ಉಜಿರೆ: ಉಜಿರೆ ಗ್ರಾಮದ ಕಲ್ಲೆ ಅಜಿತ್ ನಗರದಲ್ಲಿರುವ ಶ್ರೀ ವನದುರ್ಗಾ ಶ್ರೀ ನಾಗರಕೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ, ವೇದಮೂರ್ತಿ ಪಿ.ಆರ್. ಯಡಪಡಿತ್ತಾಯ ರವರ ಪೌರೋಹಿತ್ಯದಲ್ಲಿ ವಿವಿಧ ಧಾರ್ಮಿಕ ವಿಧಿ-ವಿಧಾನಗಳು ನೆರವೇರಿ ನಿನ್ನೆ ಸಂಜೆ ಸಾನಿಧ್ಯದ ದೈವಗಳಾದ ಮಹಿಷಾಂತಾಯ, ರಕ್ತೇಶ್ವರಿ, ಕಲ್ಲುರ್ಟಿ ಪಂಜುರ್ಲಿ, ಗುಳಿಗ ದೈವಗಳಿಗೆ ನರ್ತನ ಸೇವೆ ಜರುಗಿತು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಸೇರಿದಂತೆ ವಿವಿಧ ಕ್ಷೇತ್ರದ ಗಣ್ಯರು, ಭಕ್ತರು ಭಾಗವಹಿಸಿ ದೈವದ ಸಿರಿಮುಡಿ ಗಂಧ ಪ್ರಸಾದವನ್ನು ಸ್ವೀಕರಿಸಿದರು.











