ವೇಣೂರು; ಇಲ್ಲಿಯ ಶಿವಾಜಿ ನಗರದ ಜನತಾ ಕಾಲೋನಿಯ ಶ್ರೀ ದೇವಿ ಆದಿಶಕ್ತಿ ಭಜನಾ ಮಂದಿರದ ಜೀರ್ಣೋದ್ದಾರ ಮತ್ತು ಅಭಿವೃದ್ದಿಯ ಕಾರ್ಯಗಳಿಗೆ ಸಂಬಂದಿಸಿದ ವಿಜ್ಞಾಪನಾ ಪತ್ರವನ್ನು ಡಿ.31ರಂದು ಗಣಹೋಮ, ಸರಸ್ವತಿ ಪೂಜೆ, ಶ್ರೀದೇವಿ ಆದಿಶಕ್ತಿ ಅಮ್ಮನವರಿಗೆ ಮಹಾಪೂಜೆಯೊಂದಿಗೆ ಪ್ರಾರ್ಥನೆಯನ್ನು ಸಲ್ಲಿಸಿದ ಬಳಿಕ ಭಜನಾ ಮಂದಿರದ ಆದಿಶಕ್ತಿ ಕಲಾ ಭವನದಲ್ಲಿ ವಿಜ್ಞಾಪನಾ ಪತ್ರವನ್ನು ಬಿಡುಗಡೆಗೊಳಿಸಲಾಯಿತು.

ಈ ಕಾರ್ಯಕ್ರಮದಲ್ಲಿ ವೇಣೂರು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಜಯರಾಮ ಶೆಟ್ಟಿ ಖಂಡಿಗ, ಮಾಜಿ ತಾಲೂಕು ಪಂಚಾಯತ್ ಸದಸ್ಯ ವಿಜಯ ಗೌಡ, ಗ್ರಾ.ಪಂ. ಸದಸ್ಯ ಲೋಕಯ್ಯ ಪೂಜಾರಿ, ಗ್ರಾ.ಪಂ.ಮಾಜಿ ಅಧ್ಯಕ್ಷ ಸತೀಶ್ ಹೆಗ್ಡೆ, ಗ್ರಾ.ಪಂ. ಸದಸ್ಯ ನೇಮಯ್ಯ ಕುಲಾಲ್, ಧರ್ಮಸ್ಥಳ ಗ್ರಾಮಾಭಿವೃದ್ದಿಯ ಯೋಜನೆಯ ವೇಣೂರು ವಲಯ ಮೇಲ್ವಿಚಾರಕಿ ಶ್ರೀಮತಿ ಶಾಲಿನಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಲಯ ಸೇವಾ ಪ್ರತಿನಿಧಿ ಶ್ರೀಮತಿ ಜಯಂತಿ, ಭಜನಾ ಮಂದಿರದ ಸಂಚಾಲಕ ಶಂಕರ ಎಸ್, ಗೌರವಾಧ್ಯಕ್ಷ ಶಿವಪ್ಪ ಕೊಳಚಲ, ಅಧ್ಯಕ್ಷ ಯೋಗೀಶ್ ಕೆ.ಬಿ. ಉಪಸ್ಥಿತರಿದ್ದರು.ಪ್ರಸ್ತಾವಿಕ ಬಾಷಣವನ್ನು ಸಂಚಾಲಕರಾದ ಶಂಕರ ಎಸ್ ನೆರವೇರಿಸಿದರು. ಸದಾಶಿವ ಡಿ. ಸ್ವಾಗತಿಸಿ, ಶೇಖರ್ ವಿ.ಜಿ ವಂದಿಸಿದರು.











