸಿ& ಪೂಟ್ ವೇರ್ ನೂತನ ಶೋರೂಮ್ ಉದ್ಘಾಟನೆಗೆ ಆಗಮಿಸುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಪ್ರಭಾರ ಕಾರ್ಯನಿರ್ವಹಣಾಧಿಕಾರಿಯಾಗಿ ಯೇಸುರಾಜ್ ನೇಮಕ

Suddi Udaya
error: Content is protected !!