September 6, 2026
ಧಾರ್ಮಿಕವರದಿ

ವೇಣೂರು: ಶ್ರೀ ದೇವಿ ಆದಿಶಕ್ತಿ ಭಜನಾ ಮಂದಿರ ಜೀರ್ಣೋದ್ದಾರ ಮತ್ತು ಅಭಿವೃದ್ದಿ ಕಾರ್ಯವಿಜ್ಞಾಪನಾ ಪತ್ರ ಬಿಡುಗಡೆ

ವೇಣೂರು; ಇಲ್ಲಿಯ ಶಿವಾಜಿ ನಗರದ ಜನತಾ ಕಾಲೋನಿಯ ಶ್ರೀ ದೇವಿ ಆದಿಶಕ್ತಿ ಭಜನಾ ಮಂದಿರದ ಜೀರ್ಣೋದ್ದಾರ ಮತ್ತು ಅಭಿವೃದ್ದಿಯ ಕಾರ್ಯಗಳಿಗೆ ಸಂಬಂದಿಸಿದ ವಿಜ್ಞಾಪನಾ ಪತ್ರವನ್ನು ಡಿ.31ರಂದು ಗಣಹೋಮ, ಸರಸ್ವತಿ ಪೂಜೆ, ಶ್ರೀದೇವಿ ಆದಿಶಕ್ತಿ ಅಮ್ಮನವರಿಗೆ ಮಹಾಪೂಜೆಯೊಂದಿಗೆ ಪ್ರಾರ್ಥನೆಯನ್ನು ಸಲ್ಲಿಸಿದ ಬಳಿಕ ಭಜನಾ ಮಂದಿರದ ಆದಿಶಕ್ತಿ ಕಲಾ ಭವನದಲ್ಲಿ ವಿಜ್ಞಾಪನಾ ಪತ್ರವನ್ನು ಬಿಡುಗಡೆಗೊಳಿಸಲಾಯಿತು.

ಈ ಕಾರ್ಯಕ್ರಮದಲ್ಲಿ ವೇಣೂರು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಜಯರಾಮ ಶೆಟ್ಟಿ ಖಂಡಿಗ, ಮಾಜಿ ತಾಲೂಕು ಪಂಚಾಯತ್ ಸದಸ್ಯ ವಿಜಯ ಗೌಡ, ಗ್ರಾ.ಪಂ. ಸದಸ್ಯ ಲೋಕಯ್ಯ ಪೂಜಾರಿ, ಗ್ರಾ.ಪಂ.ಮಾಜಿ ಅಧ್ಯಕ್ಷ ಸತೀಶ್ ಹೆಗ್ಡೆ, ಗ್ರಾ.ಪಂ. ಸದಸ್ಯ ನೇಮಯ್ಯ ಕುಲಾಲ್, ಧರ್ಮಸ್ಥಳ ಗ್ರಾಮಾಭಿವೃದ್ದಿಯ ಯೋಜನೆಯ ವೇಣೂರು ವಲಯ ಮೇಲ್ವಿಚಾರಕಿ ಶ್ರೀಮತಿ ಶಾಲಿನಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಲಯ ಸೇವಾ ಪ್ರತಿನಿಧಿ ಶ್ರೀಮತಿ ಜಯಂತಿ, ಭಜನಾ ಮಂದಿರದ ಸಂಚಾಲಕ ಶಂಕರ ಎಸ್, ಗೌರವಾಧ್ಯಕ್ಷ ಶಿವಪ್ಪ ಕೊಳಚಲ, ಅಧ್ಯಕ್ಷ ಯೋಗೀಶ್ ಕೆ.ಬಿ. ಉಪಸ್ಥಿತರಿದ್ದರು.ಪ್ರಸ್ತಾವಿಕ ಬಾಷಣವನ್ನು ಸಂಚಾಲಕರಾದ ಶಂಕರ ಎಸ್ ನೆರವೇರಿಸಿದರು. ಸದಾಶಿವ ಡಿ. ಸ್ವಾಗತಿಸಿ, ಶೇಖರ್ ವಿ.ಜಿ ವಂದಿಸಿದರು.

Related posts

ಉಜಿರೆ ಹಳೆಪೇಟೆ ಸ.ಪ್ರೌ. ಶಾಲೆಯ ಹಿಂಬದಿಯಲ್ಲಿ ಮಣ್ಣು ಕುಸಿತ: ಶಾಸಕ ಹರೀಶ್ ಪೂಂಜ ಭೇಟಿ: ತಕ್ಷಣವೇ ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ

Suddi Udaya

ಎಮರ್ಜೆನ್ಸಿ ಹೆಲ್ಪ್ ಲೈನ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಾಚಾರ್ ನ ಯತೀಮ್ ಕುಟುಂಬಕ್ಕೆ ಮನೆಯ ಕೀ ಹಸ್ತಾಂತರ

Suddi Udaya

ಜೆಸಿಐ ಬೆಳ್ತಂಗಡಿ ಆತಿಥ್ಯದಲ್ಲಿ ಎಕ್ಸೆಲ್ ಪಿಯು ಕಾಲೇಜು ಸಹಭಾಗಿತ್ವದಲ್ಲಿ ಜೆಸಿಐ ಭಾರತದ ವಲಯ 15 ರ ಚಿಗುರು ತರಬೇತಿ ಕಾರ್ಯಾಗಾರ

Suddi Udaya

ವೇಣೂರು ಗ್ರಾಮ ಸಭೆ: ವೇಣೂರು ಪೇಟೆಯಲ್ಲಿ ಎಲ್ಲ ಅಂಗಡಿಗಳಿಗೆ ಗ್ರಾಮಸಭೆಯ ನೋಟೀಸ್ ನೀಡುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ವೇಣೂರು ಸರಕಾರಿ ಶಾಲೆ ಸ್ಥಳಾಂತರದ ಬಗ್ಗೆ ಹಳೆ ವಿದ್ಯಾರ್ಥಿಗಳ ವಿಚಾರ ವಿನಿಮಯ ಸಭೆ: ಕುಂದುಕೊರತೆ ನೀಗಿಸಲು ಹಳೆವಿದ್ಯಾರ್ಥಿಗಳಿಂದ ಸಹಾಯ ಯಾಚಿಸಲು ನಿರ್ಧಾರ

Suddi Udaya

ನಾಲ್ಕೂರು: ಯುವಶಕ್ತಿ ತಂಡದಿಂದ ವಾಹನ ಪೂಜೆ

Suddi Udaya
error: Content is protected !!