September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೆಂಕಕಾರಂದೂರು: ಹಿಂದೂ ಸಂಗಮ ಬಳಂಜ ಮಂಡಲ ಆಮಂತ್ರಣ ಪತ್ರಿಕೆ ಬಿಡುಗಡೆ: ಜ 25 ಬಳಂಜ ಮಂಡಲದಿಂದ ಬೃಹತ್ ಹಿಂದೂ‌‌ ಸಂಗಮ ಶೋಭಾಯಾತ್ರೆ

ತೆಂಕಕಾರಂದೂರು: ಹಿಂದೂ ಸಂಗಮ ಆಯೋಜನಾ ಸಮಿತಿ ನೇತೃತ್ವದಲ್ಲಿ ಬಳಂಜ ಮಂಡಲ ವತಿಯಿಂದ ನಡೆಯುವ ಹಿಂದೂ ಸಂಗಮ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಜನಜಾಗೃತಿ ವೇದಿಕೆಯ ಸ್ಥಾಪಕಾದ್ಯಕ್ಷ ಕೆ.ವಸಂತ ಸಾಲಿಯಾನ್ ಅವರು ಜ 11 ರಂದು ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಜ.25 ರಂದು ಮಧ್ಯಾಹ್ನ 2.30 ಕ್ಕೆ ಹಿಂದೂ ಸಂಗಮ‌ ಕಾರ್ಯಕ್ರಮ ನಡೆಯಲಿದೆ. ಹಿಂದೂ ಸಂಗಮ‌ ಶೋಭಾಯಾತ್ರೆಯು ಗುಂಡೇರಿಯಿಂದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದವರೆಗೆ ಸಾಗಿ ಬರಲಿದೆ.ನಂತರ ನಡೆಯುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವ ಉದ್ಯಮಿ ಶೀತಲ್ ಜೈನ್ ವಹಿಸಲಿದ್ದಾರೆ.

ಈ ಸಂದರ್ಭದಲ್ಲಿ ಸಮಿತಿ ಉಪಾಧ್ಯಕ್ಷರಾದ ನಿತ್ಯಾನಂದ ಶೆಟ್ಟಿ ನೊಚ್ಚ, ಬಳಂಜ ಮಂಡಲ ನಿರ್ವಹಣಾ ಸಮಿತಿ ಸಂಚಾಲಕ ರಾಕೇಶ್ ಹೆಗ್ಡೆ, ಪ್ರಮುಖರಾದ ಸಂತೋಷ್ ಕುಮಾರ್ ಕಾಪಿನಡ್ಕ, ಸದಾನಂದ ಪೂಜಾರಿ ಉಂಗಿಲಬೈಲು, ಸುಧೀರ್ ಆರ್ ಸುವರ್ಣ, ನವೀನ್ ಕೆ ಸಾಮಾನಿ, ಶ್ರೀನಿವಾಸ್ ರೈ ಕಾರಂದೂರು, ರಾಘವೇಂದ್ರ ಭಟ್ ಬಳಂಜ, ಪ್ರಶಾಂತ್ ಶೆಟ್ಟಿ ಕರಂಬಾರು, ರಮೇಶ್ ಬಜನೋಡಿ, ವಿದ್ಯಾನಂದ ಕಟ್ಟೆ , ಲೀಲಾವತಿ ಕಟ್ಟೆ, ಪ್ರಕಾಶ್ ಆಚಾರ್ಯ, ರಕ್ಷಿತ್ ಕರಂಬಾರು, ಸೋಮನಾಥ ಶಿರ್ಲಾಲು ಹಾಗೂ ಇತರರು ಉಪಸ್ಥಿತರಿದ್ದರು.

Related posts

ತಾಲೂಕು ಭಜನಾ ಪರಿಷತ್ತಿನ ನೇತೃತ್ವದಲ್ಲಿ ತಾಲೂಕು ಕುಣಿತ ಭಜನಾ ತರಬೇತಿದಾರ ಪ್ರಥಮ ಸಭೆ

Suddi Udaya

ಮಾ.1: ಉಜಿರೆಯಲ್ಲಿ ಅನು ಇಲೆಕ್ಟ್ರಾನಿಕ್ಸ್ & ಫರ್ನಿಚರ್ಸ್ ಶುಭಾರಂಭ

Suddi Udaya

ಶ್ರೀ ಸದಾಶಿವೇಶ್ವರ ಭಜನಾ ಮಂಡಳಿಯಲ್ಲಿ ಭಜನಾ ಪರಿಷತ್ತು ಕಾರ್ಯದರ್ಶಿಯಿಂದ ಅಹವಾಲು ಸ್ವೀಕಾರ

Suddi Udaya

ವೀರಕೇಸರಿ ಫ್ರೆಂಡ್ಸ್ ಬಳ್ಳಮಂಜ ಇದರ ವತಿಯಿಂದ ಕಲ್ಲಂಗಡಿ ವಿತರಣೆ

Suddi Udaya

ಪಟ್ರಮೆ: ಅನಾರು ನಿವಾಸಿ ಶ್ರೀಮತಿ ದೇವಕಿ ನಿಧನ

Suddi Udaya

ಲಾಯಿಲ ಬಲಮುರಿ ವಿಘ್ನೇಶ್ವರನ ಸನ್ನಿಧಿಯಲ್ಲಿ ಶಾಸಕ ಹರೀಶ್ ಪೂಂಜಾರ ನೇತೃತ್ವದಲ್ಲಿ 108 ಕಾಯಿ ಗಣಹೋಮ

Suddi Udaya
error: Content is protected !!