38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸರ್ಕಾರಿ ಇಲಾಖಾ ಸುದ್ದಿ

ವೇಣೂರು: ಚಿರತೆಯ ಮೃತದೇಹ ಪತ್ತೆ ಪ್ರಕರಣ:ಚಿರತೆಯ ಶವಪರೀಕ್ಷೆ ಮಾಡಿ ಅಂತ್ಯಕ್ರಿಯೆ ನಡೆಸಿದ ಅರಣ್ಯ ಇಲಾಖೆ

ವೇಣೂರು: ವೇಣೂರು ವಲಯ ಅರಣ್ಯ ಇಲಾಖೆಯ ವ್ಯಾಪ್ತಿಯ ಇರ್ವತ್ತೂರು ಗ್ರಾಮದ ಪರಾರಿಯ ಎಂಬಲ್ಲಿ ಸರಕಾರಿ ಜಾಗದಲ್ಲಿ ಜ.10 ರಂದು ಬೆಳಗ್ಗೆ 10 ಗಂಟೆಗೆ ಸುಮಾರು 3 ರಿಂದ 4 ವರ್ಷದ ಹೆಣ್ಣು ಚಿರತೆಯೊಂದು ಮೃತಪಟ್ಟ ಸ್ಥಿತಿಯಲ್ಲಿ ಸ್ಥಳೀಯರಿಗೆ ಪತ್ತೆಯಾಗಿತ್ತು.

ಬೆಳ್ತಂಗಡಿ ನ್ಯಾಯಾಲಯದ ನ್ಯಾಯಾಧೀಶರ ಅನುಮತಿ ಪಡೆದು ಪ್ರಕರಣ ದಾಖಲಿಸಿಕೊಂಡ ಬಳಿಕ ವೇಣೂರು ಅರಣ್ಯ ಇಲಾಖೆಯ ಅಧಿಕಾರಿಗಳ ಸಮ್ಮುಖದಲ್ಲಿ ವೇಣೂರ ಅರಣ್ಯ ಇಲಾಖೆಯ ನಯನಾಡ್ ನಲ್ಲಿರುವ ಗಸ್ತುವಲಯ ವಸತಿಗೃಹದ ಬಳಿ ಬಂಟ್ವಾಳ ಪಶುವೈದ್ಯರಾದ ಅಶೋಕ್ ಶೆಟ್ಟಿ ನೇತೃತ್ವದಲ್ಲಿ ಜ.11 ರಂದು ಚಿರತೆಯ ಶವಪರೀಕ್ಷೆ ಮಾಡಲಾಗಿದ್ದು. ಈ ವೇಳೆ ಚಿರತೆಯ ಕುತ್ತಿಗೆ ಭಾಗಕ್ಕೆ ಗಾಯಗಳ ಗುರುತು ಮತ್ತು ಹೊಟ್ಟೆಯಲ್ಲಿ ನಾಯಿ ಮಾಂಸ ಕೂಡ ಪತ್ತೆಯಾಗಿದೆ. ಶವಪರೀಕ್ಷೆ ನಡೆಸಿದ ಬಳಿಕ ಅಲ್ಲಿಯೇ ಅರಣ್ಯ ಇಲಾಖೆಯ ನಿಯಮದಂತೆ ಚಿರತೆಯನ್ನು ಎಸಿಎಫ್ ಶ್ರೀಧರ್.ಪಿ ನೇತೃತ್ವದಲ್ಲಿ ಕಾನೂನು ಪ್ರಕಾರ ದಹನ ಮಾಡಲಾಯಿತು.

ಚಿರತೆ ಕಾಡುಹಂದಿಗೆ ಇಟ್ಟ ಉರುಳಿಗೆ ಅಥವಾ ತಂತಿಬೇಲಿಗೆ ಸಿಕ್ಕಿಬಿದ್ದು ಗಾಯಗೊಂಡು ಬಳಿಕ ಮೃತಪಟ್ಟ ಶಂಕೆಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಪಶುವೈದ್ಯರು ಅನುಮಾನಗಳನ್ನು ವ್ಯಕ್ತಪಡಿಸಿದ್ದಾರೆ. ಶವಪರೀಕ್ಷೆ ಮಾಡಿದ ಚಿರತೆಯ ವಿವಿಧ ಭಾಗಗಳನ್ನು ಸಾವಿನ ಬಗ್ಗೆ ದೃಢಪಡಿಸಲು ಹೈದರಾಬಾದ್ ಅಥವಾ ಬೆಂಗಳೂರು ಎಫ್ಎಸ್ಎಲ್ ಪರೀಕ್ಷೆಗಾಗಿ ಕಳುಹಿಸಿಕೊಡಲಾಗುವುದು ಎನ್ನಲಾಗಿದೆ.

ಚಿರತೆಯ ಶವಪರೀಕ್ಷೆ ವೇಳೆ ಬಂಟ್ವಾಳ ಪಶುವೈದ್ಯ ಅಶೋಕ್ ಶೆಟ್ಟಿ ತಂಡ ಹಾಗೂ ಮೂಡಬಿದಿರೆ ಎಸಿಎಫ್ ಶ್ರೀಧರ್.ಪಿ, ವೇಣೂರು ವಲಯ ಅರಣ್ಯಾಧಿಕಾರಿ ಭರತ್.ಯು.ಜಿ, ಡಿ.ಆರ್.ಎಫ್ ಅಶ್ವಿತ್, ಸುನಿಲ್ ಕುಮಾರ್, ಗಸ್ತು ಅರಣ್ಯ ಪಾಲಕ ಸುರೇಶ್ ಮತ್ತು ದಿವಕರ್ ಹಾಗೂ ಇತರ ಸಿಬ್ಬಂದಿ ಭಾಗಿಯಾಗಿದ್ದರು.

Related posts

ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಮಹಿಳಾ ದಿನಾಚರಣೆ

Suddi Udaya

ಧರ್ಮಸ್ಥಳ ಪೋಸೋಲಿಕೆ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಮುಂಡಾಜೆ: ಕವಿ ವಿಶ್ರಾಂತ ಶಿಕ್ಷಕ ಶಂಕರ್ ಎನ್.ತಾಮನ್ಕರ್ ರವರ ಸೀತಾ ರಾಮಾಯಣ ಮತ್ತು ಮಕರಂದ ಕವನ ಸಂಕಲನಗಳ ಲೋಕಾರ್ಪಣೆ ಹಾಗೂ ಸಾಧಕರಿಗೆ ಸನ್ಮಾನ

Suddi Udaya

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಕಿಡ್ಸ್ ವಿಕ್ಟರಿ ಫಿಯೇಸ್ಟಾ 2025’

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಭಿವಿನ್ಯಾಸ ಕಾರ್ಯಕ್ರಮ

Suddi Udaya

ಯುವವಾಹಿನಿ ಉಪ್ಪಿನಂಗಡಿ ಘಟಕದ ಅಧ್ಯಕ್ಷರಾಗಿ ಮನೋಜ್ ಎನ್ ಸಾಲ್ಯಾನ್ ಆಯ್ಕೆ

Suddi Udaya
error: Content is protected !!