25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದಕ್ಷಿಣ ಆಫ್ರಿಕಾದಲ್ಲಿ ಅಂತ್ಯಕ್ರಿಯೆವಾಗಲಿದ್ದ ಲಾಯಿಲದ ದಾಮೋದರ ಗೌಡ ರವರ ಮೃತದೇಹವನ್ನು ಊರಿಗೆ ತರುವಲ್ಲಿ ಸಹಕರಿಸಿದ ಸಂಸದ ಕ್ಯಾ| ಬ್ರಿಜೇಶ್ ಚೌಟ ಮತ್ತು ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ : ಲಾಯಿಲ ಗ್ರಾಮದ ದಾಮೋದರ ಗೌಡ ಇವರು ಮಧ್ಯ ಆಫ್ರಿಕಾದ ಕ್ಯಾಮರೂನ್ ದೇಶದಲ್ಲಿ ಕಳೆದ ಹಲವಾರು ವರ್ಷಗಳಿಂದ ಉದ್ಯೋಗದಲ್ಲಿದ್ದರು, ಕಳೆದ ಡಿಸೆಂಬರ್ 28 ರಂದು ಹೃದಯಾಘಾತದಿಂದ ನಿಧನರಾದರು.
ಆದರೆ ಗೊತ್ತು ಪರಿಚಯ ಇಲ್ಲದ ಪರದೇಶದಿಂದ ಮೃತ ದೇಹ ಮನೆಗೆ ತರುವುದು ಹೇಗೆ ಎಂಬ ವೇದನೆ ಮನೆಯವರಿಗೆ. ಈ ಸಮಯದಲ್ಲಿ ನೆರವಿಗೆ ಬಂದವರು ದಕ್ಷಿಣ ಕನ್ನಡ ಜಿಲ್ಲೆಯ ಸಂಸದರಾದ ಬ್ರಿಜೇಶ್ ಚೌಟರವರು. ಸಂಸದರನ್ನು ಫೋನ್ ಕರೆಯ ಮೂಲಕ ಸಂಪರ್ಕಿಸಿ ಪರಿಸ್ಥಿತಿಯನ್ನು ವಿವರಿಸಿದಾಗ, ಕೂಡಲೇ ಸ್ಪಂದಿಸಿ ಅಲ್ಲಿನ ರಾಯಭಾರ ಕಚೇರಿ ಜೊತೆ ಸಂಪರ್ಕ ಸಾಧಿಸಿ ದೇಹವನ್ನು ಆದಷ್ಟು ಬೇಗ ಊರಿಗೆ ತಲುಪಲು ಸಹಾಯ ಮಾಡಿದರು.

ಅಲ್ಲಿನ ವೈದ್ಯಕೀಯ ವೆಚ್ಚ, ವಿಮಾನದ ವೆಚ್ಚ ಮತ್ತಿತರ ಖರ್ಚುಗಳನ್ನು ಭರಿಸಲು ಕುಟುಂಬ ಸಾದ್ಯವಾಗಲಿಲ್ಲ. ಆ ಸಮಯದಲ್ಲಿ ಅಲ್ಲಿ ನೆಲೆಸಿರುವ ಭಾರತೀಯ ಬಂಧುಗಳು ಬಹಳಷ್ಟು ಸಹಾಯಹಸ್ತ ನೀಡಿ ಸುಮಾರು ರೂ.8ಲಕ್ಷಕ್ಕೂ ಹೆಚ್ಚು ಹಣದ ಅವಶ್ಯಕತೆಯನ್ನು ನಿಭಾಯಿಸಿ ಮೃತದೇಹವನ್ನು ವಿಮಾನದ ಮೂಲಕ ಬೆಂಗಳೂರಿಗೆ ಕಳುಹಿಸಿದರು.

ಬೆಂಗಳೂರಿನಿಂದ ಪುನಃ ಅಂಬ್ಯುಲೆನ್ಸ್ ಮೂಲಕ ತರಲು ಕುಟುಂಬದವರಿಗೆ ಕಷ್ಟವಾದಾಗ ನೆರವಿಗೆ ಬಂದವರು ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು. ಮನೆಯವರ ಅಸಹಾಯಕತೆಯನ್ನು ಅರಿತ ಶಾಸಕರು ಅಂಬ್ಯುಲೆನ್ಸ್ ವ್ಯವಸ್ಥೆಯ ಜವಾಬ್ದಾರಿ ಹೊತ್ತರು. ಈ‌ ಮೂಲಕ ವಿದೇಶದಲ್ಲಿ ನಿಧನರಾದ ದಾಮೋದರರ ಮೃತ ದೇಹ ಊರಿಗೆ ತರುವಲ್ಲಿ ಸಹಕರಿಸಿದ ಸಂಸದ ಮತ್ತು ಶಾಸಕರಿಗೆ ಕುಟುಂಬದ ಪರವಾಗಿ ಧನ್ಯವಾದವನ್ನು ತಿಳಿಸಿದ್ದಾರೆ.

Related posts

ಬೆಳ್ತಂಗಡಿ: ಹುಣ್ಸೆಕಟ್ಟೆ ನಿವಾಸಿ ಆಟೋ ಚಾಲಕ ಆನಂದ ಗೌಡ ಹೃದಯಾಘಾತದಿಂದ ನಿಧನ

Suddi Udaya

‘ಸದಸ್ಯರ ಆರೋಗ್ಯದತ್ತ ಕ್ಯಾಂಪ್ಕೋದ ಚಿತ್ತ’ ಯೋಜನೆಯಡಿಯಲ್ಲಿ ಪಡಂಗಡಿ ಜಾನ್ ಡಿ’ ಸೋಜ ರವರಿಗೆ ಚೆಕ್ ಹಸ್ತಾಂತರ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ನಾರಾವಿ ಮಹಾಶಕ್ತಿಕೇಂದ್ರದ ಸಭೆ

Suddi Udaya

ಬಂದಾರು : ಪೆರ್ಲ – ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಮಹಿಳಾ ಸಮಿತಿಯ ವತಿಯಿಂದ ಮಹಿಳಾ ಸಿರಿ ಕಾರ್ಯಕ್ರಮ

Suddi Udaya

ಬಿಜೆಪಿ ತೆಕ್ಕೆಗೆ ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ಬಿರುಸಿನ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ -9, ಕಾಂಗ್ರೇಸ್ -3 ಗೆಲುವು

Suddi Udaya

ನಾಳೆ ಬೆಳ್ತಂಗಡಿಗೆ ಜಿಲ್ಲಾಧಿಕಾರಿ ಭೇಟಿ

Suddi Udaya
error: Content is protected !!