March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ರಾಷ್ಟ್ರೀಯ ಯುವದಿನಾಚರಣೆ

ಉಜಿರೆ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಭಾರತದ ಮಹಾನ್ ತತ್ವಜ್ಞಾನಿ, ಚಿಂತಕ ಹಾಗೂ ಶ್ರೇಷ್ಠ ನಾಯಕರಾಗಿದ್ದ ಸ್ವಾಮಿ ವಿವೇಕಾನಂದರ ಜನ್ಮ ದಿನದ ಅಂಗವಾಗಿ ಜ.12 ರಂದು ರಾಷ್ಟ್ರೀಯ ಯುವದಿನಾಚರಣೆ ಆಚರಿಸಲಾಯಿತು.

ಮುಖ್ಯ ಅತಿಥಿಯಾಗಿ ಉಜಿರೆ ಎಸ್.ಡಿ.ಎಮ್ ಪ್ರಕೃತಿ ಮತ್ತು ಯೋಗ ವಿಜ್ಞಾನ ಕಾಲೇಜಿನ ಉಪನ್ಯಾಸಕ ಹಾಗೂ ವೈದ್ಯಕೀಯ ಅಧಿಕಾರಿ ಡಾ. ಯೋಹಿ ಧರ್ಮರಾಜನ್ ವಿದ್ಯಾರ್ಥಿಗಳನ್ನುದ್ದೇಶಿಸಿ ತಮ್ಮ ಗುರಿ ತಲುಪುವ ಮಾರ್ಗ ಹಾಗೂ ಅರೋಗ್ಯವನ್ನು ಉತ್ತಮಗೊಳಿಸುವ ವಿಧಾನಗಳ ಕುರಿತು ಮಾತನಾಡಿದರು.

ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳಿಂದ ದಿನದ ವಿಶೇಷತೆ, ಸ್ವಾಮಿ ವಿವೇಕಾನಂದರ ಜೀವನ, ವಿವೇಕಾನಂದರ ಸಂದೇಶಗಳನ್ನೊಳಗೊಂಡ ನೃತ್ಯ, ಸಮೂಹ ಗಾಯನ ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲ ಮನಮೋಹನ್ ನಾಯ್ಕ್ ಕೆ.ಜಿ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿನಿ ಪೂರ್ವಿ ನಿರೂಪಿಸಿದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ಧೃತಿ ನಿರೂಪಿಸಿದರು.

Related posts

ಹಿಂದೂ ಸಂಗಮ ಆಯೋಜನಾ ಸಮಿತಿ ಬಳಂಜ ಮಂಡಲದಿಂದ “ಹಿಂದೂ ಸಂಗಮ” ಕಾರ್ಯಕ್ರಮ

Suddi Udaya

ಚಾರ್ಮಾಡಿ ಘಾಟಿಯ 7ನೇ ತಿರುವಿನಲ್ಲಿ ವಾಹನ ಸವಾರರಲ್ಲಿ ಭೀತಿ ಹುಟ್ಟಿಸಿದ ಒಂಟಿ ಸಲಗ

Suddi Udaya

ವಸಂತ ಶೆಟ್ಟಿ ಶ್ರದ್ದಾರವರಿಂದ 25ನೇ ಬಾರಿಗೆ ರಕ್ತದಾನ

Suddi Udaya

ವಿಧಾನಸಭೆ ಚುನಾವಣೆ ಹಿನ್ನೆಲೆ ವಿವಿಧ ಚೆಕ್ ಪೋಸ್ಟ್ ಗಳಿಗೆ ಮತ್ತು ನಕ್ಸಲ್ ಪೀಡಿತ ಪ್ರದೇಶಗಳಿಗೆಭೇಟಿ

Suddi Udaya

ಬೆಳ್ತಂಗಡಿ: ಕುತ್ಯಾರು ರಸ್ತೆಯಲ್ಲಿ ಗಾಳಿ ಮಳೆಗೆ ವಿದ್ಯುತ್ ತಂತಿ ಮೇಲೆ ಬಿದ್ದ ಮರ

Suddi Udaya

ಭಕ್ತಿ ಪಾರಮ್ಯಕ್ಕೆ ಅಣಿಯಾದ ಮಲೆಂಗಲ್ಲು ಬ್ರಹ್ಮಕಲಶೋತ್ಸವ

Suddi Udaya
error: Content is protected !!