25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ರಾಷ್ಟ್ರಮಟ್ಟದ ಒಲಿಂಪಿಯಾಡ್ ಪರೀಕ್ಷೆಯಲ್ಲಿ ವಿದ್ವತ್ ಪಿಯು ಕಾಲೇಜಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ:15 ವಿದ್ಯಾರ್ಥಿಗಳಿಗೆ ಡಿಸ್ಟಿಂಕ್ಷನ್ ನೊಂದಿಗೆ ಸ್ವರ್ಣ ಪದಕ:ವಿದ್ವತ್ ಶಿಕ್ಷಣ ಪ್ರತಿಷ್ಠಾನದ ಸಂಸ್ಥೆಯ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿಯವರಿಂದ ವಿದ್ಯಾರ್ಥಿಗಳ ಸಾಧನೆಗೆ ಮೆಚ್ಚುಗೆ:

ಗುರುವಾಯನಕೆರೆ: 2025-26 ನೇ ಶೈಕ್ಷಣಿಕ ವರ್ಷದ ರಾಷ್ಟ್ರಮಟ್ಟದ ಒಲಿಂಪಿಯಾಡ್ ಪರೀಕ್ಷೆಯಲ್ಲಿ ಗುರುವಾಯನಕೆರೆಯ ವಿದ್ವತ್ ಪಿ.ಯು ಕಾಲೇಜಿನ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದಾರೆ.

ವಿದ್ವತ್ ಪದವಿ ಪೂರ್ವ ಕಾಲೇಜು ಗುರುವಾಯನಕೆರೆ, ಇದೇ ಶೈಕ್ಷಣಿಕ ವರ್ಷದ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಅಂತರಾಷ್ಟ್ರೀಯ ಮಟ್ಟದ ಒಲಿಂಪಿಯಾಡ್ ಪರೀಕ್ಷೆಗಳ ತರಬೇತಿ ನೀಡಿ ಪರೀಕ್ಷೆ ಬರೆಯಿಸಲಾಗಿತ್ತು. ಅದರಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಗಮನ ಸೆಳೆಯುವ ಫಲಿತಾಂಶ ಪಡೆದಿದ್ದು, ಗುರುವಾಯನಕೆರೆಯ ಎಲ್ಲಾ ಶಿಕ್ಷಣ ಪ್ರೇಮಿಗಳು ಹೆಮ್ಮೆ ಪಡುವ ವಿಚಾರವಾಗಿದೆ.

ಅಂತರಾಷ್ಟ್ರೀಯ ಕಾಮರ್ಸ್ ಹಾಗೂ ಇಂಗ್ಲೀಷ್ ಒಲಿಂಪಿಯಾಡ್ ಪರೀಕ್ಷೆಯಲ್ಲಿ ಒಟ್ಟು 15 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನೊಂದಿಗೆ ಸ್ವರ್ಣ ಪದಕಗಳಿಸಿ ದಕ್ಷಿಣ ಕನ್ನಡ ಜಿಲ್ಲೆಯ ಶಿಕ್ಷಣಾಸಕ್ತರ ಗಮನವನ್ನು ವಿದ್ವತ್ ಪಿ.ಯು ನಡೆಗೆ ಸೆಳೆದಿದ್ದಾರೆ, ಕಾಮರ್ಸ್ ಒಲಂಪಿಯಡ್ ನಲ್ಲಿ 6, ಇಂಗ್ಲೀಷ್ ಒಲಿಂಪಿಯಾಡ್ ನಲ್ಲಿ 9. ವಿದ್ಯಾರ್ಥಿಗಳು 90 ಕ್ಕಿಂತ ಅಧಿಕ ಪರ್ಸೆಂಟೈಲ್ ಗಳಿಸುವುದರ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊಸ ಸಂಚಲನ ಮೂಡಿಸಿದ್ದಾರೆ.

ಇಂಗ್ಲಿಷ್ ಒಲಿಂಪಿಯಾಡ್ ನಲ್ಲಿ ನೇಹಾ ಭಟ್,ಚಂದನ ಅಗ್ನಿಹೋತ್ರಿ, ಭುವನ್ ತೇಜ್,ಅಮೋಘವರ್ಷಿಣಿ ಜೆ, ಸಾಯಿಜಿತ್ ಹೆಗಡೆ, ಪ್ರತ್ಯುಷ್ ಎನ್ ಸಮಾನಿ. ಕಾಮರ್ಸ್ ಒಲಿಂಪಿಯಾಡ್ ನಲ್ಲಿ, ನೇಹಾ ಭಟ್, ರಿಶಾಂತ್ ವೈ ಪಿ, ಜಿ ಕೀರ್ತನ್, ದೀಕ್ಷಿತ್ ಬಿ ಆರ್, ಕ್ರಿತಿಕ್ ಕೆ, ಶಿವತ್ಸ ಛತ್ರ, ಸ್ವರ್ಣ ಪದಕ ಸಾಧನೆ ಮಾಡಿದ್ದಾರೆ.ಭಾರತೀಯ ಒಲಿಂಪಿಯಾಡ್ ಸಂಸ್ಥೆಯು ವಿದ್ವತ್ ಪಿ.ಯು ಕಾಲೇಜಿನ ಸಾಧನೆಯನ್ನು ಗುರುತಿಸಿ ಪ್ರಶಂಸನಾ ಪತ್ರವನ್ನು ಕೂಡ ರವಾನಿಸಿದೆ.

ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯ ವ್ಯವಸ್ಥಿತ ಸಾಧಕ ಮಾದರಿ ಪರಿಚಯಿಸಿರುವ ವಿದ್ವತ್ ಪಿ.ಯು ಒಲಿಂಪಿಯಾಡ್ ಪರೀಕ್ಷಾ ಸಾಧನೆಯ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ಸಂಚಲನ ಮೂಡಿಸುವತ್ತ ದಾಪುಗಾಲಿಡುವ ಲಕ್ಷಣಗಳು ಈಗಲೇ ಗೋಚರಿಸುತ್ತಿವೆ ಎಂದು ವಿದ್ವತ್ ಶಿಕ್ಷಣ ಪ್ರತಿಷ್ಠಾನದ ಸಂಸ್ಥೆಯ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿಯವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ದಕ ಎಲ್ಲಾ ಶಾಲೆ, ಪಿಯು ಕಾಲೇಜ್ ಗಳಿಗೆ ರಜೆ

Suddi Udaya

ಮಚ್ಚಿನ ಮೂಲ್ಯ ಯಾನೆ ಕುಂಬಾರರ ಸಂಘದ ಅಧ್ಯಕ್ಷರಾಗಿ ಮನೋಜ್ ಬಂಗಿದೊಟ್ಟು ಆಯ್ಕೆ

Suddi Udaya

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ ವೈಭವ ಪೂರ್ಣವಾಗಿ ನಡೆದ ಕಾಲಾವಧಿ ನೇಮೋತ್ಸವ

Suddi Udaya

ಬೆಳ್ತಂಗಡಿ: ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಸ್ಕೌಟ್ ಗೈಡ್ ವಿಶ್ವ ಸ್ಕಾರ್ಪ್ ದಿನಾಚರಣೆ ಹಾಗೂ ಸನ್ ರೈಸ್ ದಿನಾಚರಣೆ

Suddi Udaya

ಕುವೆಟ್ಟು ಬೂತ್ 114ರಲ್ಲಿ ಡಾ.ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಪುಣ್ಯಸ್ಮರಣೆ

Suddi Udaya

ನ.16: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳ ರೋಗ ತಪಾಸಣಾ ಶಿಬಿರ

Suddi Udaya
error: Content is protected !!