32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಂತರ್ ರಾಜ್ಯ ಮಹಿಳೆಯರ ವಾಲಿಬಾಲ್ ಪಂದ್ಯಾಟ : ಎಸ್.ಡಿ.ಎಂ ಕಾಲೇಜಿಗೆ ಪ್ರಶಸ್ತಿ

ಉಜಿರೆ : ಧಾರವಾಡ ಜಿಲ್ಲೆಯ ನವಲೂರಿನಲ್ಲಿ ಶ್ರೀ ಬನಶಂಕರಿದೇವಿ ಜಾತ್ರೆಯ ಅಂಗವಾಗಿ ನಡೆದಂತಹ ಅಂತರ್ ರಾಜ್ಯ ಮಟ್ಟದ ಆಹ್ವಾನಿತ ತಂಡಗಳ ಮಹಿಳೆಯರ ಮುಕ್ತ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜಿನ ತಂಡವು ಪ್ರಥಮ ಸ್ಥಾನ ಪಡೆಯುವ ಮೂಲಕ ಪಂದ್ಯಾಟದ ಚಾಂಪಿಯನ್ ಗಳಾಗಿದ್ದಾರೆ.

ಪಂದ್ಯಾಟದಲ್ಲಿ ಉತ್ತಮ ಪ್ರದರ್ಶನ ನೀಡಿದ ವಿದ್ಯಾರ್ಥಿನಿ ಪ್ರಿಯಾಂಕ ಉತ್ತಮ ಅಟ್ಯಾಕರ್ , ವಿದ್ಯಾರ್ಥಿನಿ ಐಶ್ವರ್ಯ ಬೆಸ್ಟ್ ಲಿಬ್ರೋ ವೈಯಕ್ತಿಕ ಪ್ರಶಸ್ತಿಗಳನ್ನು ಪಡೆದುಕೊಂಡರು. ತಂಡದಲ್ಲಿ ವಿದ್ಯಾರ್ಥಿಗಳಾದ ರಕ್ಷಿತಾ, ಶ್ರಿಯಾ, ಸಂಗೀತ , ಜಸ್ಲಿನ್, ಇಂಚರ, ಸಾಕ್ಷಿ, ಸ್ಮಿತಾ, ಲಾಸ್ಯ, ಅಪೂರ್ವ, ತನು ಮತ್ತು ಅಂಜಲಿ ಪಾಲ್ಗೊಂಡಿದ್ದರು. ತಂಡಕ್ಕೆ ಎಸ್.ಡಿ.ಎಂ ಕ್ರೀಡಾ ಸಂಘದ ಕಾರ್ಯದರ್ಶಿ ರಮೇಶ್ ಎಚ್ ತರಬೇತಿಯನ್ನು ನೀಡಿದ್ದಾರೆ.

Related posts

ಮುಂಡಾಜೆ: ನಿವೃತ್ತ ಪ್ರಾಂಶುಪಾಲರಾದ ಶ್ರೀಮತಿ ಜಾಲಿ ಓ ಎ ರವರಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ನೂತನ ಪ್ರಾಂಶುಪಾಲರಿಗೆ ಅಧಿಕಾರ ಹಸ್ತಾಂತರ

Suddi Udaya

ನಾರಾವಿಯಲ್ಲಿ ಹೆಗ್ಗಡೆ ಸಂಗಮ 2023 ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ದ.ಕ. ಸ.ಹಾ.ಉ. ಒಕ್ಕೂಟದ ನೂತನ ಜಿಲ್ಲಾ ನಿರ್ದೇಶಕರಾಗಿ ಆಯ್ಕೆಯಾದ ಎಚ್. ಪ್ರಭಾಕರ ಹುಲಿಮೇರು ರವರಿಗೆ ಶಾಸಕ ಹರೀಶ್ ಪೂಂಜರಿಂದ ಅಭಿನಂದನೆ

Suddi Udaya

ರಾಜ್ಯಮಟ್ಟದ ಸೋಲೋ‌ ಡ್ಯಾನ್ಸ್ ಸ್ಪರ್ಧೆ, ಬೆಳ್ತಂಗಡಿಯ ರಿತ್ವಿಕ್ ಕೆಪಿ ಪ್ರಥಮ

Suddi Udaya

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಬೆಳ್ತಂಗಡಿಯಿಂದ ಬೆಂಗಳೂರಿಗೆ ಸುಗಮ ಸಂಚಾರಕ್ಕಾಗಿ ಆರಂಭಗೊಂಡ “ಪಲ್ಲಕ್ಕಿ” ನೂತನ ಬಸ್ ಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya

ಶಿಬಾಜೆ: ಭಂಡಿಹೊಳೆ ಸ.ಕಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಬೆಂಗಳೂರು ಯುವಶಕ್ತಿ ಸೇವಾ ಫೌಂಡೇಶನ್ ನಿಂದ ಉಚಿತ ಬ್ಯಾಗ್, ಪುಸ್ತಕ ವಿತರಣೆ

Suddi Udaya
error: Content is protected !!