25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಂಗಳೂರಿನ ಎ.ಆರ್.ಎಂ ಕಿಯಾ ಶೋರೂಮ್‌ನಲ್ಲಿ ನೂತನ “ಕಿಯಾ ಸೆಲ್ಟೋಸ್” ಕಾರು ಅನಾವರಣ

ಮಂಗಳೂರು: ನಗರದ ಕದ್ರಿ ಮಲ್ಲಿಕಟ್ಟೆಯ ಎ.ಆರ್.ಎಂ ಕಿಯಾ ಶೋರೂಮ್‌ನಲ್ಲಿ ನೂತನ ಕಿಯಾ ಸೆಲ್ಟೋಸ್ ಕಾರನ್ನು ಜ.9ರಂದು ಅನಾವರಣಗೊಳಿಸಲಾಯಿತು. ಕರಾವಳಿಗರಿಗೆ ಈ ಜನಪ್ರಿಯ ಎಸ್‌ಯುವಿ ಇತ್ತೀಚಿನ ಆವೃತ್ತಿಯು ಪಾದಾರ್ಪಣೆ ಮಾಡಿದಂತಾಗಿದೆ. ಈ ಕಾರಿನ ಆರಂಭಿಕ ಬೆಲೆಯು 10.99 ಲಕ್ಷ ರೂ.ಗಳಾಗಿವೆ.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಚಾರ್ಟರ್ಡ್ ಅಕೌಂಟೆಂಟ್ ಮತ್ತು ‘ಕಾಮತ್ ಅಂಡ್ ರಾವ್ ಸಂಸ್ಥೆಯ ಆಡಳಿತ ಪಾಲುದಾರ ಶ್ರೀನಿವಾಸ್ ಎಸ್. ಕಾಮತ್ ನೂತನ ಕಾರನ್ನು ಅನಾವರಣಗೊಳಿಸಿದರು.

ಈ ಸಂದರ್ಭದಲ್ಲಿ ಎ.ಆರ್.ಎಂ ಕಿಯಾ ಸಂಸ್ಥೆಯ ಹಿರಿಯ ವ್ಯವಸ್ಥಾಪಕ ನಿರ್ದೇಶಕ ಅರೂರ್ ಗಣೇಶ್ ರಾವ್, ಮಾರಾಟ ಮತ್ತು ಮಾರ್ಕೆಟಿಂಗ್ ನಿರ್ದೇಶಕ ಅರೂರ್ ವರುಣ್ ರಾವ್, ಎಚ್.ಆರ್. ನಿರ್ದೇಶಕ ಅರೂರ್ ವಿಕ್ರಮ್ ರಾವ್, ಹಿರಿಯ ಉಪಾಧ್ಯಕ್ಷ ಪ್ರದೀಪ್ ಪೈ, ಎಜಿಎಂ (ವಿಎಎಸ್) ಕನಕ ಕುಮಾರ್, ಮಾರಾಟ ವಿಭಾಗದ ಎಜಿಎಂ ಹರೀಶ್ ರಾವ್, ಮಾರಾಟ ಮತ್ತು ಎಚ್.ಆರ್ ವಿಭಾಗದ ಜಿಎಂ ಶಶಿಕುಮಾರ್ ಉಡುಪಿ ಹಾಗೂ ಮಾರಾಟ ವ್ಯವಸ್ಥಾಪಕ ಜಯಪ್ರಕಾಶ್ ಉಪಸ್ಥಿತರಿದ್ದರು.

ನೂತನ ಕಿಯಾ ಸೆಲ್ಟೋಸ್ ಕಾರು ನವೀನ ವಿನ್ಯಾಸ, ಸುಧಾರಿತ ತಾಂತ್ರಿಕ ವೈಶಿಷ್ಟ್ಯಗಳು ಮತ್ತು ಉತ್ತಮ ಕಾರ್ಯಕ್ಷಮತೆಯನ್ನು ಒಳಗೊಂಡಿದೆ. ಮಿಡ್-ಸೈಝ್ ಎಸ್‌ಯುವಿ ವಿಭಾಗದಲ್ಲಿ ಶೈಲಿ, ತಂತ್ರಜ್ಞಾನ ಮತ್ತು ಸೌಕರ್ಯವನ್ನು ಬಯಸುವ ಗ್ರಾಹಕರನ್ನು ಗಮನದಲ್ಲಿಟ್ಟುಕೊಂಡು ಈ ಮಾದರಿಯನ್ನು ವಿನ್ಯಾಸಗೊಳಿಸಲಾಗಿದೆ ಎಂದು ಕಂಪನಿಯ ಪ್ರತಿನಿಧಿಗಳು ತಿಳಿಸಿದ್ದಾರೆ.
ಈ ಕಾರು ವಾಹನ ಪ್ರೇಮಿಗಳು ಮತ್ತು ಸ್ಥಳೀಯ ಗ್ರಾಹಕರ ಗಮನ ಸೆಳೆದಿದೆ. ಮಂಗಳೂರಿನ ಶೋರೂಮ್‌ನಲ್ಲಿ ಹೊಸ ಸೆಲ್ಟೋಸ್‌ಗಾಗಿ ಬುಕ್ಕಿಂಗ್ ಮತ್ತು ವಿಚಾರಣೆಗಳು ಈಗಾಗಲೇ ಆರಂಭವಾಗಿವೆ ಎಂದು ಎ.ಆರ್.ಎಂ ಕಿಯಾ ತಿಳಿಸಿದೆ.

Related posts

ಕೊಕ್ಕಡದಲ್ಲಿ ವಿಧಾನಪರಿಷತ್ ಉಪಚುನಾವಣೆ ನಿಮಿತ್ತ ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಪ್ರ.ದ. ಕಾಲೇಜಿನಲ್ಲಿ ಯೋಗ ದಿನಾಚರಣೆ

Suddi Udaya

ಅಯೋಧ್ಯೆ ಪ್ರಭು ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಹೆಗ್ಗಡೆ ಭಾಗಿ

Suddi Udaya

ಕಲ್ಮಂಜ: ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ಧ್ವಜಸ್ತಂಭ ಸ್ಥಾಪನೆಗೆ ಸಿದ್ದಗೊಳಿಸಿದ ಕಲ್ಲಿನ ಕೆತ್ತನೆ ಕಾರ್ಯಕ್ಕೆ ಚಾಲನೆ

Suddi Udaya

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ – ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗೆ ಹದಿಹರೆಯದ ವಿಷಯದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಕಟ್ಟದಬೈಲು ಸಂತಾನ ಪ್ರದಾ ನಾಗಕ್ಷೇತ್ರದಲ್ಲಿ ಚಪ್ಪರದ ಶ್ರಮದಾನ

Suddi Udaya
error: Content is protected !!