23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗಬ್ರಹ್ಮಮಂಡಲೋತ್ಸವ, ಕಾರ್ಯಲಯ ಉದ್ಘಾಟನೆ

ಬೆಳ್ತಂಗಡಿ: ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಸನ್ನಿಧಾನದಲ್ಲಿ ಲೋಕಕಲ್ಯಾಣಾರ್ಥವಾಗಿ ವೇದಮೂರ್ತಿ ಮುಂಡೂರು ಶ್ರೀ ಗೋಪಾಲಕೃಷ್ಣ ತಂತ್ರಿಗಳ ಸಂಕಲ್ಪದಂತೆ ಅಷ್ಟೋತ್ತರ ಶತಸಂಖ್ಯೆ ನಾರಿಕೇಳ ಶ್ರೀ ಮಹಾಗಣಪತಿ ಹವನ, ನಾಗತನುತರ್ಪಣ ಹಾಗೂ ನಾಗಬ್ರಹ್ಮಮಂಡಲ ಸೇವೆಯು ಜ.10, 11 ರಂದು ನಡೆಯಲಿದೆ.

ಈ ವೇಳೆ ನಾಗಬ್ರಹ್ಮಮಂಡಲೋತ್ಸವ ಕಾರ್ಯಲಯವನ್ನು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಪ್ರಧಾನ ಅರ್ಚಕ ಅನಂತ ಇರ್ವತ್ರಾಯ, ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ನಾರಾಯಣ ಪೂಜಾರಿ ಬರಮೇಲು, ಕಾರ್ಯದರ್ಶಿ ಮಧುರ ರಾಘವ ಅತ್ತೋಡಿ, ಕೋಶಾಧಿಕಾರಿ ಹರ್ಷ ಆರ್ ಪಕ್ಕಿದಕಲ, ಮೇಲಂತಬೆಟ್ಟು ಗ್ರಾ.ಪಂ ಉಪಾಧ್ಯಕ್ಷ ಲೋಕನಾಥ ಶೆಟ್ಟಿ, ಪಂಚಾಯತ್ ಸದಸ್ಯರಾದ ಚಂದ್ರರಾಜ್, ಹರ್ಷ ಹೆಚ್.ಆರ್, ಧಾರ್ಮಿಕ ಪರಿಷತ್ ಸದಸ್ಯ ಕೆ.ಎಸ್ ಯೋಗೀಶ್ ಕುಮಾರ್ ನಡಕ್ಕರ, ಸಮಿತಿಯ ಸದಸದಯರಾದ ಜಯಂತಿ ಪಕ್ಕಿದಕಲ, ಗಿರೀಶ್ ಕುಮಾರ್, ಸೋಮಪ್ಪ ಪೂಜಾರಿ, ಬೋಜ ಪೂಜಾರಿ, ಅವಿನಾಶ್ , ರಾಧಾಕೃಷ್ಣ ರೈ ಅಟ್ಲಾಜೆ, ನಾಗೇಶ್ ಮುಡಲ, ಪ್ರದೀಪ್ ಶೆಟ್ಟಿ ವಾತ್ಸಲ್ಯ, ಪುರಂದರ ಶೆಟ್ಟಿ ಪಾಡ್ಯಾರು, ರಮಾನಾಥ ರೈ ಬಳಂಜ, ಯೋಗೀಶ್ ಕುಮಾರ್ ನೂಜೇಲು, ದಯಾನಂದ ಸವಣಾಲು, ಗುರು ಭಟ್, ನೀತ್ ಕುಮಾರ್, ರೂಪ ಮೊದಲಾದವರು, ಭಕ್ತರು ಉಪಸ್ಥಿತರಿದ್ದರು.

ಇಂದು (ಜ.10) ಬೆಳಗ್ಗೆ ಶ್ರೀ ನಾಗಬ್ರಹ್ಮ ದೇವರ ಸನ್ನಿಧಿಯಲ್ಲಿ ಸಾಮೂಹಿಕ ದೇವತಾ ಪ್ರಾರ್ಥನೆ. ಸ್ವಸ್ತಿ ಪುಣ್ಯಾಹ ವಾಚನ, ಸಪ್ತಶುದ್ಧಿ, ಪಂಚಾಮೃತ ಅಭಿಷೇಕ, ಪ್ರಧಾನ ಹೋಮ ಕಲಶಪೂರಣೆ, ಕಲಶಾಭಿಷೇಕ, ಗಣಪತಿ ಅಥರ್ವಶೀರ್ಷ ಪಾರಾಯಣ, ಸ್ಥಳದ ದೈವಗಳಿಗೆ ಕಲಶಾಭಿಷೇಕ, ಪಂಚಪರ್ವ, ಮಧ್ಯಾಹ್ನ ಅಷ್ಟೋತ್ತರ ಶತಸಂಖ್ಯೆ ನಾರಿಕೇಳ ಶ್ರೀ ಮಹಾಗಣಪತಿ ಹವನ ನಡೆಯಿತು.

Related posts

ಉಡುಪಿ ಹಾಗೂ ದ.ಕ. ಜಿಲ್ಲಾ ಭಾರತೀಯ ಅರಸೇನಾಪಡೆಗಳ ಮಾಜಿ ಯೋಧರ ಸಂಘದ ವಾರ್ಷಿಕ ಸಭೆ, ಪ್ರತಿಭಾ ಪುರಸ್ಕಾರ, ಮಾಜಿ ಯೋಧರ ಕುಟುಂಬ ಸಮ್ಮಿಲನ ಹಾಗೂ ಮನೋರಂಜನಾ ಕಾರ್ಯಕ್ರಮ

Suddi Udaya

ಕಾಂಗ್ರೆಸ್ ಪಕ್ಷದ ಹಿರಿಯ ಕಾರ್ಯಕರ್ತ: ಕೊಲ್ಲಿ ದೇವಸ್ಥಾನದ ಮಾಜಿ ಮೊಕ್ತೇಸರ, ಯಕ್ಷಗಾನ ಅರ್ಥದಾರಿ ಮಂಜುನಾಥ ಕಾಮತ್ ನಿಧನ

Suddi Udaya

ಜೇಸಿಐ ಬೆಳ್ತಂಗಡಿ ಮಂಜುಶ್ರೀಯ ಆಜ್ಞಾ- ಅರಿವಿನ ಧ್ಯಾನ ಕಾರ್ಯಕ್ರಮ ಸಂಪನ್ನ

Suddi Udaya

ಸಿಎ ಪರೀಕ್ಷೆಯಲ್ಲಿ ಮಡಂತ್ಯಾರಿನ ಅಲ್ ಸ್ಟನ್ ಸೋನಿಲ್ ಡಯಾಸ್ ತೇರ್ಗಡೆ

Suddi Udaya

ಉಡುಪಿ ಶ್ರೀಕೃಷ್ಣ ಮಾಸೋತ್ಸವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್ ದಂಪತಿಗಳಿಗೆ ಶ್ರೀಕೃಷ್ಣಾನುಗ್ರಹ ಪ್ರಶಸ್ತಿ ನೀಡಿ ಗೌರವ

Suddi Udaya

ಮುಂಡಾಜೆ ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!