25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ : ಅಕ್ರಮ ಮರಳು ಅಡ್ಡೆ ಮೇಲೆ ಬೆಳ್ತಂಗಡಿ ಪೊಲೀಸ್ ದಾಳಿ

ಬೆಳ್ತಂಗಡಿ : ಅಕ್ರಮವಾಗಿ ನದಿಯ ಕಿನಾರೆಯಿಂದ ಹಿಟಾಚಿ ಬಳಸಿ ಮರಳು ತೆಗೆಯುತ್ತಿದ್ದ ಅಡ್ಡೆ ಮೇಲೆ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬೆಳ್ತಂಗಡಿ ಪೊಲೀಸರು ಜ.8 ರಂದು ಬೆಳಗ್ಗೆ 7 ಗಂಟೆಗೆ ಸಿಬ್ಬಂದಿಯವರ ಜೊತೆ ಬೆಳ್ತಂಗಡಿ ಸಬ್ ಇನ್ಸ್‌ಪೆಕ್ಟರ್ ಆನಂದ್.ಎಂ ರೌಂಡ್‌ ಕರ್ತವ್ಯದಲ್ಲಿರುವಾಗ ಮಾಹಿತಿದಾರರಿಂದ ಸಿಕ್ಕ ಖಚಿತ ಮಾಹಿತಿ ಮೇರೆಗೆ ಕಡಿರುದ್ಯಾವರದ ಗಂಡಿಬಾಗಿಲು ಎಂಬಲ್ಲಿ ದಾಳಿ ಮಾಡಿದಾಗ ನೇತ್ರಾವತಿ ನದಿ ಕಿನಾರೆಯಿಂದ ಮರಳು ಕಳ್ಳತನ ಮಾಡಿ ಹಿಚಾಚಿ ಮೂಲಕ ಟಿಪ್ಪರ್ ಲಾರಿಗೆ ತುಂಬಿಸಿ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ.

ಪೊಲೀಸರ ದಾಳಿ ವೇಳೆ ಟಿಪ್ಪರ್ ಲಾರಿ ಚಾಲಕ ಸ್ಥಳದಿಂದ ಲಾರಿ ಬಿಟ್ಟು ಓಡಿ ಹೋಗಿದ್ದು, ಹಿಟಾಚಿ ಅಪರೇಟರ್ ನನ್ನು ಹಿಡಿದು ವಿಚಾರಿಸಿದಾಗ ತನ್ನ ಹೆಸರು ಚಾರ್ಮಡಿಯ ಮಹಮ್ಮದ್ ಶಮೀರುದ್ದಿನ್ ಎಂಬುದಾಗಿ ಹಾಗೂ ಓಡಿ ಹೋದ ಟಿಪ್ಪರ್ ಚಾಲಕ ನ ಹೆಸರು ಚಾರ್ಮಾಡಿಯ ಹೆಚ್.ಹನೀಫ್ ಎಂಬುದಾಗಿ ತಿಳಿಸಿದ್ದಾನೆ.

ಅಕ್ರಮವಾಗಿ ಮರಳು ತುಂಬಿದ್ದ 3,50,000 ಮೌಲ್ಯದ ಟಿಪ್ಪರ್ KA-41-C-0557 ಮತ್ತು 2,50,000 ಮೌಲ್ಯದ
DOOSAN HITACHI- 150 ವಶಪಡಿಸಿಕೊಂಡು.ಆರೋಪಿಗಳಾದ ಬೆಳ್ತಂಗಡಿ ತಾಲೂಕಿನ ಕಕ್ಕಿಂಜೆ ಗ್ರಾಮದ ಚಾರ್ಮಾಡಿ ನಿವಾಸಿಗಳಾದ ಮಹಮ್ಮದ್ ಶಮೀರುದ್ದಿನ್ ಮತ್ತು ಹೆಚ್.ಹನೀಫ್ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ 2023(u/s303(2),3,(5)) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಬೆಳ್ತಂಗಡಿ ಉಪವಿಭಾಗದ ಡಿವೈಎಸ್ಪಿ ರೋಹಿನಿ.ಸಿ.ಕೆ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ಇನ್ಸ್‌ಪೆಕ್ಟರ್ ಸುಬ್ಬಪೂರ ಮಠ್ ನೇತೃತ್ವದಲ್ಲಿ ಬೆಳ್ತಂಗಡಿ ಸಬ್ ಇನ್ಸ್‌ಪೆಕ್ಟರ್ ಆನಂದ್.ಎಂ ತಂಡದ ಸಿಬ್ಬಂದಿ ದಾಳಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

Related posts

ಪೆರಾಡಿಯಲ್ಲಿ ‘ಸರಕಾರದ ನಡೆ ಕಾರ್ಯಕರ್ತರ ಕಡೆ’ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇಗುಲದ ಬ್ರಹ್ಮಕಲಶೋತ್ಸವ ಚಪ್ಪರ ಮುಹೂರ್ತ

Suddi Udaya

ಉಜಿರೆ: ಶಾಲಾ ವಿದ್ಯಾರ್ಥಿ ಪರಿಷತ್ತಿನ ನಾಯಕತ್ವದ ಆಯ್ಕೆಗಾಗಿ ಚುನಾವಣೆ: ಶಾಲಾ ನಾಯಕನಾಗಿ ಸಾತ್ವಿಕ್ ರಾವ್ ಮತ್ತು ಉಪ ನಾಯಕನಾಗಿ ಪ್ರಾಂಜಲ್ ಆಯ್ಕೆ

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ

Suddi Udaya

ವಲಯ ಉಪಾಧ್ಯಕ್ಷರ ಮೊದಲ ಅಧಿಕೃತ ಭೇಟಿ: ಜೆಸಿಐ ಕೊಕ್ಕಡ ಕಪಿಲಾ ಘಟಕದ ಸಾಮಾನ್ಯ ಸಭೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಚಿರತೆ ಆತಂಕ: ಮಳೆಗಾಲದಲ್ಲಿ ಪ್ರವಾಸಿಗರಿಗೆ ಅರಣ್ಯ ಇಲಾಖೆ ಕಟ್ಟುನಿಟ್ಟಿನ ಎಚ್ಚರಿಕೆ

Suddi Udaya
error: Content is protected !!