September 6, 2026
ಧಾರ್ಮಿಕವರದಿ

ವೇಣೂರು: ಶ್ರೀ ದೇವಿ ಆದಿಶಕ್ತಿ ಭಜನಾ ಮಂದಿರ ಜೀರ್ಣೋದ್ದಾರ ಮತ್ತು ಅಭಿವೃದ್ದಿ ಕಾರ್ಯವಿಜ್ಞಾಪನಾ ಪತ್ರ ಬಿಡುಗಡೆ

ವೇಣೂರು; ಇಲ್ಲಿಯ ಶಿವಾಜಿ ನಗರದ ಜನತಾ ಕಾಲೋನಿಯ ಶ್ರೀ ದೇವಿ ಆದಿಶಕ್ತಿ ಭಜನಾ ಮಂದಿರದ ಜೀರ್ಣೋದ್ದಾರ ಮತ್ತು ಅಭಿವೃದ್ದಿಯ ಕಾರ್ಯಗಳಿಗೆ ಸಂಬಂದಿಸಿದ ವಿಜ್ಞಾಪನಾ ಪತ್ರವನ್ನು ಡಿ.31ರಂದು ಗಣಹೋಮ, ಸರಸ್ವತಿ ಪೂಜೆ, ಶ್ರೀದೇವಿ ಆದಿಶಕ್ತಿ ಅಮ್ಮನವರಿಗೆ ಮಹಾಪೂಜೆಯೊಂದಿಗೆ ಪ್ರಾರ್ಥನೆಯನ್ನು ಸಲ್ಲಿಸಿದ ಬಳಿಕ ಭಜನಾ ಮಂದಿರದ ಆದಿಶಕ್ತಿ ಕಲಾ ಭವನದಲ್ಲಿ ವಿಜ್ಞಾಪನಾ ಪತ್ರವನ್ನು ಬಿಡುಗಡೆಗೊಳಿಸಲಾಯಿತು.

ಈ ಕಾರ್ಯಕ್ರಮದಲ್ಲಿ ವೇಣೂರು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಜಯರಾಮ ಶೆಟ್ಟಿ ಖಂಡಿಗ, ಮಾಜಿ ತಾಲೂಕು ಪಂಚಾಯತ್ ಸದಸ್ಯ ವಿಜಯ ಗೌಡ, ಗ್ರಾ.ಪಂ. ಸದಸ್ಯ ಲೋಕಯ್ಯ ಪೂಜಾರಿ, ಗ್ರಾ.ಪಂ.ಮಾಜಿ ಅಧ್ಯಕ್ಷ ಸತೀಶ್ ಹೆಗ್ಡೆ, ಗ್ರಾ.ಪಂ. ಸದಸ್ಯ ನೇಮಯ್ಯ ಕುಲಾಲ್, ಧರ್ಮಸ್ಥಳ ಗ್ರಾಮಾಭಿವೃದ್ದಿಯ ಯೋಜನೆಯ ವೇಣೂರು ವಲಯ ಮೇಲ್ವಿಚಾರಕಿ ಶ್ರೀಮತಿ ಶಾಲಿನಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಲಯ ಸೇವಾ ಪ್ರತಿನಿಧಿ ಶ್ರೀಮತಿ ಜಯಂತಿ, ಭಜನಾ ಮಂದಿರದ ಸಂಚಾಲಕ ಶಂಕರ ಎಸ್, ಗೌರವಾಧ್ಯಕ್ಷ ಶಿವಪ್ಪ ಕೊಳಚಲ, ಅಧ್ಯಕ್ಷ ಯೋಗೀಶ್ ಕೆ.ಬಿ. ಉಪಸ್ಥಿತರಿದ್ದರು.ಪ್ರಸ್ತಾವಿಕ ಬಾಷಣವನ್ನು ಸಂಚಾಲಕರಾದ ಶಂಕರ ಎಸ್ ನೆರವೇರಿಸಿದರು. ಸದಾಶಿವ ಡಿ. ಸ್ವಾಗತಿಸಿ, ಶೇಖರ್ ವಿ.ಜಿ ವಂದಿಸಿದರು.

Related posts

ಮೇ.3 : ಪುಂಜಾಲಕಟ್ಟೆಯಲ್ಲಿ ಹೆಸರಾಂತ ಬಿ.ಪುಂಡಲೀಕ ಬಾಳಿಗಾ & ಸನ್ಸ್ ಜ್ಯುವೆಲ್ಲರ್‍ಸ್ ವಿಸ್ತೃತ ನೂತನ ಮಳಿಗೆಯ ಶುಭಾರಂಭ

Suddi Udaya

ಬೊಳ್ಳಜ್ಜ ದೈವದ ಮೂಲಸ್ಥಾನದಲ್ಲಿ ಸಾರ್ವಜನಿಕರಿಂದ ಅಗೇಲು ಸೇವೆ: ಶ್ರದ್ಧಾ ಭಕ್ತಿಯಿಂದ ಸಹಸ್ರಾರು ಭಕ್ತರಿಂದ ಬೊಳ್ಳಜ್ಜನಿಗೆ ಅಗೇಲು ಸಮರ್ಪಣೆ

Suddi Udaya

ಉಜಿರೆ: ಓಡಲದಲ್ಲಿ ಮಹಿಳೆಯ ಕುತ್ತಿಗೆಯಿಂದ ಚಿನ್ನದ ಸರ ಎಗರಿಸಿ ಪರಾರಿ

Suddi Udaya

ತಿರುವನಂತಪುರ ಶ್ರೀ ಅನಂತ ಪದ್ಮನಾಭ ದೇವಸ್ಥಾನದ ಪ್ರಧಾನ ಅರ್ಚಕರಾಗಿ ಸತ್ಯನಾರಾಯಣ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಬೆಳ್ತಂಗಡಿ: ಸರಕಾರಿ ಶಾಲೆಗಳ ನೂತನ ಕೊಠಡಿ ನಿರ್ಮಾಣಕ್ಕೆ ರೂ.1.715 ಕೋಟಿ ಅನುದಾನ ಮಂಜೂರು: ಹರೀಶ್ ಪೂಂಜ

Suddi Udaya
error: Content is protected !!