July 23, 2026
ಗ್ರಾಮಾಂತರ ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಬಸ್ಸಿನಲ್ಲಿ ಮಹಿಳೆಯರ ಬಗ್ಗೆ ಅಶ್ಲೀಲ ಪದ ಬಳಕೆ:ಮೂವರ ಮೇಲೆ ಅಪರಿಚಿತರಿಂದ ಹಲ್ಲೆ; ಪ್ರಕರಣ ದಾಖಲು

ಬೆಳ್ತಂಗಡಿ : ಬಸ್ಸಿನಲ್ಲಿ ಕುಟುಂಬದೊಂದಿಗೆ ಪ್ರಯಾಣಿಸುತ್ತಿದ್ದ ನಾವೂರು ಗ್ರಾಮದ ಮಹಿಳೆ ಮತ್ತು ಅವರಿಬ್ಬರು ಮಕ್ಕಳಿಗೆ ಅಪರಿಚಿತ ಯುವಕರಿಬ್ಬರು ಹಲ್ಲೆ ನಡೆಸಿದ ಘಟನೆ ಜ.10 ರಂದು ನಡೆದಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ನಿರಿಂದಿ ನಿವಾಸಿ ರಝಾಕ್ ಅವರ ಪತ್ನಿ ಆಸೀದಾ(38), ಪುತ್ರರಾದ ಮುಝಫರ್(20) ಮತ್ತು ಮುರ್ಷಿದ್(19) ಹಲ್ಲೆಗೊಳಗಾದವರು. ಈ ಪೈಕಿ ಮುಝಪರ್ ಅವರಿಗೆ ತಲೆಗೆ ಹೆಚ್ಚಿನ ಗಾಯವಾಗಿದೆ. ಅವರ ಜೊತೆಗೆ ಎಳೆಯ ಪ್ರಾಯದ ಇಬ್ಬರು ಮಕ್ಕಳೂ ಕೂಡ ಇದ್ದರು. ಅವರು ಈ‌ ಘಟನೆ ನೋಡಿ ಭಯಭೀತರಾಗಿದ್ದರು.

