July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ ಘಾಟಿಯಲ್ಲಿ ಕಾಡಾನೆ ಪ್ರತ್ಯಕ್ಷ: ವಾಹನ ಸವಾರರಲ್ಲಿ ಆತಂಕ

ಚಾರ್ಮಾಡಿ ಘಾಟಿಯ 2ನೇ ಮತ್ತು 3ನೇ ತಿರುವಿನ ಮಧ್ಯೆ ರಸ್ತೆ ಮೇಲೆ ಕಾಡಾನೆ ಪ್ರತ್ಯಕ್ಷಗೊಂಡು ವಾಹನ ಸವಾರರಲ್ಲಿ ಆತಂಕ ಮೂಡಿಸಿದ ಘಟನೆ ಜ.9ರಂದು ನಡೆದಿದೆ.

ಶುಕ್ರವಾರ ರಾತ್ರಿ ಸುಮಾರು 9.45ರ ವೇಳೆಗೆ ಮರವನ್ನು ಮುರಿದು ರಸ್ತೆ ಮಧ್ಯೆ ನಿಂತ ಕಾಡಾನೆ, ಒಂದು ತಾಸಿಗೂ ಅಧಿಕ ಕಾಲ ಅಲ್ಲೇ ಅಲೆಯುತ್ತಿತ್ತು. ಪರಿಣಾಮವಾಗಿ ಚಾರ್ಮಾಡಿ ಘಾಟಿಯಲ್ಲಿ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡು ಭಾರೀ ಟ್ರಾಫಿಕ್ ಜಾಮ್ ಉಂಟಾಯಿತು. ರಸ್ತೆಯ ಎರಡೂ ಬದಿಗಳಲ್ಲಿ ವಾಹನಗಳು ಸಾಲುಗಟ್ಟಿ ನಿಂತು, ವಾಹನ ಸವಾರರು ಭಯಭೀತರಾಗಿದ್ದರು.

ಘಟನಾ ಸ್ಥಳದಲ್ಲಿ ಮೊಬೈಲ್ ನೆಟ್ವರ್ಕ್ ಇಲ್ಲದ ಕಾರಣ ಅರಣ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆಗೆ ಮಾಹಿತಿ ನೀಡಲು ಸಾರ್ವಜನಿಕರು ಪರದಾಡಿದ ಸ್ಥಿತಿ ನಿರ್ಮಾಣವಾಗಿತ್ತು.ಚಿಕ್ಕಮಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳನ್ನು ಸಂಪರ್ಕಿಸುವ ಪ್ರಮುಖ ಮಾರ್ಗವಾಗಿರುವ ಚಾರ್ಮಾಡಿ ಘಾಟಿಯಲ್ಲಿ ಈ ಘಟನೆ ನಡೆದಿರುವುದರಿಂದ, ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.

Related posts

ಅಂಡಿಂಜೆ: ಹಲಕ್ಕೆಬೆಟ್ಟು ನಿವಾಸಿ ರತ್ನ ನಿಧನ

Suddi Udaya

ಕುತ್ಲೂರು ಸ.ಉ. ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣಾ ಸಮಾರಂಭ

Suddi Udaya

ವ್ಯವಹಾರ ಆಡಳಿತ ನಿರ್ವಹಣೆ ಯಲ್ಲಿ ಕೃತಕ ಬುದ್ಧಿಮತ್ತೆ ಮತ್ತು ವೈಜ್ಞಾನಿಕ ಆವಿಷ್ಕಾರಗಳು ಅವಕಾಶಗಳನ್ನೂ ಸೃಷ್ಟಿಸುತ್ತದೆ ” ಎನ್ನುವ ವಿಚಾರದ ಕುರಿತು ಉಪನ್ಯಾಸ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸ.ಪ.ಪೂ. ಕಾಲೇಜಿನಲ್ಲಿ ಗಮಕ ವಾಚನ ಮತ್ತು ವ್ಯಾಖ್ಯಾನ ಕಾರ್ಯಕ್ರಮ

Suddi Udaya

ಮಾಲಾಡಿ ಗ್ರಾ.ಪಂ. ನಲ್ಲಿ ಮಹಿಳಾ ದಿನಾಚರಣೆ ಮತ್ತು ಗ್ಯಾರಂಟಿ ಯೋಜನೆಗಳ ಅರಿವು ಕಾರ್ಯಕ್ರಮ

Suddi Udaya

ಶಿರ್ಲಾಲು ಪೇಟೆಯಲ್ಲಿ ಕಾಣಿಸಿಕೊಂಡ ಚಿರತೆ

Suddi Udaya
error: Content is protected !!