23.5 C
ಪುತ್ತೂರು, ಬೆಳ್ತಂಗಡಿ
June 8, 2026
ಧಾರ್ಮಿಕವರದಿ

ವೇಣೂರು: ಶ್ರೀ ದೇವಿ ಆದಿಶಕ್ತಿ ಭಜನಾ ಮಂದಿರ ಜೀರ್ಣೋದ್ದಾರ ಮತ್ತು ಅಭಿವೃದ್ದಿ ಕಾರ್ಯವಿಜ್ಞಾಪನಾ ಪತ್ರ ಬಿಡುಗಡೆ

ವೇಣೂರು; ಇಲ್ಲಿಯ ಶಿವಾಜಿ ನಗರದ ಜನತಾ ಕಾಲೋನಿಯ ಶ್ರೀ ದೇವಿ ಆದಿಶಕ್ತಿ ಭಜನಾ ಮಂದಿರದ ಜೀರ್ಣೋದ್ದಾರ ಮತ್ತು ಅಭಿವೃದ್ದಿಯ ಕಾರ್ಯಗಳಿಗೆ ಸಂಬಂದಿಸಿದ ವಿಜ್ಞಾಪನಾ ಪತ್ರವನ್ನು ಡಿ.31ರಂದು ಗಣಹೋಮ, ಸರಸ್ವತಿ ಪೂಜೆ, ಶ್ರೀದೇವಿ ಆದಿಶಕ್ತಿ ಅಮ್ಮನವರಿಗೆ ಮಹಾಪೂಜೆಯೊಂದಿಗೆ ಪ್ರಾರ್ಥನೆಯನ್ನು ಸಲ್ಲಿಸಿದ ಬಳಿಕ ಭಜನಾ ಮಂದಿರದ ಆದಿಶಕ್ತಿ ಕಲಾ ಭವನದಲ್ಲಿ ವಿಜ್ಞಾಪನಾ ಪತ್ರವನ್ನು ಬಿಡುಗಡೆಗೊಳಿಸಲಾಯಿತು.

ಈ ಕಾರ್ಯಕ್ರಮದಲ್ಲಿ ವೇಣೂರು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಜಯರಾಮ ಶೆಟ್ಟಿ ಖಂಡಿಗ, ಮಾಜಿ ತಾಲೂಕು ಪಂಚಾಯತ್ ಸದಸ್ಯ ವಿಜಯ ಗೌಡ, ಗ್ರಾ.ಪಂ. ಸದಸ್ಯ ಲೋಕಯ್ಯ ಪೂಜಾರಿ, ಗ್ರಾ.ಪಂ.ಮಾಜಿ ಅಧ್ಯಕ್ಷ ಸತೀಶ್ ಹೆಗ್ಡೆ, ಗ್ರಾ.ಪಂ. ಸದಸ್ಯ ನೇಮಯ್ಯ ಕುಲಾಲ್, ಧರ್ಮಸ್ಥಳ ಗ್ರಾಮಾಭಿವೃದ್ದಿಯ ಯೋಜನೆಯ ವೇಣೂರು ವಲಯ ಮೇಲ್ವಿಚಾರಕಿ ಶ್ರೀಮತಿ ಶಾಲಿನಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಲಯ ಸೇವಾ ಪ್ರತಿನಿಧಿ ಶ್ರೀಮತಿ ಜಯಂತಿ, ಭಜನಾ ಮಂದಿರದ ಸಂಚಾಲಕ ಶಂಕರ ಎಸ್, ಗೌರವಾಧ್ಯಕ್ಷ ಶಿವಪ್ಪ ಕೊಳಚಲ, ಅಧ್ಯಕ್ಷ ಯೋಗೀಶ್ ಕೆ.ಬಿ. ಉಪಸ್ಥಿತರಿದ್ದರು.ಪ್ರಸ್ತಾವಿಕ ಬಾಷಣವನ್ನು ಸಂಚಾಲಕರಾದ ಶಂಕರ ಎಸ್ ನೆರವೇರಿಸಿದರು. ಸದಾಶಿವ ಡಿ. ಸ್ವಾಗತಿಸಿ, ಶೇಖರ್ ವಿ.ಜಿ ವಂದಿಸಿದರು.

Related posts

ಧರ್ಮಸ್ಥಳ: ಉಚಿತ ಫೂಟ್ ಫಲ್ ಥೆರಪಿ ಶಿಬಿರ: ಮಾಹಿತಿ ಕಾರ್ಯಗಾರ

Suddi Udaya

ಕರಾಯ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ಭಜನಾ ತರಬೇತಿ ಕಾರ್ಯಾಗಾರ

Suddi Udaya

ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆಯಲ್ಲಿ ಸಮೃದ್ದ್ ನಿಟ್ಟಡೆ ತೇರ್ಗಡೆ

Suddi Udaya

ಬೆಳ್ತಂಗಡಿ ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಸರಕಾರಿ ಸೇವೆಯಿಂದ ನಿವೃತ್ತರಾದ ಡಾ. ಕೆ. ಜಯಕೀರ್ತಿ ಜೈನ್ ರವರಿಗೆ ಅಭಿನಂದನಾ ಸಮಾರಂಭ

Suddi Udaya

ಬೆಳ್ತಂಗಡಿ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದಿಂದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 352 ನೇ ಆರಾಧನಾ ಮಹೋತ್ಸವ

Suddi Udaya

ಧರ್ಮಸ್ಥಳ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ಜಾತ್ರಾಮಹೋತ್ಸವದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya
error: Content is protected !!