25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜ 29 :ನಾವೂರು ಗೋಪಾಲಕೃಷ್ಣ ದೇವಸ್ಥಾನದಲ್ಲಿ ಬೃಹತ್ ಸಾಮೂಹಿಕ ವಿಷ್ಣುಸಹಸ್ರನಾಮ ಪಠಣ: ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಪೂರ್ವಭಾವಿ ಸಭೆ

ಅಳದಂಗಡಿ: ನಾವೂರು ಗೋಪಾಲಕೃಷ್ಣ ದೇವಸ್ಥಾನದ ಜಾತ್ರಾ ಮಹೋತ್ಸವದಲ್ಲಿ ಬ್ರಹತ್ ಬ್ರಹತ್ ಸಾಮೂಹಿಕ ವಿಷ್ಣುಸಹಸ್ರನಾಮ ಪಠಣವು ಜ 29 ರಂದು ನಡೆಯಲಿದ್ದು ಆ ಪ್ರಯುಕ್ತ ಅಳದಂಗಡಿ ಮಹಾಗಣಪತಿ ದೇವಸ್ಥಾನದಲ್ಲಿ ಪೂರ್ವಭಾವಿ ಸಭೆಯು ಜ 11ರಂದು ನಡೆಯಿತು.

ಸಭೆಯಲ್ಲಿ ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಜಾತ್ರಾ ಸಮಿತಿ ಅಧ್ಯಕ್ಷ ಡಾ.ಪ್ರದೀಪ್ ಎ ಅವರು ಸಹಸ್ರಾರು ಭಕ್ತಾದಿಗಳಿಂದ ಏಕ ಕಂಠದಲ್ಲಿ ಬೃಹತ್ ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ ನಡೆಯಲಿದೆ.ಸಾತ್ವಿಕ ಚಿಂತನೆ ಉದ್ದೀಪನಗೊಳಿಸುವ ಈ ಕಾರ್ಯಕ್ರಮದಲ್ಲಿ ನಾವೆಲ್ಲರೂ ಜೊತೆಯಾಗಬೇಕೆಂದರು. ನಾವೂರಿನ ದೇವಸ್ಥಾನದಲ್ಲಿ ನಡೆಯುವ ಸತ್ ಚಿಂತನೆಯ ಕಾರ್ಯಯೋಜನೆಗಳು ಅಲ್ಲಿಗೆ ಮಾತ್ರ ಸೀಮಿತವಾಗದೆ ಇಡೀ ಸಮಾಜಕ್ಕೆ ತಲುಪಬೇಕು ಎಂದರು.

ವೇದಿಕೆಯಲ್ಲಿ ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ಶಶಿಧರ್ ಡೋಂಗ್ರೆ, ಪ್ರಗತಿಪರ ಕೃಷಿಕ ಸಂತೋಷ್ ಕುಮಾರ್ ಕಾಪಿನಡ್ಕ, ಯೋಜನಾಧಿಕಾರಿ ಅಶೋಕ್ ಉಪಸ್ಥಿತರಿದ್ದರು.

ಸಭೆಯಲ್ಲಿ ಡಾ.ತುಳಪುಳೆ, ನಿತ್ಯಾನಂದ ನಾವರ, ನಿರಂಜನ್ ಜೋಶಿ, ಸತೀಶ್ ಪೂಜಾರಿ ನಮನ, ಮೋಹನ್ ದಾಸ್, ವಿಜಯ್ ನಾವರ, ಮಾಲಾ ಎಂ.ಕೆ, ಮಂಜುನಾಥ ಆಚಾರ್ಯ ಸೇರಿದಂತೆ ಯೋಜನೆಯ ಪದಾಧಿಕಾರಿಗಳು,ಊರವರು ಭಾಗವಹಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.

Related posts

ಬೆಳ್ತಂಗಡಿ ಸರ್ಕಾರಿ ಮಾದರಿ ಹಿ.ಪ್ರಾ ಶಾಲೆಯಲ್ಲಿ ಸಂಭ್ರಮ ಶನಿವಾರಕ್ಕೆ ಚಾಲನೆ

Suddi Udaya

ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆ ಕೆರೆಗೆ ಹಾರಿ ಆತ್ಮಹತ್ಯೆ

Suddi Udaya

ಓಡಲ ಶ್ರೀ ವ್ಯಾಘ್ರ ಚಾಮುಂಡಿ ದೈವಸ್ಥಾನದ ಪ್ರತಿಷ್ಠಾ ವರ್ಧಂತ್ಯುತ್ಸವ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ ಮೂಲಕ ಸಾಗಿದ ಭಕ್ತರು ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಸಂಚಾಲಕ ಮೋಹನ್ ಕುಮಾರ್ ನೇತೃತ್ವದಲ್ಲಿ ಮೆರಗು ನೀಡಿದ ವಾಯ್ಲಿನ್ ಆದ್ಯಾ ಕೇರಳ,ಚೆಂಡೆ ಹಾಗೂ ವಿವಿಧ ವಿನೋದಾವಳಿಗಳು

Suddi Udaya

ಪೆರಿಂಜೆ: ಕಣಜದ ಹುಳ ಕಡಿದು ಗಂಭೀರ ಸ್ಥಿತಿಯಲ್ಲಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ಲಾಯಿಲ: ಸ.ಹಿ.ಪ್ರಾ. ಶಾಲಾ ಮುಖ್ಯ ಶಿಕ್ಷಕಿ ರಾಜೇಶ್ವರಿ ಬಿ.ಎಸ್. ಸೇವಾ ನಿವೃತ್ತಿ

Suddi Udaya
error: Content is protected !!