March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಜಮಲುಲ್ಲೈಲಿ ಸುನ್ನಿ ಮಸ್ಜಿದ್ ಮೇಲಂತಸ್ತಿನ ಕಾಮಗಾರಿಗೆ ಚಾಲನೆ

ಬೆಳ್ತಂಗಡಿ: ಜಮಲುಲ್ಲೈಲಿ ಸುನ್ನಿ ಜುಮ್ಮಾ ಮಸ್ಜಿದ್ ಇದರ ಮೇಲಂತಸ್ತಿನ ಕಟ್ಟಡ ಕಾಮಗಾರಿಗೆ ಸಯ್ಯಿದ್ ಕಾಜೂರು ತಂಙಳ್ ನೇತೃತ್ವದಲ್ಲಿ ಚಾಲನೆ ನೀಡಲಾಯಿತು.

ಬಳಿಕ‌ನಡೆದ ಸರಳ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆಡಳಿತ ಮಂಡಳಿ ಅಧ್ಯಕ್ಷ ಅಬ್ದುಲ್ ಬಶೀರ್ ವಹಿಸಿದ್ದರು.
ಸಮಾರಂಭದಲ್ಲಿ ದಾನಿಗಳು,‌ ನಿಡಿಗಲ್ ಮಸ್ಜಿದ್ ಆಡಳಿತ ಮಂಡಳಿ ಅಧ್ಯಕ್ಷ ಮುಜೀಬ್ ಸಾಹೇಬ್, ಯುವ ಉದ್ಯಮಿ ಹಾಜಿ ಶಮೀಮ್ ಯೂಸುಫ್ ಮದ್ದಡ್ಕ, ಬಿ.ಎನ್ ಹಮೀದ್ ನಿಡಿಗಲ್, ಹನೀಫ್ ಮುಸ್ಲಿಯಾರ್ ಮೊದಲಾದವರು ಶುಭ ಕೋರಿದರು.
ಈ ಸಂದರ್ಭದಲ್ಲಿ ಖತೀಬ್ ಸಿರಾಜುದ್ದೀನ್ ಸ‌ಅದಿ ಗಡಿಯಾರ್, ಹಾಜಬ್ಬ, ಕೆರೀಂ ಕೆ.ಎಸ್, ಉಸ್ಮಾನ್ ಎಂ.ಕೆ, ಅಬ್ಬಾಸ್ ಸಿ, ಹಮೀದ್ ನೆಕ್ಕರೆ, ಶಬೀರ್ ಬಿಕೆಹೆಚ್, ಅಯೂಬ್ ಆಲಿಕುಂಞಿ, ಅಬ್ಬುಲ್ಲ ಹಾಜಿ, ಮುಹಮ್ಮದ್ ಜೈ ಭಾರತ್, ಬಶೀರ್ ಮಾಹಿನ್, ಮುಸ್ತಫಾ ಸಿ, ಸಿದ್ದೀಕ್ ನೆಕ್ಕರೆ, ಅಬೂಬಕ್ಕರ್ ಹಾಜಿ, ಅಶ್ರಫ್ ಇಸ್ಮಾಯಿಲ್ ಕುರುಡ್ಯ, ಕೆರೀಂ ಕುರುಡ್ಯ, ಉಸ್ಮಾನ್ ಉಂಞಿಚ್ಚ ಆಲಾಜೆ, ಬಾವಾಕ, ರಮ್ಲ ನೆಕ್ಕರೆ ಮೊದಲಾದವರು ಉಪಸ್ಥಿತರಿದ್ದರು.

ಉಮ್ರಾ ಯಾತ್ರೆ ಕೈಗೊಳ್ಳುವ ಇಬ್ರಾಹಿಂ ಕನ್ಯಾಡಿ ಅವರನ್ನು ಈ ವೇಳೆ ಜಮಾಅತ್ ವತಿಯಿಂದ ಬೀಳ್ಕೊಡಲಾಯಿತು.
ಜಮಲುಲ್ಲೈಲಿ ಸುನ್ನಿ ಜುಮ್ಮಾ ಮಸ್ಜಿದ್ ಸ್ಥಾಪಕಾಧ್ಯಕ್ಷ ಅಶ್ರಫ್ ಆಲಿಕುಂಞಿ ಮುಂಡಾಜೆ ಪ್ರಸ್ತಾವನೆಗೈದು ಸ್ವಾಗತಿಸಿದರು.
ಸದರ್ ತ್ವಾಹಿರ್ ಸ‌ಅದಿ ಧನ್ಯವಾದವಿತ್ತರು.

Related posts

ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠದ ಸ್ವಾಮೀಜಿಗಳ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ

Suddi Udaya

ನಡ: ಕನ್ಯಾಡಿ ಶಾಂತಿನಗರದಲ್ಲಿ ಚಿರತೆ ಹಾವಳಿ

Suddi Udaya

ನಾರಾವಿ ಅರಸು ಕಟ್ಟೆಯಲ್ಲಿ ಗೂಡ್ಸ್ ಟೆಂಪೋ ಗೆ ಬೈಕ್ ಡಿಕ್ಕಿ : ಬೈಕ್ ಸವಾರ ಜೋಕಿ ರೋಡ್ರಿಗಸ್‌ ಸ್ಥಳದಲ್ಲೇ ಸಾವು

Suddi Udaya

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ

Suddi Udaya

ನಾಳೆ (ಮೇ 22) ವಿದ್ಯುತ್ ನಿಲುಗಡೆ

Suddi Udaya

ಗೇರು ಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ಶಿಲನ್ಯಾಸ

Suddi Udaya
error: Content is protected !!