September 6, 2026
ಗ್ರಾಮಾಂತರ ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಬಸ್ಸಿನಲ್ಲಿ ಮಹಿಳೆಯರ ಬಗ್ಗೆ ಅಶ್ಲೀಲ ಪದ ಬಳಕೆ:ಮೂವರ ಮೇಲೆ ಅಪರಿಚಿತರಿಂದ ಹಲ್ಲೆ; ಪ್ರಕರಣ ದಾಖಲು

ಬೆಳ್ತಂಗಡಿ : ಬಸ್ಸಿನಲ್ಲಿ ಕುಟುಂಬದೊಂದಿಗೆ ಪ್ರಯಾಣಿಸುತ್ತಿದ್ದ ನಾವೂರು ಗ್ರಾಮದ ಮಹಿಳೆ ಮತ್ತು ಅವರಿಬ್ಬರು ಮಕ್ಕಳಿಗೆ ಅಪರಿಚಿತ ಯುವಕರಿಬ್ಬರು ಹಲ್ಲೆ ನಡೆಸಿದ ಘಟನೆ ಜ.10 ರಂದು ನಡೆದಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ನಿರಿಂದಿ ನಿವಾಸಿ ರಝಾಕ್ ಅವರ ಪತ್ನಿ ಆಸೀದಾ(38), ಪುತ್ರರಾದ ಮುಝಫರ್(20) ಮತ್ತು ಮುರ್ಷಿದ್(19) ಹಲ್ಲೆಗೊಳಗಾದವರು. ಈ ಪೈಕಿ ಮುಝಪರ್ ಅವರಿಗೆ ತಲೆಗೆ ಹೆಚ್ಚಿನ ಗಾಯವಾಗಿದೆ. ಅವರ ಜೊತೆಗೆ ಎಳೆಯ ಪ್ರಾಯದ ಇಬ್ಬರು ಮಕ್ಕಳೂ ಕೂಡ ಇದ್ದರು. ಅವರು ಈ‌ ಘಟನೆ ನೋಡಿ ಭಯಭೀತರಾಗಿದ್ದರು.

