23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ ಘಾಟಿಯಲ್ಲಿ ಕಾಡಾನೆ ಪ್ರತ್ಯಕ್ಷ: ವಾಹನ ಸವಾರರಲ್ಲಿ ಆತಂಕ

ಚಾರ್ಮಾಡಿ ಘಾಟಿಯ 2ನೇ ಮತ್ತು 3ನೇ ತಿರುವಿನ ಮಧ್ಯೆ ರಸ್ತೆ ಮೇಲೆ ಕಾಡಾನೆ ಪ್ರತ್ಯಕ್ಷಗೊಂಡು ವಾಹನ ಸವಾರರಲ್ಲಿ ಆತಂಕ ಮೂಡಿಸಿದ ಘಟನೆ ಜ.9ರಂದು ನಡೆದಿದೆ.

ಶುಕ್ರವಾರ ರಾತ್ರಿ ಸುಮಾರು 9.45ರ ವೇಳೆಗೆ ಮರವನ್ನು ಮುರಿದು ರಸ್ತೆ ಮಧ್ಯೆ ನಿಂತ ಕಾಡಾನೆ, ಒಂದು ತಾಸಿಗೂ ಅಧಿಕ ಕಾಲ ಅಲ್ಲೇ ಅಲೆಯುತ್ತಿತ್ತು. ಪರಿಣಾಮವಾಗಿ ಚಾರ್ಮಾಡಿ ಘಾಟಿಯಲ್ಲಿ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡು ಭಾರೀ ಟ್ರಾಫಿಕ್ ಜಾಮ್ ಉಂಟಾಯಿತು. ರಸ್ತೆಯ ಎರಡೂ ಬದಿಗಳಲ್ಲಿ ವಾಹನಗಳು ಸಾಲುಗಟ್ಟಿ ನಿಂತು, ವಾಹನ ಸವಾರರು ಭಯಭೀತರಾಗಿದ್ದರು.

ಘಟನಾ ಸ್ಥಳದಲ್ಲಿ ಮೊಬೈಲ್ ನೆಟ್ವರ್ಕ್ ಇಲ್ಲದ ಕಾರಣ ಅರಣ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆಗೆ ಮಾಹಿತಿ ನೀಡಲು ಸಾರ್ವಜನಿಕರು ಪರದಾಡಿದ ಸ್ಥಿತಿ ನಿರ್ಮಾಣವಾಗಿತ್ತು.ಚಿಕ್ಕಮಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳನ್ನು ಸಂಪರ್ಕಿಸುವ ಪ್ರಮುಖ ಮಾರ್ಗವಾಗಿರುವ ಚಾರ್ಮಾಡಿ ಘಾಟಿಯಲ್ಲಿ ಈ ಘಟನೆ ನಡೆದಿರುವುದರಿಂದ, ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.

Related posts

ಕುಕ್ಕೇಡಿ ಗ್ರಾಮದ ಪಾಳ್ಯ ದರ್ಖಾಸು ನಿವಾಸಿ ವಿಶ್ವನಾಥ ವಿಷ ಸೇವಿಸಿ ಅತ್ಮಹತ್ಯೆ

Suddi Udaya

ಭಾರಿ ಮಳೆಗೆ: ಪುತ್ತಿಲ ನಡುಕೇರ್ಯದಲ್ಲಿ ಬರೆ ಕುಸಿತ

Suddi Udaya

ಧರ್ಮಸ್ಥಳ: ದೊಂಡೋಲೆ ನಿವಾಸಿ ನಾಗೇಶ್ ಹೃದಯಾಘಾತದಿಂದ ನಿಧನ

Suddi Udaya

ಮೇ.31ಕ್ಕೆ ನಿವೃತ್ತರಾಗುತ್ತಿರುವ ಟೀಚರ್ಸ್ ಕೋಪರೇಟಿವ್ ಬ್ಯಾಂಕ್ ಮೆನೇಜರ್ ಲ| ರವೀಂದ್ರ ಶೆಟ್ಟಿ ಬಳಂಜ

Suddi Udaya

ಕೆಪಿಎಸ್ ಪುಂಜಾಲಕಟ್ಟೆ ಪದವಿಪೂರ್ವ ವಿಭಾಗದ ಕಾಲೇಜು ವಾರ್ಷಿಕೋತ್ಸವ

Suddi Udaya

ನಡ: ಪುತ್ಯೆಯಲ್ಲಿ ಗುಡ್ಡ ಜರಿದು ಮನೆಗೆ ಹಾನಿ

Suddi Udaya
error: Content is protected !!