September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಧಾರ್ಮಿಕವರದಿ

ಮಡಂತ್ಯಾರು: ಪ್ರಶಿಕ್ಷಣ ವರ್ಗ – ಹಿಂದೂ ಸಂಗಮ ಕಾರ್ಯಕ್ರಮ ಆಮಂತ್ರಣ ಪತ್ರ ಬಿಡುಗಡೆ

ಮಡಂತ್ಯಾರು: ಹಿಂದೂ ಸಮಾಜದಲ್ಲಿ ಏಕತೆ, ಸಾಮರಸ್ಯ ಮತ್ತು ಸಂಘಟಿತ ಚಟುವಟಿಕೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಹಿಂದೂ ಸಂಗಮ ಮಡಂತ್ಯಾರು ನಿರ್ವಹಣಾ ತಂಡದ ವತಿಯಿಂದ ಮಡಂತ್ಯಾರು ಮಂಡಲ ನಿರ್ವಹಣಾ ತಂಡದ ಪದಾಧಿಕಾರಿಗಳಿಗಾಗಿ ಪ್ರಶಿಕ್ಷಣ ವರ್ಗ ಹಾಗೂ ಹಿಂದೂ ಸಂಗಮ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ಜ.9ರಂದು ಶ್ರೀ ಮಹಿಷ ಮರ್ಧಿಣಿ ದೇವಸ್ಥಾನ, ಪಾರೆಂಕಿಯಲ್ಲಿ ಯಶಸ್ವಿಯಾಗಿ ನಡೆಯಿತು.

ಕಾರ್ಯಕ್ರಮದಲ್ಲಿ ಹಿಂದೂ ಸಂಗಮದ ಆಶಯ, ಪದಾಧಿಕಾರಿಗಳ ಜವಾಬ್ದಾರಿಗಳು ಹಾಗೂ ಮುಂದಿನ ಕಾರ್ಯಯೋಜನೆಗಳ ಕುರಿತು ಸ್ಪಷ್ಟ ಮಾರ್ಗದರ್ಶನ ನೀಡಲಾಯಿತು. ಈ ಸಂದರ್ಭದಲ್ಲಿ ಹಿಂದೂ ಸಂಗಮ ಕಾರ್ಯಕ್ರಮದ ಆಮಂತ್ರಣ ಪತ್ರವನ್ನು ಬಾರ್ಯ ಶ್ರೀ ಮಹಿಷ ಮರ್ಧಿಣಿ ದೇವಸ್ಥಾನದ ಅರ್ಚಕರಾದ ಶ್ರೀಧರ್ ರಾವ್ ಪೇಜಾವರ ಅವರು ಅಧಿಕೃತವಾಗಿ ಬಿಡುಗಡೆ ಮಾಡಿದರು.

ಪ್ರಶಿಕ್ಷಣ ವರ್ಗವನ್ನು ತಾಲೂಕು ಸಂಯೋಜಕರಾದ ಅನಿಲ್ ಕುಮಾರ್ ಯು ಹಾಗೂ ತಾಲೂಕು ಕಾರ್ಯದರ್ಶಿ ವಸಂತ ಮರಕಡ , ಸಹ ಕೋಶಾಧಿಕಾರಿ ಪ್ರಭಾಕರ ಉಪ್ಪಡ್ಕ, ಮತ್ತು ರಾಜಾರಾಮ್ ಪುರಿಯ ಅವರು ನಡೆಸಿಕೊಟ್ಟರು.ಸಭೆಯಲ್ಲಿ ತಾಲೂಕು ಆಯೋಜನಾ ಸಮಿತಿಯ ಉಪಾಧ್ಯಕ್ಷರಾದ ಜಯಂತ್ ಶೆಟ್ಟಿ ಜೊತೆ ಕಾರ್ಯದರ್ಶಿ ವೀರೇಂದ್ರ ಕುಮಾರ್, ಮಡಂತ್ಯಾರು ಮಂಡಲ ನಿರ್ವಹಣಾ ತಂಡದ ಸಂಯೋಜಕರಾದ ಶ್ರೀಕಾಂತ್ ಶೆಟ್ಟಿ, ಊರಿನ ಗಣ್ಯರು ಹಾಗೂ ಪರಿವಾರ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ ಮಚ್ಚಿನ, ಪಾರೆಂಕಿ, ಮಾಲಾಡಿ, ಸೊಂಣಂದೂರು ಮತ್ತು ಕುಕ್ಕಳ ಗ್ರಾಮಗಳಿಂದ ಸುಮಾರು 92 ಮಂದಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Related posts

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ ಡಿಸಿಎ-ಬ್ಯೂಟಿಷಿಯನ್ ಕೋರ್ಸ್‌ಗಳ ದಾಖಲಾತಿ ಪ್ರಾರಂಭ

Suddi Udaya

ಶಾಮಿಯಾನ ಮಾಲಕರ ಸಂಘ ಬೆಳ್ತಂಗಡಿ ಘಟಕದ ಅಧ್ಯಕ್ಷರಾಗಿ ಅರುಣ್ ಮೊರಾಸ್, ಪ್ರ. ಕಾರ್ಯದರ್ಶಿಯಾಗಿ ಮಾತುಕುಟ್ಟಿ, ಕೋಶಾಧಿಕಾರಿಯಾಗಿ ಅಶ್ವಥ್ ಕುಮಾರ್

Suddi Udaya

ಜಿಲ್ಲಾಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಾಣಿ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತಂಡಕ್ಕೆ ದ್ವಿತೀಯ ಸಮಗ್ರ ಪ್ರಶಸ್ತಿ

Suddi Udaya

ಉಜಿರೆ ಎಸ್‌ಡಿಎಂ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ

Suddi Udaya

ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ ಮೋಹನ್ ಕುಮಾರ್ ಕಚೇರಿಗೆ ಕ್ಯಾ. ಬ್ರಿಜೇಶ್ ಚೌಟ ಭೇಟಿ:

Suddi Udaya

ಬೆಳ್ತಂಗಡಿ: ಕು. ಸೌಜನ್ಯ ಕೊಲೆ ಪ್ರಕರಣ: ಪ್ರಜಾಪ್ರಭುತ್ವ ವೇದಿಕೆ ಹಾಗೂ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

Suddi Udaya
error: Content is protected !!