23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಂಗಳೂರಿನ ಎ.ಆರ್.ಎಂ ಕಿಯಾ ಶೋರೂಮ್‌ನಲ್ಲಿ ನೂತನ “ಕಿಯಾ ಸೆಲ್ಟೋಸ್” ಕಾರು ಅನಾವರಣ

ಮಂಗಳೂರು: ನಗರದ ಕದ್ರಿ ಮಲ್ಲಿಕಟ್ಟೆಯ ಎ.ಆರ್.ಎಂ ಕಿಯಾ ಶೋರೂಮ್‌ನಲ್ಲಿ ನೂತನ ಕಿಯಾ ಸೆಲ್ಟೋಸ್ ಕಾರನ್ನು ಜ.9ರಂದು ಅನಾವರಣಗೊಳಿಸಲಾಯಿತು. ಕರಾವಳಿಗರಿಗೆ ಈ ಜನಪ್ರಿಯ ಎಸ್‌ಯುವಿ ಇತ್ತೀಚಿನ ಆವೃತ್ತಿಯು ಪಾದಾರ್ಪಣೆ ಮಾಡಿದಂತಾಗಿದೆ. ಈ ಕಾರಿನ ಆರಂಭಿಕ ಬೆಲೆಯು 10.99 ಲಕ್ಷ ರೂ.ಗಳಾಗಿವೆ.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಚಾರ್ಟರ್ಡ್ ಅಕೌಂಟೆಂಟ್ ಮತ್ತು ‘ಕಾಮತ್ ಅಂಡ್ ರಾವ್ ಸಂಸ್ಥೆಯ ಆಡಳಿತ ಪಾಲುದಾರ ಶ್ರೀನಿವಾಸ್ ಎಸ್. ಕಾಮತ್ ನೂತನ ಕಾರನ್ನು ಅನಾವರಣಗೊಳಿಸಿದರು.

ಈ ಸಂದರ್ಭದಲ್ಲಿ ಎ.ಆರ್.ಎಂ ಕಿಯಾ ಸಂಸ್ಥೆಯ ಹಿರಿಯ ವ್ಯವಸ್ಥಾಪಕ ನಿರ್ದೇಶಕ ಅರೂರ್ ಗಣೇಶ್ ರಾವ್, ಮಾರಾಟ ಮತ್ತು ಮಾರ್ಕೆಟಿಂಗ್ ನಿರ್ದೇಶಕ ಅರೂರ್ ವರುಣ್ ರಾವ್, ಎಚ್.ಆರ್. ನಿರ್ದೇಶಕ ಅರೂರ್ ವಿಕ್ರಮ್ ರಾವ್, ಹಿರಿಯ ಉಪಾಧ್ಯಕ್ಷ ಪ್ರದೀಪ್ ಪೈ, ಎಜಿಎಂ (ವಿಎಎಸ್) ಕನಕ ಕುಮಾರ್, ಮಾರಾಟ ವಿಭಾಗದ ಎಜಿಎಂ ಹರೀಶ್ ರಾವ್, ಮಾರಾಟ ಮತ್ತು ಎಚ್.ಆರ್ ವಿಭಾಗದ ಜಿಎಂ ಶಶಿಕುಮಾರ್ ಉಡುಪಿ ಹಾಗೂ ಮಾರಾಟ ವ್ಯವಸ್ಥಾಪಕ ಜಯಪ್ರಕಾಶ್ ಉಪಸ್ಥಿತರಿದ್ದರು.

ನೂತನ ಕಿಯಾ ಸೆಲ್ಟೋಸ್ ಕಾರು ನವೀನ ವಿನ್ಯಾಸ, ಸುಧಾರಿತ ತಾಂತ್ರಿಕ ವೈಶಿಷ್ಟ್ಯಗಳು ಮತ್ತು ಉತ್ತಮ ಕಾರ್ಯಕ್ಷಮತೆಯನ್ನು ಒಳಗೊಂಡಿದೆ. ಮಿಡ್-ಸೈಝ್ ಎಸ್‌ಯುವಿ ವಿಭಾಗದಲ್ಲಿ ಶೈಲಿ, ತಂತ್ರಜ್ಞಾನ ಮತ್ತು ಸೌಕರ್ಯವನ್ನು ಬಯಸುವ ಗ್ರಾಹಕರನ್ನು ಗಮನದಲ್ಲಿಟ್ಟುಕೊಂಡು ಈ ಮಾದರಿಯನ್ನು ವಿನ್ಯಾಸಗೊಳಿಸಲಾಗಿದೆ ಎಂದು ಕಂಪನಿಯ ಪ್ರತಿನಿಧಿಗಳು ತಿಳಿಸಿದ್ದಾರೆ.
ಈ ಕಾರು ವಾಹನ ಪ್ರೇಮಿಗಳು ಮತ್ತು ಸ್ಥಳೀಯ ಗ್ರಾಹಕರ ಗಮನ ಸೆಳೆದಿದೆ. ಮಂಗಳೂರಿನ ಶೋರೂಮ್‌ನಲ್ಲಿ ಹೊಸ ಸೆಲ್ಟೋಸ್‌ಗಾಗಿ ಬುಕ್ಕಿಂಗ್ ಮತ್ತು ವಿಚಾರಣೆಗಳು ಈಗಾಗಲೇ ಆರಂಭವಾಗಿವೆ ಎಂದು ಎ.ಆರ್.ಎಂ ಕಿಯಾ ತಿಳಿಸಿದೆ.

Related posts

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ರೂ. 7 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಯಾತ್ರಿ ನಿವಾಸಕ್ಕೆ ಶಿಲಾನ್ಯಾಸ

Suddi Udaya

ಅಳದಂಗಡಿ ಸ.ಪ.ಪೂ. ಕಾಲೇಜಿನಲ್ಲಿ ಪೋಕ್ಸೋ ಕಾಯ್ದೆ ಮತ್ತು ಬಾಲ್ಯ ವಿವಾಹ ಬಗ್ಗೆ ಕಾನೂನು ಅರಿವು ಕಾರ್ಯಕ್ರಮ

Suddi Udaya

ಮನೆಯಲ್ಲಿ ಜಗಳವಾಡಿ ಧರ್ಮಸ್ಥಳಕ್ಕೆ ಆತ್ಮಹತ್ಯೆ ಮಾಡಲು ಬಂದ ಮಹಿಳೆ: ಧರ್ಮಸ್ಥಳ ಪಿಎಸ್ಐ ಕಿಶೋರ್ ಕುಮಾರ್ ರಿಂದ ಮಹಿಳೆಯ ರಕ್ಷಣೆ

Suddi Udaya

ಬೆಳ್ತಂಗಡಿ ತಾಲೂಕು 2ನೇ ಗಮಕ ಸಮ್ಮೇಳನ ಅಧ್ಯಕ್ಷರಾಗಿ ಜಯರಾಮ ಕುದ್ರೆತ್ತಾಯ ಧರ್ಮಸ್ಥಳ ಆಯ್ಕೆ

Suddi Udaya

ಶ್ರೀ ಕೃಷ್ಣ ಭಜನಾ ಮಂದಿರದ ಸಭಾ ಭವನದ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧ.ಗ್ರಾ. ಯೋ. ವತಿಯಿಂದ ರೂ.2ಲಕ್ಷ ಸಹಾಯಧನ

Suddi Udaya

ಜೆಸಿಐ ಮಡಂತ್ಯಾರಿನ ಪದಗ್ರಹಣ ಸಮಾರಂಭ

Suddi Udaya
error: Content is protected !!