25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಧಾರ್ಮಿಕವರದಿ

ಮಡಂತ್ಯಾರು: ಪ್ರಶಿಕ್ಷಣ ವರ್ಗ – ಹಿಂದೂ ಸಂಗಮ ಕಾರ್ಯಕ್ರಮ ಆಮಂತ್ರಣ ಪತ್ರ ಬಿಡುಗಡೆ

ಮಡಂತ್ಯಾರು: ಹಿಂದೂ ಸಮಾಜದಲ್ಲಿ ಏಕತೆ, ಸಾಮರಸ್ಯ ಮತ್ತು ಸಂಘಟಿತ ಚಟುವಟಿಕೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಹಿಂದೂ ಸಂಗಮ ಮಡಂತ್ಯಾರು ನಿರ್ವಹಣಾ ತಂಡದ ವತಿಯಿಂದ ಮಡಂತ್ಯಾರು ಮಂಡಲ ನಿರ್ವಹಣಾ ತಂಡದ ಪದಾಧಿಕಾರಿಗಳಿಗಾಗಿ ಪ್ರಶಿಕ್ಷಣ ವರ್ಗ ಹಾಗೂ ಹಿಂದೂ ಸಂಗಮ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ಜ.9ರಂದು ಶ್ರೀ ಮಹಿಷ ಮರ್ಧಿಣಿ ದೇವಸ್ಥಾನ, ಪಾರೆಂಕಿಯಲ್ಲಿ ಯಶಸ್ವಿಯಾಗಿ ನಡೆಯಿತು.

ಕಾರ್ಯಕ್ರಮದಲ್ಲಿ ಹಿಂದೂ ಸಂಗಮದ ಆಶಯ, ಪದಾಧಿಕಾರಿಗಳ ಜವಾಬ್ದಾರಿಗಳು ಹಾಗೂ ಮುಂದಿನ ಕಾರ್ಯಯೋಜನೆಗಳ ಕುರಿತು ಸ್ಪಷ್ಟ ಮಾರ್ಗದರ್ಶನ ನೀಡಲಾಯಿತು. ಈ ಸಂದರ್ಭದಲ್ಲಿ ಹಿಂದೂ ಸಂಗಮ ಕಾರ್ಯಕ್ರಮದ ಆಮಂತ್ರಣ ಪತ್ರವನ್ನು ಬಾರ್ಯ ಶ್ರೀ ಮಹಿಷ ಮರ್ಧಿಣಿ ದೇವಸ್ಥಾನದ ಅರ್ಚಕರಾದ ಶ್ರೀಧರ್ ರಾವ್ ಪೇಜಾವರ ಅವರು ಅಧಿಕೃತವಾಗಿ ಬಿಡುಗಡೆ ಮಾಡಿದರು.

ಪ್ರಶಿಕ್ಷಣ ವರ್ಗವನ್ನು ತಾಲೂಕು ಸಂಯೋಜಕರಾದ ಅನಿಲ್ ಕುಮಾರ್ ಯು ಹಾಗೂ ತಾಲೂಕು ಕಾರ್ಯದರ್ಶಿ ವಸಂತ ಮರಕಡ , ಸಹ ಕೋಶಾಧಿಕಾರಿ ಪ್ರಭಾಕರ ಉಪ್ಪಡ್ಕ, ಮತ್ತು ರಾಜಾರಾಮ್ ಪುರಿಯ ಅವರು ನಡೆಸಿಕೊಟ್ಟರು.ಸಭೆಯಲ್ಲಿ ತಾಲೂಕು ಆಯೋಜನಾ ಸಮಿತಿಯ ಉಪಾಧ್ಯಕ್ಷರಾದ ಜಯಂತ್ ಶೆಟ್ಟಿ ಜೊತೆ ಕಾರ್ಯದರ್ಶಿ ವೀರೇಂದ್ರ ಕುಮಾರ್, ಮಡಂತ್ಯಾರು ಮಂಡಲ ನಿರ್ವಹಣಾ ತಂಡದ ಸಂಯೋಜಕರಾದ ಶ್ರೀಕಾಂತ್ ಶೆಟ್ಟಿ, ಊರಿನ ಗಣ್ಯರು ಹಾಗೂ ಪರಿವಾರ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ ಮಚ್ಚಿನ, ಪಾರೆಂಕಿ, ಮಾಲಾಡಿ, ಸೊಂಣಂದೂರು ಮತ್ತು ಕುಕ್ಕಳ ಗ್ರಾಮಗಳಿಂದ ಸುಮಾರು 92 ಮಂದಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Related posts

ಪಿಲ್ಯ: ನಿನ್ನಿಕಲ್ಲಿನಲ್ಲಿ ಅಡಿಕೆ ತೋಟದಲ್ಲಿ ಅಕ್ರಮ ಮಾರಾಟಕ್ಕೆ ದಾಸ್ತಾನು ಇರಿಸಲಾಗಿದ್ದಮದ್ಯ ಪತ್ತೆ, ಅಬಕಾರಿ ಇಲಾಖೆಯಿಂದ ದಾಳಿ, ಸೊತ್ತುಗಳು ವಶಕ್ಕೆ

Suddi Udaya

ದಿ| ಬಾಬು ಕುಡ್ತಡ್ಕ ಪ್ರಶಸ್ತಿಗೆ ಹಿರಿಯ ಯಕ್ಷಗಾನ ಕಲಾವಿದ ವೇಣೂರು ಸದಾಶಿವ ಕುಲಾಲ್ ಆಯ್ಕೆ

Suddi Udaya

ನಾಪತ್ತೆಯಾಗಿದ್ದ ಮಾಚಾರು ನಿವಾಸಿ ಆಟೋ ಚಾಲಕ ಸುಧಾಕರ್ ಮೃತದೇಹ ನೆಲ್ಲಿಕಾರ್ ಕಾಡಿನಲ್ಲಿ ನೇಣು ಹಾಕಿಕೊಂಡ ರೀತಿಯಲ್ಲಿ ಪತ್ತೆ

Suddi Udaya

ಮೇಲಂತಬೆಟ್ಟು ಶ್ರೀ ದೇವಿಭಗವತಿ ಅಮ್ಮನವರ ದೇವಸ್ಥಾನದಲ್ಲಿ ದೃಢಕಲಶಾಭಿಷೇಕ : ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಹೆಗ್ಗಡೆ ಭೇಟಿ

Suddi Udaya

ಬೆನಕ ರಜತ ಸಂಭ್ರಮ ಲಾಂಛನ ಅನಾವರಣ

Suddi Udaya

ಪಿಡಬ್ಲ್ಯೂಡಿ ಗುತ್ತಿಗೆದಾರ ಮಹಮ್ಮದ್ ಮದ್ದಡ್ಕ ಅಸೌಖ್ಯದಿಂದ ನಿಧನ

Suddi Udaya
error: Content is protected !!