23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಾಳೆ(ಜ.11): ಗುರುವಾಯನಕೆರೆ ಎಕ್ಸೆಲ್ ಶಿಕ್ಷಣ ಸಂಸ್ಥೆಯಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಮತ್ತು ಪಾಲಕರಿಗೆ ಪರೀಕ್ಷಾ ನಿಮಿತ್ತ ವಿಶೇಷ ಕಾರ್ಯಾಗಾರ:ಎಕ್ಸೆಲ್ ಬೆಳಕು ಫೌಂಡೇಶನ್ಉಚಿತ ಶಿಕ್ಷಣ ಯೋಜನೆ ಬಗ್ಗೆ ವಿಸ್ಕೃತ ಮಾಹಿತಿ ನೀಡಲಿದ್ದೇವೆ: ಸುಮಂತ್ ಕುಮಾರ್ ಜೈನ್:ಬರುವ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ,ಕಾರ್ಯಾಗಾರವೂ ಮಧ್ಯಾಹ್ನ 2:00 ರಿಂದ ಸಂಜೆ 4:30 ರ ವರೆಗೆ ಜರುಗಲಿದೆ

ಗುರುವಾಯನಕೆರೆ; ಗುರುವಾಯನಕೆರೆ ಎಕ್ಸೆಲ್ ಪಿಯು ಕಾಲೇಜಿನಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಮತ್ತು ಪಾಲಕರಿಗೆ ಪರೀಕ್ಷಾ ನಿಮಿತ್ತ ವಿಶೇಷ ಕಾರ್ಯಾಗಾರ ಹಾಗೂ ಎಕ್ಸೆಲ್ ಬೆಳಕು ಫೌಂಡೇಶನ್ಉಚಿತ ಶಿಕ್ಷಣ ಯೋಜನೆ ಬಗ್ಗೆ ವಿಸ್ಕೃತ ಮಾಹಿತಿಯು ಎಕ್ಸೆಲ್ ಕಾಲೇಜಿನ ವಿದ್ಯಾಸಾಗರ ಕ್ಯಾಂಪಸ್ ಸಭಾಂಗಣ ಜ.11ರಂದು ಜರುಗಲಿದೆ ಎಂದು ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ತಿಳಿಸಿದ್ದಾರೆ.

ಈ ವಿಶೇಷ ಕಾರ್ಯಾಗಾರದಲ್ಲಿ 10ನೇ ತರಗತಿ ಪರೀಕ್ಷೆಯಲ್ಲಿ ಟಾಪರ್ ಆಗಲು ಬಯಸುವ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ, 10ನೇ ತರಗತಿ ನಂತರದ ಶೈಕ್ಷಣಿಕ ಅವಕಾಶಗಳ ಬಗ್ಗೆ ವಿಸ್ತ್ರತ ಮಾಹಿತಿ, ಪರೀಕ್ಷಾ ಸಮಯದಲ್ಲಿ ಮಕ್ಕಳ ದಿನಚರಿ ಮತ್ತು ಪಾಲಕರ ಕರ್ತವ್ಯಗಳ ಬಗ್ಗೆ ಮಾಹಿತಿ, ಮಾದರಿ ಪ್ರಶ್ನೆ ಪತ್ರಿಕೆಗಳ ಕಿರಿ ಹೊತ್ತಿಗೆಯ ವಿತರಣೆ, ಶಿಕ್ಷಣ ತಜ್ಞರೊಂದಿಗೆ ಸಂವಾದ ನಡೆಯಲಿರುತ್ತದೆ.

ಮುಖ್ಯ ಅತಿಥಿಗಳಾಗಿ ಯುವ ಸಾಧಕ, ತರಭೇತಿದಾರ ಸ್ಮಿತೇಶ್ ಬಾರ್ಯ ಭಾಗವಹಿಸಲಿದ್ದಾರೆ ಎಂದರು. ವಿಶೇಷ ಸೂಚನೆ: ಬೆಳ್ತಂಗಡಿ, ಮುಂಡಾಜೆ, ಉಜಿರೆ,ಕನ್ಯಾಡಿ, ಬೆಳ್ತಂಗಡಿ, ಪುಂಜಾಲಕಟ್ಟೆ, ಮತ್ತು ಬಿಸಿರೋಡ್ ಭಾಗದಿಂದ ಬರುವ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಹಾಗೂ ಮಧ್ಯಾಹ್ನದ ಊಟ ಹಾಗೂ ಸಂಜೆಯ ಉಪಹಾರದ ವ್ಯವಸ್ಥೆ ಕಲ್ಪಿಸಲಾಗಿದೆ. ಕಾರ್ಯಾಗಾರವೂ ಮಧ್ಯಾಹ್ನ 2:00 ರಿಂದ ಸಂಜೆ 4:30 ರ ವರೆಗೆ ಜರುಗಲಿದೆ ಎಂದು ಅವರು ತಿಳಿಸಿದ್ದಾರೆ.

Related posts

ಬೆಳ್ತಂಗಡಿ ಸಂತ ತೆರೇಸಾ ಪ್ರೌಢಶಾಲೆಯಲ್ಲಿ ತ್ರಿವಳಿ ಸಂಭ್ರಮ

Suddi Udaya

ಆಪರೇಷನ್ ಸಿಂದೂರ: ಪರಪ್ಪು ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಕನ್ಯಾಡಿ: ಶ್ರೀ ರಾಮ ಕ್ಷೇತ್ರದಲ್ಲಿ ಶ್ರೀ ಹನುಮಾನ್ ರಥೋತ್ಸವ

Suddi Udaya

ಬಳಂಜ ಬಿವಿಎಲ್ ವಾಲಿವಾಲ್ ಪಂದ್ಯಾವಳಿ, ಕೋಟ್ಯಾನ್ ರಾಕರ್ಸ್ ಚಾಂಪಿಯನ್, ಇಕೋಪ್ರೇಶ್ ರನ್ನರ್

Suddi Udaya

ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ:ಗೊನೆ ಮುಹೂರ್ತ, ಧ್ವಜಾರೋಹಣ

Suddi Udaya

ರಾಜ್ಯಮಟ್ಟದ ಕರಾಟೆ: ಕಾಯರ್ತಡ್ಕ ದಿವ್ಯಜ್ಯೋತಿ ಆಂ.ಮಾ. ಶಾಲೆಯ ಅಡ್ಲಿನ್ ಎಲಿಜಬೆತ್ ಜೆರಿನ್ ಗೆ ಚಿನ್ನದ ಪದಕ

Suddi Udaya
error: Content is protected !!