23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಾಳೆ(ಜ.11): ಗುರುವಾಯನಕೆರೆ ಎಕ್ಸೆಲ್ ಶಿಕ್ಷಣ ಸಂಸ್ಥೆಯಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಮತ್ತು ಪಾಲಕರಿಗೆ ಪರೀಕ್ಷಾ ನಿಮಿತ್ತ ವಿಶೇಷ ಕಾರ್ಯಾಗಾರ:ಎಕ್ಸೆಲ್ ಬೆಳಕು ಫೌಂಡೇಶನ್ಉಚಿತ ಶಿಕ್ಷಣ ಯೋಜನೆ ಬಗ್ಗೆ ವಿಸ್ಕೃತ ಮಾಹಿತಿ ನೀಡಲಿದ್ದೇವೆ: ಸುಮಂತ್ ಕುಮಾರ್ ಜೈನ್:ಬರುವ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ,ಕಾರ್ಯಾಗಾರವೂ ಮಧ್ಯಾಹ್ನ 2:00 ರಿಂದ ಸಂಜೆ 4:30 ರ ವರೆಗೆ ಜರುಗಲಿದೆ

ಗುರುವಾಯನಕೆರೆ; ಗುರುವಾಯನಕೆರೆ ಎಕ್ಸೆಲ್ ಪಿಯು ಕಾಲೇಜಿನಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಮತ್ತು ಪಾಲಕರಿಗೆ ಪರೀಕ್ಷಾ ನಿಮಿತ್ತ ವಿಶೇಷ ಕಾರ್ಯಾಗಾರ ಹಾಗೂ ಎಕ್ಸೆಲ್ ಬೆಳಕು ಫೌಂಡೇಶನ್ಉಚಿತ ಶಿಕ್ಷಣ ಯೋಜನೆ ಬಗ್ಗೆ ವಿಸ್ಕೃತ ಮಾಹಿತಿಯು ಎಕ್ಸೆಲ್ ಕಾಲೇಜಿನ ವಿದ್ಯಾಸಾಗರ ಕ್ಯಾಂಪಸ್ ಸಭಾಂಗಣ ಜ.11ರಂದು ಜರುಗಲಿದೆ ಎಂದು ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ತಿಳಿಸಿದ್ದಾರೆ.

ಈ ವಿಶೇಷ ಕಾರ್ಯಾಗಾರದಲ್ಲಿ 10ನೇ ತರಗತಿ ಪರೀಕ್ಷೆಯಲ್ಲಿ ಟಾಪರ್ ಆಗಲು ಬಯಸುವ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ, 10ನೇ ತರಗತಿ ನಂತರದ ಶೈಕ್ಷಣಿಕ ಅವಕಾಶಗಳ ಬಗ್ಗೆ ವಿಸ್ತ್ರತ ಮಾಹಿತಿ, ಪರೀಕ್ಷಾ ಸಮಯದಲ್ಲಿ ಮಕ್ಕಳ ದಿನಚರಿ ಮತ್ತು ಪಾಲಕರ ಕರ್ತವ್ಯಗಳ ಬಗ್ಗೆ ಮಾಹಿತಿ, ಮಾದರಿ ಪ್ರಶ್ನೆ ಪತ್ರಿಕೆಗಳ ಕಿರಿ ಹೊತ್ತಿಗೆಯ ವಿತರಣೆ, ಶಿಕ್ಷಣ ತಜ್ಞರೊಂದಿಗೆ ಸಂವಾದ ನಡೆಯಲಿರುತ್ತದೆ.

ಮುಖ್ಯ ಅತಿಥಿಗಳಾಗಿ ಯುವ ಸಾಧಕ, ತರಭೇತಿದಾರ ಸ್ಮಿತೇಶ್ ಬಾರ್ಯ ಭಾಗವಹಿಸಲಿದ್ದಾರೆ ಎಂದರು. ವಿಶೇಷ ಸೂಚನೆ: ಬೆಳ್ತಂಗಡಿ, ಮುಂಡಾಜೆ, ಉಜಿರೆ,ಕನ್ಯಾಡಿ, ಬೆಳ್ತಂಗಡಿ, ಪುಂಜಾಲಕಟ್ಟೆ, ಮತ್ತು ಬಿಸಿರೋಡ್ ಭಾಗದಿಂದ ಬರುವ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಹಾಗೂ ಮಧ್ಯಾಹ್ನದ ಊಟ ಹಾಗೂ ಸಂಜೆಯ ಉಪಹಾರದ ವ್ಯವಸ್ಥೆ ಕಲ್ಪಿಸಲಾಗಿದೆ. ಕಾರ್ಯಾಗಾರವೂ ಮಧ್ಯಾಹ್ನ 2:00 ರಿಂದ ಸಂಜೆ 4:30 ರ ವರೆಗೆ ಜರುಗಲಿದೆ ಎಂದು ಅವರು ತಿಳಿಸಿದ್ದಾರೆ.

Related posts

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಪಡಂಗಡಿಯಲ್ಲಿ ಎನ್.ಐ.ಎ ಅಧಿಕಾರಿಗಳ ಕಾರ್ಯಾಚರಣೆ: ನೌಷದ್ ತಂಗಿ, ತಾಯಿ ವಶಕ್ಕೆ ಪಡೆದು ವಿಚಾರಣೆ ನಡೆಸಿದ ಚೈನೈನಿಂದ ಬಂದ ಡಿವೈಎಸ್ಪಿ ವಿಘ್ನೇಶ್ ನೇತೃತ್ವದ ತಂಡ

Suddi Udaya

ವೇಣೂರು: ಸುದೇರ್ದು ನಿವಾಸಿ ಸುರೇಶ ಮೂಲ್ಯ ನಿಧನ

Suddi Udaya

ಸೇಕ್ರೆಡ್ ಹಾರ್ಟ್ ಚರ್ಚ್‌ನಲ್ಲಿ ತೆನೆ ಹಬ್ಬ (ಮೊಂತಿ ಹಬ್ಬ)

Suddi Udaya

ಮುಂಡೂರು: ಮಳೆಗೆ ಮನೆ ಬಳಿ ಮಣ್ಣು ಕುಸಿತ, ಅಪಾಯದಂಚಿನಲ್ಲಿ ಮನೆ

Suddi Udaya

ಹೈನುಗಾರಿಕೆಯ ಸಾಧಕ ಪಿ.ನಾರಾಯಣ ರಾವ್ ಧರ್ಮಸ್ಥಳ ವಿಧಿವಶ

Suddi Udaya

ಚಿಕ್ಕಮಗಳೂರಿನ ವಕೀಲ ಪ್ರೀತಮ್ ರವರ ಮೇಲೆ ಹಲ್ಲೆ ಮಾಡಿರುವ ಪೊಲೀಸರನ್ನು ಬಂಧಿಸುವಂತೆ ಒತ್ತಾಯಿಸಿ ಬೆಳ್ತಂಗಡಿ ನ್ಯಾಯಾಲಯದ ಸಂಕೀರ್ಣದಲ್ಲಿ ಪ್ರತಿಭಟನೆ

Suddi Udaya
error: Content is protected !!