23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದಕ್ಷಿಣ ಆಫ್ರಿಕಾದಲ್ಲಿ ಅಂತ್ಯಕ್ರಿಯೆವಾಗಲಿದ್ದ ಲಾಯಿಲದ ದಾಮೋದರ ಗೌಡ ರವರ ಮೃತದೇಹವನ್ನು ಊರಿಗೆ ತರುವಲ್ಲಿ ಸಹಕರಿಸಿದ ಸಂಸದ ಕ್ಯಾ| ಬ್ರಿಜೇಶ್ ಚೌಟ ಮತ್ತು ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ : ಲಾಯಿಲ ಗ್ರಾಮದ ದಾಮೋದರ ಗೌಡ ಇವರು ಮಧ್ಯ ಆಫ್ರಿಕಾದ ಕ್ಯಾಮರೂನ್ ದೇಶದಲ್ಲಿ ಕಳೆದ ಹಲವಾರು ವರ್ಷಗಳಿಂದ ಉದ್ಯೋಗದಲ್ಲಿದ್ದರು, ಕಳೆದ ಡಿಸೆಂಬರ್ 28 ರಂದು ಹೃದಯಾಘಾತದಿಂದ ನಿಧನರಾದರು.
ಆದರೆ ಗೊತ್ತು ಪರಿಚಯ ಇಲ್ಲದ ಪರದೇಶದಿಂದ ಮೃತ ದೇಹ ಮನೆಗೆ ತರುವುದು ಹೇಗೆ ಎಂಬ ವೇದನೆ ಮನೆಯವರಿಗೆ. ಈ ಸಮಯದಲ್ಲಿ ನೆರವಿಗೆ ಬಂದವರು ದಕ್ಷಿಣ ಕನ್ನಡ ಜಿಲ್ಲೆಯ ಸಂಸದರಾದ ಬ್ರಿಜೇಶ್ ಚೌಟರವರು. ಸಂಸದರನ್ನು ಫೋನ್ ಕರೆಯ ಮೂಲಕ ಸಂಪರ್ಕಿಸಿ ಪರಿಸ್ಥಿತಿಯನ್ನು ವಿವರಿಸಿದಾಗ, ಕೂಡಲೇ ಸ್ಪಂದಿಸಿ ಅಲ್ಲಿನ ರಾಯಭಾರ ಕಚೇರಿ ಜೊತೆ ಸಂಪರ್ಕ ಸಾಧಿಸಿ ದೇಹವನ್ನು ಆದಷ್ಟು ಬೇಗ ಊರಿಗೆ ತಲುಪಲು ಸಹಾಯ ಮಾಡಿದರು.

ಅಲ್ಲಿನ ವೈದ್ಯಕೀಯ ವೆಚ್ಚ, ವಿಮಾನದ ವೆಚ್ಚ ಮತ್ತಿತರ ಖರ್ಚುಗಳನ್ನು ಭರಿಸಲು ಕುಟುಂಬ ಸಾದ್ಯವಾಗಲಿಲ್ಲ. ಆ ಸಮಯದಲ್ಲಿ ಅಲ್ಲಿ ನೆಲೆಸಿರುವ ಭಾರತೀಯ ಬಂಧುಗಳು ಬಹಳಷ್ಟು ಸಹಾಯಹಸ್ತ ನೀಡಿ ಸುಮಾರು ರೂ.8ಲಕ್ಷಕ್ಕೂ ಹೆಚ್ಚು ಹಣದ ಅವಶ್ಯಕತೆಯನ್ನು ನಿಭಾಯಿಸಿ ಮೃತದೇಹವನ್ನು ವಿಮಾನದ ಮೂಲಕ ಬೆಂಗಳೂರಿಗೆ ಕಳುಹಿಸಿದರು.

ಬೆಂಗಳೂರಿನಿಂದ ಪುನಃ ಅಂಬ್ಯುಲೆನ್ಸ್ ಮೂಲಕ ತರಲು ಕುಟುಂಬದವರಿಗೆ ಕಷ್ಟವಾದಾಗ ನೆರವಿಗೆ ಬಂದವರು ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು. ಮನೆಯವರ ಅಸಹಾಯಕತೆಯನ್ನು ಅರಿತ ಶಾಸಕರು ಅಂಬ್ಯುಲೆನ್ಸ್ ವ್ಯವಸ್ಥೆಯ ಜವಾಬ್ದಾರಿ ಹೊತ್ತರು. ಈ‌ ಮೂಲಕ ವಿದೇಶದಲ್ಲಿ ನಿಧನರಾದ ದಾಮೋದರರ ಮೃತ ದೇಹ ಊರಿಗೆ ತರುವಲ್ಲಿ ಸಹಕರಿಸಿದ ಸಂಸದ ಮತ್ತು ಶಾಸಕರಿಗೆ ಕುಟುಂಬದ ಪರವಾಗಿ ಧನ್ಯವಾದವನ್ನು ತಿಳಿಸಿದ್ದಾರೆ.

Related posts

ಪ್ರಸಿದ್ಧ ಗುಜರಾತ್ ಉದ್ಯಮಿ ಶಶಿಧ‌ರ್ ಶೆಟ್ಟಿ ನವಶಕ್ತಿ ಯವರಿಗೆ ಮಾತೃ ವಿಯೋಗ

Suddi Udaya

ಮಾಡ ಪ್ರೀಮಿಯರ್ ಲೀಗ್ – ಶಾರದಾಂಭ ಕ್ರಿಕೆಟರ್ಸ್ ಪ್ರಥಮ

Suddi Udaya

ಮಚ್ಚಿನ ಸ.ಹಿ.ಪ್ರಾ. ಶಾಲೆಗೆ ಬೆಳ್ತಂಗಡಿ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್ ಭೇಟಿ ; ಶೌಚಾಲಯ ಕಾಮಗಾರಿ ಪರಿಶೀಲನೆ

Suddi Udaya

ಮಚ್ಚಿನ: ರುದ್ರಭೂಮಿ ಸಮೀಪ ಆಕಸ್ಮಿಕ ಬೆಂಕಿ

Suddi Udaya

ಸುಹಾಸ್ ಶೆಟ್ಟಿ ಮನೆಗೆ ಹೋಗಿ ಪೋಷಕರಿಗೆ ಸಾಂತ್ವನ ಹೇಳಿದ ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ

Suddi Udaya

ಎ.13-22: ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ: ಎ.25 : ಭದ್ರಕಾಳಿ ದೇವಿಯ ಪ್ರತಿಷ್ಠಾ ಮಹೋತ್ಸವ

Suddi Udaya
error: Content is protected !!