ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಜ್ಮೀರ್ ಖಾಜಾ ಸಂಸ್ಮರಣೆ; ಸರ್ವಧರ್ಮೀಯ ಐದು ಕುಟುಂಬಗಳಿಗೆ ಆಹಾರದ ಕಿಟ್ ವಿತರಣೆ

ಬೆಳ್ತಂಗಡಿ: ಅಜ್ಮೀರ್ ಖಾಜಾ ಅವರ ಉರೂಸ್ ಕಾರ್ಯಕ್ರಮ ಇಸ್ಲಾಮಿಕ್ ಮಾಸದ ‘ರಜಬ್’ ಈ ತಿಂಗಳಲ್ಲಿ ನಡೆದಿದ್ದು, ಖಾಜಾ ಅವರ ಸಂಸ್ಮರಣಾರ್ಥ ಉದ್ಯಮಿಯೊಬ್ಬರು ಐವರು ಸರ್ವಧರ್ಮೀಯ ಕುಟುಂಬಗಳಿಗೆ ಆಹಾರದ ಕಿಟ್ ಹಂಚುವ ಮೂಲಕ ಮಾದರಿಯಾಗಿದ್ದಾರೆ.

ಹಿರಿಯ ಪತ್ರಕರ್ತ ಅಚ್ಚು ಮುಂಡಾಜೆಯವರ ಸಹಕಾರದೊಂದಿಗೆ, ಯುವ ಉದ್ಯಮಿ ಹಾಗೂ ಸಾಮಾಜಿಕ ಸಂಘಟಕ, ಕೊಡುಗೈ ದಾನಿ ಹಾಜಿ ಶಮೀಮ್ ಯೂಸುಫ್ ಮದ್ದಡ್ಕ ಅವರೇ ಈ ಮಾದರಿ ಕಾರ್ಯ ಮಾಡಿದವರು.

ಎಳೆಯ ಮಗುವಿನ ಲಿವರ್ ಸಮಸ್ಯೆಗೆ ಚಿಕಿತ್ಸೆ ಪಡೆಯುತ್ತಿರುವ ಕಡಿರುದ್ಯಾವರದ ಹಿಂದೂ ಕುಟುಂಬವೊಂದಕ್ಕೆ, ಉಳಿದಂತೆ ವಿಕಲಚೇತನರಾಗಿ ಮಲಗಿದಲ್ಲೇ ಇರುವ ಬೆಳ್ತಂಗಡಿ ಸಂಜಯ ನಗರದ ಕುಟುಂಬವೊಂದಕ್ಕೆ, ಮೇಲಂತಬೆಟ್ಟು ಗ್ರಾಮದ ಇಬ್ಬರು ವಿಧವೆಯರು ಹಾಗೂ ಕೂಲಿ ಕೆಲಸಕ್ಕೆ ತೆರಳುತ್ತಿರುವ ಮುಸ್ಲಿಂ ಕುಟುಂಬಕ್ಕೆ ಶಮೀಮ್ ಅವರು ರೇಷನ್ ಕಿಟ್ ಹಸ್ತಾಂತರಿಸಿದರು.

Related posts

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ಮುಂಡಾಜೆ: ಕೀರ್ತನಾ ಕಲಾತಂಡದ ಮಹಾಸಭೆ: ಅಧ್ಯಕ್ಷರಾಗಿ ಸದಾನಂದ ಬಿ., ಕಾರ್ಯದರ್ಶಿಯಾಗಿ ಉಮೇಶ್ ಆಚಾರ್ಯ ಆಯ್ಕೆ

Suddi Udaya

ಉಜಿರೆ ಸಂತ ಅಂತೋಣಿ ಚರ್ಚ್ ಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ರಬ್ಬರ್ ಟ್ಯಾಪರ್ ಕಾರ್ಮಿಕರ ಸಂಘದ ಅಧ್ಯಕ್ಷ ಕಾಂಗ್ರೆಸ್ ಸೇರ್ಪಡೆ

Suddi Udaya

ಬೆಳ್ತಂಗಡಿಯ ‘ಆಲ್ಫಾ ಕೋಟ್’ ನಿವಾಸಿ ಮೇರಿ ಮಾಡ್ತಾ ನಿಧನ

Suddi Udaya

ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ

Suddi Udaya
error: Content is protected !!