23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದಕ್ಷಿಣ ಆಫ್ರಿಕಾದಲ್ಲಿ ಅಂತ್ಯಕ್ರಿಯೆವಾಗಲಿದ್ದ ಲಾಯಿಲದ ದಾಮೋದರ ಗೌಡ ರವರ ಮೃತದೇಹವನ್ನು ಊರಿಗೆ ತರುವಲ್ಲಿ ಸಹಕರಿಸಿದ ಸಂಸದ ಕ್ಯಾ| ಬ್ರಿಜೇಶ್ ಚೌಟ ಮತ್ತು ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ : ಲಾಯಿಲ ಗ್ರಾಮದ ದಾಮೋದರ ಗೌಡ ಇವರು ಮಧ್ಯ ಆಫ್ರಿಕಾದ ಕ್ಯಾಮರೂನ್ ದೇಶದಲ್ಲಿ ಕಳೆದ ಹಲವಾರು ವರ್ಷಗಳಿಂದ ಉದ್ಯೋಗದಲ್ಲಿದ್ದರು, ಕಳೆದ ಡಿಸೆಂಬರ್ 28 ರಂದು ಹೃದಯಾಘಾತದಿಂದ ನಿಧನರಾದರು.
ಆದರೆ ಗೊತ್ತು ಪರಿಚಯ ಇಲ್ಲದ ಪರದೇಶದಿಂದ ಮೃತ ದೇಹ ಮನೆಗೆ ತರುವುದು ಹೇಗೆ ಎಂಬ ವೇದನೆ ಮನೆಯವರಿಗೆ. ಈ ಸಮಯದಲ್ಲಿ ನೆರವಿಗೆ ಬಂದವರು ದಕ್ಷಿಣ ಕನ್ನಡ ಜಿಲ್ಲೆಯ ಸಂಸದರಾದ ಬ್ರಿಜೇಶ್ ಚೌಟರವರು. ಸಂಸದರನ್ನು ಫೋನ್ ಕರೆಯ ಮೂಲಕ ಸಂಪರ್ಕಿಸಿ ಪರಿಸ್ಥಿತಿಯನ್ನು ವಿವರಿಸಿದಾಗ, ಕೂಡಲೇ ಸ್ಪಂದಿಸಿ ಅಲ್ಲಿನ ರಾಯಭಾರ ಕಚೇರಿ ಜೊತೆ ಸಂಪರ್ಕ ಸಾಧಿಸಿ ದೇಹವನ್ನು ಆದಷ್ಟು ಬೇಗ ಊರಿಗೆ ತಲುಪಲು ಸಹಾಯ ಮಾಡಿದರು.

ಅಲ್ಲಿನ ವೈದ್ಯಕೀಯ ವೆಚ್ಚ, ವಿಮಾನದ ವೆಚ್ಚ ಮತ್ತಿತರ ಖರ್ಚುಗಳನ್ನು ಭರಿಸಲು ಕುಟುಂಬ ಸಾದ್ಯವಾಗಲಿಲ್ಲ. ಆ ಸಮಯದಲ್ಲಿ ಅಲ್ಲಿ ನೆಲೆಸಿರುವ ಭಾರತೀಯ ಬಂಧುಗಳು ಬಹಳಷ್ಟು ಸಹಾಯಹಸ್ತ ನೀಡಿ ಸುಮಾರು ರೂ.8ಲಕ್ಷಕ್ಕೂ ಹೆಚ್ಚು ಹಣದ ಅವಶ್ಯಕತೆಯನ್ನು ನಿಭಾಯಿಸಿ ಮೃತದೇಹವನ್ನು ವಿಮಾನದ ಮೂಲಕ ಬೆಂಗಳೂರಿಗೆ ಕಳುಹಿಸಿದರು.

ಬೆಂಗಳೂರಿನಿಂದ ಪುನಃ ಅಂಬ್ಯುಲೆನ್ಸ್ ಮೂಲಕ ತರಲು ಕುಟುಂಬದವರಿಗೆ ಕಷ್ಟವಾದಾಗ ನೆರವಿಗೆ ಬಂದವರು ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು. ಮನೆಯವರ ಅಸಹಾಯಕತೆಯನ್ನು ಅರಿತ ಶಾಸಕರು ಅಂಬ್ಯುಲೆನ್ಸ್ ವ್ಯವಸ್ಥೆಯ ಜವಾಬ್ದಾರಿ ಹೊತ್ತರು. ಈ‌ ಮೂಲಕ ವಿದೇಶದಲ್ಲಿ ನಿಧನರಾದ ದಾಮೋದರರ ಮೃತ ದೇಹ ಊರಿಗೆ ತರುವಲ್ಲಿ ಸಹಕರಿಸಿದ ಸಂಸದ ಮತ್ತು ಶಾಸಕರಿಗೆ ಕುಟುಂಬದ ಪರವಾಗಿ ಧನ್ಯವಾದವನ್ನು ತಿಳಿಸಿದ್ದಾರೆ.

Related posts

ಕಲ್ಮಂಜ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಸಿ.ಎಂ. ಸಿದ್ದರಾಮಯ್ಯರವರ ಬಗ್ಗೆ ಅಶ್ಲೀಲ ಆಡಿಯೋ ವೈರಲ್: ರಜಿತ್ ಕೊಕ್ಕಡ ವಿರುದ್ದ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಉಜಿರೆ ಗ್ರಾಮ ಪಂಚಾಯತ್ ನಲ್ಲಿ ವಿಶೇಷ ಚೇತನರ ವಿಶೇಷ ಗ್ರಾಮ ಸಭೆ

Suddi Udaya

ಡಿ.17-19: ಮಹತೋಭಾರ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಕ್ಷೇತ್ರದ ಷಷ್ಠೀ ಮಹೋತ್ಸವ

Suddi Udaya

ಬಳಂಜದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಹಾಗೂ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ತರಭೇತಿ ಕಾರ್ಯಾಗಾರ

Suddi Udaya

ಯಕ್ಷಗಾನ ಸಂಘಗಳಿಂದ ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿಗಳಿಗೆ ಗೌರವಾರ್ಪಣೆ

Suddi Udaya
error: Content is protected !!