37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಶ್ರೀ ವನದುರ್ಗಾ ಶ್ರೀ ನಾಗರಕ್ತೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ದುರ್ಗಾಪೂಜೆ, ಆಶ್ಲೇಷ ಬಲಿ, ರಂಗಪೂಜೆ

ಉಜಿರೆ: ಉಜಿರೆ ಗ್ರಾಮದ ಕಲ್ಲೆ, ಅಜಿತ್ ನಗರದಲ್ಲಿರುವ ಶ್ರೀ ವನದುರ್ಗಾ ಶ್ರೀ ನಾಗರಕ್ತೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ ದುರ್ಗಾಪೂಜೆ, ಆಶ್ಲೇಷ ಬಲಿ, ರಂಗಪೂಜೆ ವೇದಮೂರ್ತಿ ಪಿ.ಆರ್. ಯಡಪಡಿತ್ತಾಯ ರವರ ಪೌರೋಹಿತ್ಯದಲ್ಲಿ ವಿವಿಧ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ವಿಜೃಂಭಣೆಯಿಂದ ನಡೆಯಿತು.

ಜ.8 ರಂದು ಸಂಜೆ ಪ್ರಾರ್ಥನೆ, ದುರ್ಗಾಪೂಜೆ , ಮಹಾಪೂಜೆ, ಆರಾಧನೆ, ತೀರ್ಥ ಪ್ರಸಾದ, ಅನ್ನಸಂತರ್ಪಣೆ , ಜ.9ರಂದು ಪ್ರಾತಃಕಾಲ ಪುಣ್ಯಾಹ, ಕಲಶ ಪ್ರತಿಷ್ಠೆ, ಬೆಳಿಗ್ಗೆ ಗಣಪತಿ ಹೋಮ, ಕಲಷಾಭಿಷೇಕ, ಪರ್ವಾರಾಧನೆ, ದುರ್ಗಾಹೋಮ ಪೂರ್ಣಾಹುತಿ, ‘ಆಶ್ಲೇಷಬಲಿ’ ಆರಂಭ, ಮಧ್ಯಾಹ್ನ ಮಹಾಪೂಜೆ, ಬ್ರಾಹ್ಮಣ ವಟು ಆರಾಧನೆ, ತೀರ್ಥ ಪ್ರಸಾದ , ಸಂಜೆ ಸಂಕಲ್ಪ, ರಂಗಪೂಜೆ ಆರಂಭ, ರಾತ್ರಿ ಮಹಾಮಂಗಳಾರತಿ, ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಿತು.

ಈ ವೇಳೆ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ ಕೆ. ಮೋಹನ್ ಕುಮಾರ್ ಅವರ ಸೇವೆಯಿಂದ ಕ್ಷೇತ್ರವು ಹೂಗಳಿಂದ ಅಲಂಕೃತಗೊಂಡು ಕಂಗೊಳಿಸುತ್ತಿತ್ತು.

ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರದ ಗಣ್ಯರು, ಭಕ್ತರು ಭಾಗವಹಿಸಿ ದೇವರ ಪ್ರಸಾದವನ್ನು ಸ್ವೀಕರಿಸಿದರು.


ಇಂದು ( ಜ.10) ಸಂಜೆ ಪ್ರಾರ್ಥನೆ, ರಾತ್ರಿ ಮಹಿಷಾಂತಾಯ, ರಕ್ತೇಶ್ವರಿ, ಕಲ್ಲುರ್ಟಿ, ಪಂಜುರ್ಲಿ ಗುಳಿಗ ದೈವಗಳಿಗೆ ನರ್ತನ ಸೇವೆ ಜರುಗಲಿರುವುದು. ರಾತ್ರಿ ಭಕ್ತರಿಗೆ ಅನ್ನಸಂತರ್ಪಣೆ, ಫಲಾಹಾರ ವ್ಯವಸ್ಥೆ ಕಲ್ಪಿಸಲಾಗಿದೆ.

Related posts

ನಡ ಗ್ರಾಮ ಪಂಚಾಯತ್ ನಲ್ಲಿ 22ನೇ ಜನಸ್ಪಂದನ ಸಭೆ

Suddi Udaya

ಲಾಯಿಲ ಬಂಟರ ಗ್ರಾಮ ಸಮಿತಿಯ ಮಾಸಿಕ ಸಭೆ

Suddi Udaya

ನೆರಿಯ ಸೆಂಟ್ ತೋಮಸ್ ಪ್ರೌಢಶಾಲೆ ಶೇ 100 ರ ಸಾಧನೆಗೆ ಸನ್ಮಾನ

Suddi Udaya

ದ.ಕ ಜಿಲ್ಲಾ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರು ಸಂಘದ ಪದಾಧಿಕಾರಿಗಳ ಸಭೆ

Suddi Udaya

ಗುರಿಪಳ್ಳ ಒಕ್ಕೂಟದ ವತಿಯಿಂದ ನಿಡಿಗಲ್ ದೇವಸ್ಥಾನದಲ್ಲಿ ವನಮಹೋತ್ಸವ ಕಾರ್ಯಕ್ರಮ

Suddi Udaya

ಕಳೆದುಕೊಂಡಿದ್ದ ಚಿನ್ನವನ್ನು ಮರಳಿ ದಂಪತಿಗಳಿಗೆ ಹಸ್ತಾಂತರಿಸಿದ ಲಾಡ್ಜ್ ಮಾಲೀಕ

Suddi Udaya
error: Content is protected !!