ಮಂಗಳೂರಿನ ಉಚ್ಚಿಲ ಎಂಬಲ್ಲಿ ರವಿವಾರ ನಡೆಯಬೇಕಿದ್ದ ಕುಟುಂಬದ ಕಾರ್ಯಕ್ರಮಕ್ಕೆ ಹೋಗುವ ಉದ್ದೇಶದಿಂದ ಬೆಂಗಳೂರಿನಲ್ಲಿ ಮೊಬೈಲ್ ಅಂಗಡಿ ಹೊಂದಿರುವ ಮುಝಪರ್ ಅವರು ಕಳೆದ ಜ.9 ರಂದು ನಾವೂರು ಮನೆಗೆ ಆಗಮಿಸಿ ಜ.10 ರಂದು 3 ಗಂಟೆಗೆ ತಾಯಿ ಸಹೋದರ ಸಹಿತ ಕೆ‌ಎಸ್‌ಆರ್‌ಟಿಸಿ ಬಸ್ಸಿನಲ್ಲಿ ಮಂಗಳೂರಿಗ ಪ್ರಯಾಣ ಹೊರಟಿದ್ದರು. ಇವರ ಜೊತೆ ಜೊತೆಗೆ ಬೆಳ್ತಂಗಡಿಯಲ್ಲಿ ಬಸ್ಸೇರಿದ್ದ ಇಬ್ಬರು ಅಪರಿಚಿತ ವ್ಯಕ್ತಿಗಳು ಯಾವುದೋ ಅಮಲು ಸೇವಿಸಿದ್ದವರ ರೀತಿ ಕಾಣುತ್ತಿದ್ದವರು ಮಹಿಳೆಯರೂ ಇದ್ದ ಬಸ್ಸಿನಲ್ಲಿ ಜೋರಾದ ಶಬ್ಧದಲ್ಲಿ ಕೆಟ್ಟ ಭಾಷೆಯಲ್ಲಿ‌ ಮಾತನಾಡುತ್ತಿದ್ದರು. ಇದು ಇತರ ಪ್ರಯಾಣಿಕರಿಗೆ ಮತ್ತು ಮಹಿಳೆಯರಿಗೆ ಮುಜುಗರದ ಸನ್ನಿವೇಶ ನಿರ್ಮಿಸಿತ್ತು. ಅವರ ಈ ವರ್ತನೆಯನ್ನು‌ ಕಂಡು ಮುಝಫರ್ ಸಾರ್ವಜನಿಕವಾಗಿ ನೀವು ಈ ರೀತಿ ಮಾತನಾಡುವುದು ಸರಿಯಲ್ಲ ಎಂದು ಇಬ್ಬರು ಯುವಕರಿಗೆ ತಿಳಿಸಿದನ್ನೇ ನೆಪವಾಗಿಟ್ಟುಕೊಂಡು ಅಪರಿಚಿತರು ಇವರ ಮೇಲೆ ಹಲ್ಲೆ‌‌ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಆರಂಭದಲ್ಲಿ ಜಗಳ ಶುರು ಮಾಡಿದ ಯುವಕರ ವರ್ತನೆಯಿಂದ ಮುಝಫರ್ ಅವರ ತಾಯಿ ಕಂಡೆಕ್ಟರ್ ಬಳಿ ಬಸ್ಸು ನಿಲ್ಲಿಸುವಂತೆ ಕೇಳಿಕೊಂಡರು.ಮದ್ದಡ್ಕ‌ ಬಸ್ ನಿಲ್ದಾಣದ ಎದುರು ಹೋಗಿ‌ ಚಾಲಕ ಬಸ್ಸು‌ ನಿಲ್ಲಿಸಿದರು. ಈ ವೇಳೆ ಮುಝಪರ್ ಅವರ ತಾಯಿಯನ್ನು ದೂಡಿ, ಸಹೋದರರು ಇಬ್ಬರಿಗೂ ಹಲ್ಲೆ‌ನಡೆಸಿ ಇಬ್ಬರೂ ಯುವಕರು ಸ್ಥಳದಿಂದ ಪರಾರಿಯಾಗಿದ್ದಾರೆ. ಘಟನೆಯಿಂದ ಗಾಯಗೊಂಡ ಆಸೀದಾ(38), ಪುತ್ರರಾದ ಮುಝಫರ್(20) ಮತ್ತು ಮುರ್ಷಿದ್(19) ಮೂವರು ಗುರುವಾಯನಕರೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣೆಗೆ ಗಾಯಗೊಂಡ ಮುರುಫರ್ ದೂರಿನ ಮೇರೆಗೆ ಜ.10 ರಂದು ಪೊಲೀಸರು 74 115(2) 118(2) 352 r/w 3(5) BNS ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಚುರುಕುಗೊಳಿಸಿದ್ದಾರೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷ ದೀಪೋತ್ಸವದಲ್ಲಿ ಮಾಂಡೋವಿ ಮೋಟಾರ್ಸ್ ಕಾರುಗಳ ಪ್ರದರ್ಶನ

Suddi Udaya

ಗರ್ಡಾಡಿ: ಬಿಜೆಪಿ ಕಾರ್ಯಕರ್ತರ ಹರ್ಷೋಲ್ಲಾಸ

Suddi Udaya

ಜಿಲ್ಲಾ ವಕ್ಫ್‌ ಅಧಿಕಾರಿ ಹಾಜಿ ಅಬೂಬಕ್ಕರ್ ಸೇವೆಯಿಂದ ನಿವೃತ್ತಿ: ಕಾಜೂರು- ಕಿಲ್ಲೂರು ವತಿಯಿಂದ ಗೌರವಾರ್ಪಣೆ

Suddi Udaya

ಮೇ 31: ಭಾರತದ ಉಪ ರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್‌ರವರಿಂದ ಸಿರಿ ಸಂಸ್ಥೆಯ`ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಲೋಕಾರ್ಪಣೆ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಮೈಟ್ ವಿದ್ಯಾರ್ಥಿಗಳಿಂದ ಪ್ರಾಜೆಕ್ಟ್‌ ವಿನ್ಯಾಸ ಕಾರ್ಯಾಗಾರ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!