September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗಬ್ರಹ್ಮಮಂಡಲೋತ್ಸವ, ಕಾರ್ಯಲಯ ಉದ್ಘಾಟನೆ

ಬೆಳ್ತಂಗಡಿ: ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಸನ್ನಿಧಾನದಲ್ಲಿ ಲೋಕಕಲ್ಯಾಣಾರ್ಥವಾಗಿ ವೇದಮೂರ್ತಿ ಮುಂಡೂರು ಶ್ರೀ ಗೋಪಾಲಕೃಷ್ಣ ತಂತ್ರಿಗಳ ಸಂಕಲ್ಪದಂತೆ ಅಷ್ಟೋತ್ತರ ಶತಸಂಖ್ಯೆ ನಾರಿಕೇಳ ಶ್ರೀ ಮಹಾಗಣಪತಿ ಹವನ, ನಾಗತನುತರ್ಪಣ ಹಾಗೂ ನಾಗಬ್ರಹ್ಮಮಂಡಲ ಸೇವೆಯು ಜ.10, 11 ರಂದು ನಡೆಯಲಿದೆ.

ಈ ವೇಳೆ ನಾಗಬ್ರಹ್ಮಮಂಡಲೋತ್ಸವ ಕಾರ್ಯಲಯವನ್ನು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಪ್ರಧಾನ ಅರ್ಚಕ ಅನಂತ ಇರ್ವತ್ರಾಯ, ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ನಾರಾಯಣ ಪೂಜಾರಿ ಬರಮೇಲು, ಕಾರ್ಯದರ್ಶಿ ಮಧುರ ರಾಘವ ಅತ್ತೋಡಿ, ಕೋಶಾಧಿಕಾರಿ ಹರ್ಷ ಆರ್ ಪಕ್ಕಿದಕಲ, ಮೇಲಂತಬೆಟ್ಟು ಗ್ರಾ.ಪಂ ಉಪಾಧ್ಯಕ್ಷ ಲೋಕನಾಥ ಶೆಟ್ಟಿ, ಪಂಚಾಯತ್ ಸದಸ್ಯರಾದ ಚಂದ್ರರಾಜ್, ಹರ್ಷ ಹೆಚ್.ಆರ್, ಧಾರ್ಮಿಕ ಪರಿಷತ್ ಸದಸ್ಯ ಕೆ.ಎಸ್ ಯೋಗೀಶ್ ಕುಮಾರ್ ನಡಕ್ಕರ, ಸಮಿತಿಯ ಸದಸದಯರಾದ ಜಯಂತಿ ಪಕ್ಕಿದಕಲ, ಗಿರೀಶ್ ಕುಮಾರ್, ಸೋಮಪ್ಪ ಪೂಜಾರಿ, ಬೋಜ ಪೂಜಾರಿ, ಅವಿನಾಶ್ , ರಾಧಾಕೃಷ್ಣ ರೈ ಅಟ್ಲಾಜೆ, ನಾಗೇಶ್ ಮುಡಲ, ಪ್ರದೀಪ್ ಶೆಟ್ಟಿ ವಾತ್ಸಲ್ಯ, ಪುರಂದರ ಶೆಟ್ಟಿ ಪಾಡ್ಯಾರು, ರಮಾನಾಥ ರೈ ಬಳಂಜ, ಯೋಗೀಶ್ ಕುಮಾರ್ ನೂಜೇಲು, ದಯಾನಂದ ಸವಣಾಲು, ಗುರು ಭಟ್, ನೀತ್ ಕುಮಾರ್, ರೂಪ ಮೊದಲಾದವರು, ಭಕ್ತರು ಉಪಸ್ಥಿತರಿದ್ದರು.

ಇಂದು (ಜ.10) ಬೆಳಗ್ಗೆ ಶ್ರೀ ನಾಗಬ್ರಹ್ಮ ದೇವರ ಸನ್ನಿಧಿಯಲ್ಲಿ ಸಾಮೂಹಿಕ ದೇವತಾ ಪ್ರಾರ್ಥನೆ. ಸ್ವಸ್ತಿ ಪುಣ್ಯಾಹ ವಾಚನ, ಸಪ್ತಶುದ್ಧಿ, ಪಂಚಾಮೃತ ಅಭಿಷೇಕ, ಪ್ರಧಾನ ಹೋಮ ಕಲಶಪೂರಣೆ, ಕಲಶಾಭಿಷೇಕ, ಗಣಪತಿ ಅಥರ್ವಶೀರ್ಷ ಪಾರಾಯಣ, ಸ್ಥಳದ ದೈವಗಳಿಗೆ ಕಲಶಾಭಿಷೇಕ, ಪಂಚಪರ್ವ, ಮಧ್ಯಾಹ್ನ ಅಷ್ಟೋತ್ತರ ಶತಸಂಖ್ಯೆ ನಾರಿಕೇಳ ಶ್ರೀ ಮಹಾಗಣಪತಿ ಹವನ ನಡೆಯಿತು.

Related posts

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ನೆರಿಯ ವಲಯದ ಭಜನಾ ಪರಿಷತ್ತಿನ ಸಭೆ

Suddi Udaya

ಭೂ ಪರಿವರ್ತಿತ ಜಮೀನುಗಳಲ್ಲಿನ ವಿನ್ಯಾಸ ಅನುಮೋದನೆಯನ್ನು ತಾ.ಪಂ. ಮತ್ತು ಗ್ರಾ.ಪಂ. ಯಲ್ಲಿಯೇ ಅನುಕೂಲ ಕಲ್ಪಿಸಲು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ರವರಿಗೆ ದ.ಕ. ಮತ್ತು ಉಡುಪಿ ಜಿಲ್ಲೆಗಳ ಬಿಜೆಪಿ ಶಾಸಕರುಗಳ ನಿಯೋಗದಿಂದ ಮನವಿ

Suddi Udaya

ಅಕ್ರಮ ಮದ್ಯ ಮಾರಾಟ ಪೊಲೀಸರ ದಾಳಿ

Suddi Udaya

ಕ್ರಿಕೆಟ್ ಪಂದ್ಯಾಟದ ಮೂಲಕ ಸಹಾಯನಿಧಿ ಸಂಗ್ರಹಿಸಿದ ಮಾರ್ನಿಂಗ್ ಫ್ರೆಂಡ್ಸ್ ಅನಾರೋಗ್ಯದಿಂದ ಬಳಲುತ್ತಿದ್ದ ಕೀರ್ತನ್ ಚಿಕಿತ್ಸೆಗೆ ರೂ.2.25 ಲಕ್ಷ ಹಸ್ತಾಂತರ

Suddi Udaya

ಶಿರ್ಲಾಲು: ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಮಹಾಸಭೆ: ವಾರ್ಷಿಕ 150 ಕೋಟಿ ವ್ಯವಹಾರ ಮಾಡಿ 69 ಲಕ್ಷ ನಿವ್ವಳ ಲಾಭ ಗಳಿಸಿದ್ದೇವೆ: ನವೀನ್ ಕೆ ಸಾಮಾನಿ

Suddi Udaya
error: Content is protected !!