22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದಕ್ಷಿಣ ಆಫ್ರಿಕಾದಲ್ಲಿ ಅಂತ್ಯಕ್ರಿಯೆವಾಗಲಿದ್ದ ಲಾಯಿಲದ ದಾಮೋದರ ಗೌಡ ರವರ ಮೃತದೇಹವನ್ನು ಊರಿಗೆ ತರುವಲ್ಲಿ ಸಹಕರಿಸಿದ ಸಂಸದ ಕ್ಯಾ| ಬ್ರಿಜೇಶ್ ಚೌಟ ಮತ್ತು ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ : ಲಾಯಿಲ ಗ್ರಾಮದ ದಾಮೋದರ ಗೌಡ ಇವರು ಮಧ್ಯ ಆಫ್ರಿಕಾದ ಕ್ಯಾಮರೂನ್ ದೇಶದಲ್ಲಿ ಕಳೆದ ಹಲವಾರು ವರ್ಷಗಳಿಂದ ಉದ್ಯೋಗದಲ್ಲಿದ್ದರು, ಕಳೆದ ಡಿಸೆಂಬರ್ 28 ರಂದು ಹೃದಯಾಘಾತದಿಂದ ನಿಧನರಾದರು.
ಆದರೆ ಗೊತ್ತು ಪರಿಚಯ ಇಲ್ಲದ ಪರದೇಶದಿಂದ ಮೃತ ದೇಹ ಮನೆಗೆ ತರುವುದು ಹೇಗೆ ಎಂಬ ವೇದನೆ ಮನೆಯವರಿಗೆ. ಈ ಸಮಯದಲ್ಲಿ ನೆರವಿಗೆ ಬಂದವರು ದಕ್ಷಿಣ ಕನ್ನಡ ಜಿಲ್ಲೆಯ ಸಂಸದರಾದ ಬ್ರಿಜೇಶ್ ಚೌಟರವರು. ಸಂಸದರನ್ನು ಫೋನ್ ಕರೆಯ ಮೂಲಕ ಸಂಪರ್ಕಿಸಿ ಪರಿಸ್ಥಿತಿಯನ್ನು ವಿವರಿಸಿದಾಗ, ಕೂಡಲೇ ಸ್ಪಂದಿಸಿ ಅಲ್ಲಿನ ರಾಯಭಾರ ಕಚೇರಿ ಜೊತೆ ಸಂಪರ್ಕ ಸಾಧಿಸಿ ದೇಹವನ್ನು ಆದಷ್ಟು ಬೇಗ ಊರಿಗೆ ತಲುಪಲು ಸಹಾಯ ಮಾಡಿದರು.

ಅಲ್ಲಿನ ವೈದ್ಯಕೀಯ ವೆಚ್ಚ, ವಿಮಾನದ ವೆಚ್ಚ ಮತ್ತಿತರ ಖರ್ಚುಗಳನ್ನು ಭರಿಸಲು ಕುಟುಂಬ ಸಾದ್ಯವಾಗಲಿಲ್ಲ. ಆ ಸಮಯದಲ್ಲಿ ಅಲ್ಲಿ ನೆಲೆಸಿರುವ ಭಾರತೀಯ ಬಂಧುಗಳು ಬಹಳಷ್ಟು ಸಹಾಯಹಸ್ತ ನೀಡಿ ಸುಮಾರು ರೂ.8ಲಕ್ಷಕ್ಕೂ ಹೆಚ್ಚು ಹಣದ ಅವಶ್ಯಕತೆಯನ್ನು ನಿಭಾಯಿಸಿ ಮೃತದೇಹವನ್ನು ವಿಮಾನದ ಮೂಲಕ ಬೆಂಗಳೂರಿಗೆ ಕಳುಹಿಸಿದರು.

ಬೆಂಗಳೂರಿನಿಂದ ಪುನಃ ಅಂಬ್ಯುಲೆನ್ಸ್ ಮೂಲಕ ತರಲು ಕುಟುಂಬದವರಿಗೆ ಕಷ್ಟವಾದಾಗ ನೆರವಿಗೆ ಬಂದವರು ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು. ಮನೆಯವರ ಅಸಹಾಯಕತೆಯನ್ನು ಅರಿತ ಶಾಸಕರು ಅಂಬ್ಯುಲೆನ್ಸ್ ವ್ಯವಸ್ಥೆಯ ಜವಾಬ್ದಾರಿ ಹೊತ್ತರು. ಈ‌ ಮೂಲಕ ವಿದೇಶದಲ್ಲಿ ನಿಧನರಾದ ದಾಮೋದರರ ಮೃತ ದೇಹ ಊರಿಗೆ ತರುವಲ್ಲಿ ಸಹಕರಿಸಿದ ಸಂಸದ ಮತ್ತು ಶಾಸಕರಿಗೆ ಕುಟುಂಬದ ಪರವಾಗಿ ಧನ್ಯವಾದವನ್ನು ತಿಳಿಸಿದ್ದಾರೆ.

Related posts

ಸೌಜನ್ಯ ಸಾವಿನ ಪ್ರಕರಣದ ತನಿಖೆ ನಡೆಸುವಂತೆ ಎಸ್‌.ಐ.ಟಿ ಅಧಿಕಾರಿಗಳಿಗೆ ದೂರು ನೀಡಿದ ಸೌಜನ್ಯ ತಾಯಿ ಕುಸುಮಾವತಿ

Suddi Udaya

ಬೆಳ್ತಂಗಡಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರಿಂದ ಮತದಾನ

Suddi Udaya

ಉರುವಾಲು ಕಾರಿಂಜ ಶ್ರೀ ವನಶಾಸ್ತವು ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರಿಗೆ ಮನವಿ ಸಲ್ಲಿಸಿ ಸಮಾಲೋಚನೆ

Suddi Udaya

ವೇಣೂರು: ಜಯಶೀಲಾ ಪೈ ನಿಧನ

Suddi Udaya

ಬೆಳ್ತಂಗಡಿ ಮಹಿಳಾ ಮಂಡಲಗಳ ಒಕ್ಕೂಟದಿಂದ ಎಂಟು ದಿನಗಳ ಪ್ರವಾಸ

Suddi Udaya

ನಡ ಸರಕಾರಿ ಪ್ರೌಢಶಾಲೆ ಅಂತರರಾಷ್ಟ್ರೀಯ ಯೋಗ ದಿನ ಆಚರಣೆ

Suddi Udaya
error: Content is protected !!