ಮಂಗಳೂರಿನ ಉಚ್ಚಿಲ ಎಂಬಲ್ಲಿ ರವಿವಾರ ನಡೆಯಬೇಕಿದ್ದ ಕುಟುಂಬದ ಕಾರ್ಯಕ್ರಮಕ್ಕೆ ಹೋಗುವ ಉದ್ದೇಶದಿಂದ ಬೆಂಗಳೂರಿನಲ್ಲಿ ಮೊಬೈಲ್ ಅಂಗಡಿ ಹೊಂದಿರುವ ಮುಝಪರ್ ಅವರು ಕಳೆದ ಜ.9 ರಂದು ನಾವೂರು ಮನೆಗೆ ಆಗಮಿಸಿ ಜ.10 ರಂದು 3 ಗಂಟೆಗೆ ತಾಯಿ ಸಹೋದರ ಸಹಿತ ಕೆ‌ಎಸ್‌ಆರ್‌ಟಿಸಿ ಬಸ್ಸಿನಲ್ಲಿ ಮಂಗಳೂರಿಗ ಪ್ರಯಾಣ ಹೊರಟಿದ್ದರು. ಇವರ ಜೊತೆ ಜೊತೆಗೆ ಬೆಳ್ತಂಗಡಿಯಲ್ಲಿ ಬಸ್ಸೇರಿದ್ದ ಇಬ್ಬರು ಅಪರಿಚಿತ ವ್ಯಕ್ತಿಗಳು ಯಾವುದೋ ಅಮಲು ಸೇವಿಸಿದ್ದವರ ರೀತಿ ಕಾಣುತ್ತಿದ್ದವರು ಮಹಿಳೆಯರೂ ಇದ್ದ ಬಸ್ಸಿನಲ್ಲಿ ಜೋರಾದ ಶಬ್ಧದಲ್ಲಿ ಕೆಟ್ಟ ಭಾಷೆಯಲ್ಲಿ‌ ಮಾತನಾಡುತ್ತಿದ್ದರು. ಇದು ಇತರ ಪ್ರಯಾಣಿಕರಿಗೆ ಮತ್ತು ಮಹಿಳೆಯರಿಗೆ ಮುಜುಗರದ ಸನ್ನಿವೇಶ ನಿರ್ಮಿಸಿತ್ತು. ಅವರ ಈ ವರ್ತನೆಯನ್ನು‌ ಕಂಡು ಮುಝಫರ್ ಸಾರ್ವಜನಿಕವಾಗಿ ನೀವು ಈ ರೀತಿ ಮಾತನಾಡುವುದು ಸರಿಯಲ್ಲ ಎಂದು ಇಬ್ಬರು ಯುವಕರಿಗೆ ತಿಳಿಸಿದನ್ನೇ ನೆಪವಾಗಿಟ್ಟುಕೊಂಡು ಅಪರಿಚಿತರು ಇವರ ಮೇಲೆ ಹಲ್ಲೆ‌‌ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಆರಂಭದಲ್ಲಿ ಜಗಳ ಶುರು ಮಾಡಿದ ಯುವಕರ ವರ್ತನೆಯಿಂದ ಮುಝಫರ್ ಅವರ ತಾಯಿ ಕಂಡೆಕ್ಟರ್ ಬಳಿ ಬಸ್ಸು ನಿಲ್ಲಿಸುವಂತೆ ಕೇಳಿಕೊಂಡರು.ಮದ್ದಡ್ಕ‌ ಬಸ್ ನಿಲ್ದಾಣದ ಎದುರು ಹೋಗಿ‌ ಚಾಲಕ ಬಸ್ಸು‌ ನಿಲ್ಲಿಸಿದರು. ಈ ವೇಳೆ ಮುಝಪರ್ ಅವರ ತಾಯಿಯನ್ನು ದೂಡಿ, ಸಹೋದರರು ಇಬ್ಬರಿಗೂ ಹಲ್ಲೆ‌ನಡೆಸಿ ಇಬ್ಬರೂ ಯುವಕರು ಸ್ಥಳದಿಂದ ಪರಾರಿಯಾಗಿದ್ದಾರೆ. ಘಟನೆಯಿಂದ ಗಾಯಗೊಂಡ ಆಸೀದಾ(38), ಪುತ್ರರಾದ ಮುಝಫರ್(20) ಮತ್ತು ಮುರ್ಷಿದ್(19) ಮೂವರು ಗುರುವಾಯನಕರೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣೆಗೆ ಗಾಯಗೊಂಡ ಮುರುಫರ್ ದೂರಿನ ಮೇರೆಗೆ ಜ.10 ರಂದು ಪೊಲೀಸರು 74 115(2) 118(2) 352 r/w 3(5) BNS ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಚುರುಕುಗೊಳಿಸಿದ್ದಾರೆ.

Related posts

ಕಲ್ಲೇರಿ: ಅಡಿಕೆ ಬೆಳೆ ಮತ್ತು ಕಾಳುಮೆಣಸು ಬೆಳೆಗಳ ಆಧುನಿಕ ಬೇಸಾಯ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ

Suddi Udaya

ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ನೂತನ ಶಿಲಾಮಯ ಧ್ವಜಸ್ತಂಭದ ಸ್ಥಾಪನೆ

Suddi Udaya

ಬಳಂಜ ಸ.ಹಿ.ಪ್ರಾ. ಶಾಲೆಯ ಅಭಿವೃದ್ಧಿಗೆ ರೂ. 2.00 ಕೋಟಿ ಅನುದಾನ ಮಂಜೂರುಗೊಳಿಸುವಂತೆ ಶಾಸಕ ಹರೀಶ್ ಪೂಂಜರಿಂದ ಶಿಕ್ಷಣ ಸಚಿವ ಮಧು ಬಂಗಾರಪ್ಪರವರಿಗೆ ಮನವಿ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : 2644 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಕೊಯ್ಯೂರು: ಸೋಮಾವತಿ ನದಿ ಕಿನಾರೆಯಿಂದ ಅಕ್ರಮ ಮರಳು ಸಾಗಟ: ಬೆಳ್ತಂಗಡಿ ಪೊಲೀಸರಿಂದ ದಾಳಿ: ಆರೋಪಿಗಳ ಸಹಿತ ಸ್ಥಳದಲ್ಲಿದ್ದ ರೂ. 23.56 ಲಕ್ಷ ಮೌಲ್ಯದ ವಾಹನ ಹಾಗೂ ಸೊತ್ತುಗಳ ವಶ

Suddi Udaya

ಎಸ್. ಎಮ್ .ಎ. ಉಜಿರೆ ರೀಜಿನಲ್ ವತಿಯಿಂದ ರಂಝನ್ ಕಿಟ್ ವಿತರಣೆ

Suddi Udaya
error: Content is protected !!