July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸರ್ಕಾರಿ ಇಲಾಖಾ ಸುದ್ದಿ

ವೇಣೂರು: ಚಿರತೆಯ ಮೃತದೇಹ ಪತ್ತೆ ಪ್ರಕರಣ:ಚಿರತೆಯ ಶವಪರೀಕ್ಷೆ ಮಾಡಿ ಅಂತ್ಯಕ್ರಿಯೆ ನಡೆಸಿದ ಅರಣ್ಯ ಇಲಾಖೆ

ವೇಣೂರು: ವೇಣೂರು ವಲಯ ಅರಣ್ಯ ಇಲಾಖೆಯ ವ್ಯಾಪ್ತಿಯ ಇರ್ವತ್ತೂರು ಗ್ರಾಮದ ಪರಾರಿಯ ಎಂಬಲ್ಲಿ ಸರಕಾರಿ ಜಾಗದಲ್ಲಿ ಜ.10 ರಂದು ಬೆಳಗ್ಗೆ 10 ಗಂಟೆಗೆ ಸುಮಾರು 3 ರಿಂದ 4 ವರ್ಷದ ಹೆಣ್ಣು ಚಿರತೆಯೊಂದು ಮೃತಪಟ್ಟ ಸ್ಥಿತಿಯಲ್ಲಿ ಸ್ಥಳೀಯರಿಗೆ ಪತ್ತೆಯಾಗಿತ್ತು.

ಬೆಳ್ತಂಗಡಿ ನ್ಯಾಯಾಲಯದ ನ್ಯಾಯಾಧೀಶರ ಅನುಮತಿ ಪಡೆದು ಪ್ರಕರಣ ದಾಖಲಿಸಿಕೊಂಡ ಬಳಿಕ ವೇಣೂರು ಅರಣ್ಯ ಇಲಾಖೆಯ ಅಧಿಕಾರಿಗಳ ಸಮ್ಮುಖದಲ್ಲಿ ವೇಣೂರ ಅರಣ್ಯ ಇಲಾಖೆಯ ನಯನಾಡ್ ನಲ್ಲಿರುವ ಗಸ್ತುವಲಯ ವಸತಿಗೃಹದ ಬಳಿ ಬಂಟ್ವಾಳ ಪಶುವೈದ್ಯರಾದ ಅಶೋಕ್ ಶೆಟ್ಟಿ ನೇತೃತ್ವದಲ್ಲಿ ಜ.11 ರಂದು ಚಿರತೆಯ ಶವಪರೀಕ್ಷೆ ಮಾಡಲಾಗಿದ್ದು. ಈ ವೇಳೆ ಚಿರತೆಯ ಕುತ್ತಿಗೆ ಭಾಗಕ್ಕೆ ಗಾಯಗಳ ಗುರುತು ಮತ್ತು ಹೊಟ್ಟೆಯಲ್ಲಿ ನಾಯಿ ಮಾಂಸ ಕೂಡ ಪತ್ತೆಯಾಗಿದೆ. ಶವಪರೀಕ್ಷೆ ನಡೆಸಿದ ಬಳಿಕ ಅಲ್ಲಿಯೇ ಅರಣ್ಯ ಇಲಾಖೆಯ ನಿಯಮದಂತೆ ಚಿರತೆಯನ್ನು ಎಸಿಎಫ್ ಶ್ರೀಧರ್.ಪಿ ನೇತೃತ್ವದಲ್ಲಿ ಕಾನೂನು ಪ್ರಕಾರ ದಹನ ಮಾಡಲಾಯಿತು.

ಚಿರತೆ ಕಾಡುಹಂದಿಗೆ ಇಟ್ಟ ಉರುಳಿಗೆ ಅಥವಾ ತಂತಿಬೇಲಿಗೆ ಸಿಕ್ಕಿಬಿದ್ದು ಗಾಯಗೊಂಡು ಬಳಿಕ ಮೃತಪಟ್ಟ ಶಂಕೆಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಪಶುವೈದ್ಯರು ಅನುಮಾನಗಳನ್ನು ವ್ಯಕ್ತಪಡಿಸಿದ್ದಾರೆ. ಶವಪರೀಕ್ಷೆ ಮಾಡಿದ ಚಿರತೆಯ ವಿವಿಧ ಭಾಗಗಳನ್ನು ಸಾವಿನ ಬಗ್ಗೆ ದೃಢಪಡಿಸಲು ಹೈದರಾಬಾದ್ ಅಥವಾ ಬೆಂಗಳೂರು ಎಫ್ಎಸ್ಎಲ್ ಪರೀಕ್ಷೆಗಾಗಿ ಕಳುಹಿಸಿಕೊಡಲಾಗುವುದು ಎನ್ನಲಾಗಿದೆ.

ಚಿರತೆಯ ಶವಪರೀಕ್ಷೆ ವೇಳೆ ಬಂಟ್ವಾಳ ಪಶುವೈದ್ಯ ಅಶೋಕ್ ಶೆಟ್ಟಿ ತಂಡ ಹಾಗೂ ಮೂಡಬಿದಿರೆ ಎಸಿಎಫ್ ಶ್ರೀಧರ್.ಪಿ, ವೇಣೂರು ವಲಯ ಅರಣ್ಯಾಧಿಕಾರಿ ಭರತ್.ಯು.ಜಿ, ಡಿ.ಆರ್.ಎಫ್ ಅಶ್ವಿತ್, ಸುನಿಲ್ ಕುಮಾರ್, ಗಸ್ತು ಅರಣ್ಯ ಪಾಲಕ ಸುರೇಶ್ ಮತ್ತು ದಿವಕರ್ ಹಾಗೂ ಇತರ ಸಿಬ್ಬಂದಿ ಭಾಗಿಯಾಗಿದ್ದರು.

Related posts

ಕೊಕ್ಕಡ: ಸಂತ ಜೋನರ ದೇವಾಲಯದಲ್ಲಿ ಪವಿತ್ರ ಗುರುವಾರ

Suddi Udaya

ರೇಷ್ಮೆರೋಡ್: ಬೃಹತ್ ಗಾತ್ರದ ಹೆಬ್ಬಾವು ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್

Suddi Udaya

ಉರುವಾಲು: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನ ವತಿಯಿಂದ 20 ನೇ ವರ್ಷದ ಪುಸ್ತಕ ವಿತರಣೆ : ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ – ನಿವೃತ್ತ ಯೋಧರಿಗೆ ಗೌರವಾರ್ಪಣೆ

Suddi Udaya

ಮಾಜಿ ಶಾಸಕ ಕೆ.ವಸಂತ ಬಂಗೇರರಿಗೆ ಸಾವಿರದ ನುಡಿ ನಮನ ಕಾಯ೯ಕ್ರಮ

Suddi Udaya

ಅಕ್ರಮ ಜೂಜಾಟದ ಮೇಲೆ ವೇಣೂರು ಪೊಲೀಸರ ದಾಳಿ: 17 ಮಂದಿ ಆರೋಪಿಗಳ ಬಂಧನ

Suddi Udaya
error: Content is protected !!