September 6, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ರಾಷ್ಟ್ರಮಟ್ಟದ ಒಲಿಂಪಿಯಾಡ್ ಪರೀಕ್ಷೆಯಲ್ಲಿ ವಿದ್ವತ್ ಪಿಯು ಕಾಲೇಜಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ:15 ವಿದ್ಯಾರ್ಥಿಗಳಿಗೆ ಡಿಸ್ಟಿಂಕ್ಷನ್ ನೊಂದಿಗೆ ಸ್ವರ್ಣ ಪದಕ:ವಿದ್ವತ್ ಶಿಕ್ಷಣ ಪ್ರತಿಷ್ಠಾನದ ಸಂಸ್ಥೆಯ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿಯವರಿಂದ ವಿದ್ಯಾರ್ಥಿಗಳ ಸಾಧನೆಗೆ ಮೆಚ್ಚುಗೆ:

ಗುರುವಾಯನಕೆರೆ: 2025-26 ನೇ ಶೈಕ್ಷಣಿಕ ವರ್ಷದ ರಾಷ್ಟ್ರಮಟ್ಟದ ಒಲಿಂಪಿಯಾಡ್ ಪರೀಕ್ಷೆಯಲ್ಲಿ ಗುರುವಾಯನಕೆರೆಯ ವಿದ್ವತ್ ಪಿ.ಯು ಕಾಲೇಜಿನ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದಾರೆ.

ವಿದ್ವತ್ ಪದವಿ ಪೂರ್ವ ಕಾಲೇಜು ಗುರುವಾಯನಕೆರೆ, ಇದೇ ಶೈಕ್ಷಣಿಕ ವರ್ಷದ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಅಂತರಾಷ್ಟ್ರೀಯ ಮಟ್ಟದ ಒಲಿಂಪಿಯಾಡ್ ಪರೀಕ್ಷೆಗಳ ತರಬೇತಿ ನೀಡಿ ಪರೀಕ್ಷೆ ಬರೆಯಿಸಲಾಗಿತ್ತು. ಅದರಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಗಮನ ಸೆಳೆಯುವ ಫಲಿತಾಂಶ ಪಡೆದಿದ್ದು, ಗುರುವಾಯನಕೆರೆಯ ಎಲ್ಲಾ ಶಿಕ್ಷಣ ಪ್ರೇಮಿಗಳು ಹೆಮ್ಮೆ ಪಡುವ ವಿಚಾರವಾಗಿದೆ.

ಅಂತರಾಷ್ಟ್ರೀಯ ಕಾಮರ್ಸ್ ಹಾಗೂ ಇಂಗ್ಲೀಷ್ ಒಲಿಂಪಿಯಾಡ್ ಪರೀಕ್ಷೆಯಲ್ಲಿ ಒಟ್ಟು 15 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನೊಂದಿಗೆ ಸ್ವರ್ಣ ಪದಕಗಳಿಸಿ ದಕ್ಷಿಣ ಕನ್ನಡ ಜಿಲ್ಲೆಯ ಶಿಕ್ಷಣಾಸಕ್ತರ ಗಮನವನ್ನು ವಿದ್ವತ್ ಪಿ.ಯು ನಡೆಗೆ ಸೆಳೆದಿದ್ದಾರೆ, ಕಾಮರ್ಸ್ ಒಲಂಪಿಯಡ್ ನಲ್ಲಿ 6, ಇಂಗ್ಲೀಷ್ ಒಲಿಂಪಿಯಾಡ್ ನಲ್ಲಿ 9. ವಿದ್ಯಾರ್ಥಿಗಳು 90 ಕ್ಕಿಂತ ಅಧಿಕ ಪರ್ಸೆಂಟೈಲ್ ಗಳಿಸುವುದರ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊಸ ಸಂಚಲನ ಮೂಡಿಸಿದ್ದಾರೆ.

ಇಂಗ್ಲಿಷ್ ಒಲಿಂಪಿಯಾಡ್ ನಲ್ಲಿ ನೇಹಾ ಭಟ್,ಚಂದನ ಅಗ್ನಿಹೋತ್ರಿ, ಭುವನ್ ತೇಜ್,ಅಮೋಘವರ್ಷಿಣಿ ಜೆ, ಸಾಯಿಜಿತ್ ಹೆಗಡೆ, ಪ್ರತ್ಯುಷ್ ಎನ್ ಸಮಾನಿ. ಕಾಮರ್ಸ್ ಒಲಿಂಪಿಯಾಡ್ ನಲ್ಲಿ, ನೇಹಾ ಭಟ್, ರಿಶಾಂತ್ ವೈ ಪಿ, ಜಿ ಕೀರ್ತನ್, ದೀಕ್ಷಿತ್ ಬಿ ಆರ್, ಕ್ರಿತಿಕ್ ಕೆ, ಶಿವತ್ಸ ಛತ್ರ, ಸ್ವರ್ಣ ಪದಕ ಸಾಧನೆ ಮಾಡಿದ್ದಾರೆ.ಭಾರತೀಯ ಒಲಿಂಪಿಯಾಡ್ ಸಂಸ್ಥೆಯು ವಿದ್ವತ್ ಪಿ.ಯು ಕಾಲೇಜಿನ ಸಾಧನೆಯನ್ನು ಗುರುತಿಸಿ ಪ್ರಶಂಸನಾ ಪತ್ರವನ್ನು ಕೂಡ ರವಾನಿಸಿದೆ.

ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯ ವ್ಯವಸ್ಥಿತ ಸಾಧಕ ಮಾದರಿ ಪರಿಚಯಿಸಿರುವ ವಿದ್ವತ್ ಪಿ.ಯು ಒಲಿಂಪಿಯಾಡ್ ಪರೀಕ್ಷಾ ಸಾಧನೆಯ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ಸಂಚಲನ ಮೂಡಿಸುವತ್ತ ದಾಪುಗಾಲಿಡುವ ಲಕ್ಷಣಗಳು ಈಗಲೇ ಗೋಚರಿಸುತ್ತಿವೆ ಎಂದು ವಿದ್ವತ್ ಶಿಕ್ಷಣ ಪ್ರತಿಷ್ಠಾನದ ಸಂಸ್ಥೆಯ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿಯವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಜೂ. 21: ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ವತಿಯಿಂದ 12 ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ “ ಕಲೆಗಳ ದೃಷ್ಟಿಕೋನದಿಂದ ಶಿಕ್ಷಣದ ವ್ಯಾಖ್ಯಾನ” ಉಪನ್ಯಾಸಮಾಲಿಕೆ

Suddi Udaya

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಸಾಮೂಹಿಕ ಪ್ರಾರ್ಥನೆ

Suddi Udaya

ಕಾಂಗ್ರೆಸ್ ಸರಕಾರ ರಚನೆ ಹಿನ್ನೆಲೆ: ಕೊಕ್ಕಡದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮೋತ್ಸವ

Suddi Udaya

ಗೇರುಕಟ್ಟೆ: ಮನ್ಶರ್ ಕ್ಯಾಂಪಸ್ ನಲ್ಲಿ ನಡೆದ ಸೌಹಾರ್ದ ಇಫ್ತಾರ್ ಕೂಟದಲ್ಲಿ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಭಾಗಿ

Suddi Udaya

ನಾವೂರು ಸರಕಾರಿ ಪ್ರೌಢಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!