25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸರ್ಕಾರಿ ಇಲಾಖಾ ಸುದ್ದಿ

ವೇಣೂರು: ಚಿರತೆಯ ಮೃತದೇಹ ಪತ್ತೆ ಪ್ರಕರಣ:ಚಿರತೆಯ ಶವಪರೀಕ್ಷೆ ಮಾಡಿ ಅಂತ್ಯಕ್ರಿಯೆ ನಡೆಸಿದ ಅರಣ್ಯ ಇಲಾಖೆ

ವೇಣೂರು: ವೇಣೂರು ವಲಯ ಅರಣ್ಯ ಇಲಾಖೆಯ ವ್ಯಾಪ್ತಿಯ ಇರ್ವತ್ತೂರು ಗ್ರಾಮದ ಪರಾರಿಯ ಎಂಬಲ್ಲಿ ಸರಕಾರಿ ಜಾಗದಲ್ಲಿ ಜ.10 ರಂದು ಬೆಳಗ್ಗೆ 10 ಗಂಟೆಗೆ ಸುಮಾರು 3 ರಿಂದ 4 ವರ್ಷದ ಹೆಣ್ಣು ಚಿರತೆಯೊಂದು ಮೃತಪಟ್ಟ ಸ್ಥಿತಿಯಲ್ಲಿ ಸ್ಥಳೀಯರಿಗೆ ಪತ್ತೆಯಾಗಿತ್ತು.

ಬೆಳ್ತಂಗಡಿ ನ್ಯಾಯಾಲಯದ ನ್ಯಾಯಾಧೀಶರ ಅನುಮತಿ ಪಡೆದು ಪ್ರಕರಣ ದಾಖಲಿಸಿಕೊಂಡ ಬಳಿಕ ವೇಣೂರು ಅರಣ್ಯ ಇಲಾಖೆಯ ಅಧಿಕಾರಿಗಳ ಸಮ್ಮುಖದಲ್ಲಿ ವೇಣೂರ ಅರಣ್ಯ ಇಲಾಖೆಯ ನಯನಾಡ್ ನಲ್ಲಿರುವ ಗಸ್ತುವಲಯ ವಸತಿಗೃಹದ ಬಳಿ ಬಂಟ್ವಾಳ ಪಶುವೈದ್ಯರಾದ ಅಶೋಕ್ ಶೆಟ್ಟಿ ನೇತೃತ್ವದಲ್ಲಿ ಜ.11 ರಂದು ಚಿರತೆಯ ಶವಪರೀಕ್ಷೆ ಮಾಡಲಾಗಿದ್ದು. ಈ ವೇಳೆ ಚಿರತೆಯ ಕುತ್ತಿಗೆ ಭಾಗಕ್ಕೆ ಗಾಯಗಳ ಗುರುತು ಮತ್ತು ಹೊಟ್ಟೆಯಲ್ಲಿ ನಾಯಿ ಮಾಂಸ ಕೂಡ ಪತ್ತೆಯಾಗಿದೆ. ಶವಪರೀಕ್ಷೆ ನಡೆಸಿದ ಬಳಿಕ ಅಲ್ಲಿಯೇ ಅರಣ್ಯ ಇಲಾಖೆಯ ನಿಯಮದಂತೆ ಚಿರತೆಯನ್ನು ಎಸಿಎಫ್ ಶ್ರೀಧರ್.ಪಿ ನೇತೃತ್ವದಲ್ಲಿ ಕಾನೂನು ಪ್ರಕಾರ ದಹನ ಮಾಡಲಾಯಿತು.

ಚಿರತೆ ಕಾಡುಹಂದಿಗೆ ಇಟ್ಟ ಉರುಳಿಗೆ ಅಥವಾ ತಂತಿಬೇಲಿಗೆ ಸಿಕ್ಕಿಬಿದ್ದು ಗಾಯಗೊಂಡು ಬಳಿಕ ಮೃತಪಟ್ಟ ಶಂಕೆಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಪಶುವೈದ್ಯರು ಅನುಮಾನಗಳನ್ನು ವ್ಯಕ್ತಪಡಿಸಿದ್ದಾರೆ. ಶವಪರೀಕ್ಷೆ ಮಾಡಿದ ಚಿರತೆಯ ವಿವಿಧ ಭಾಗಗಳನ್ನು ಸಾವಿನ ಬಗ್ಗೆ ದೃಢಪಡಿಸಲು ಹೈದರಾಬಾದ್ ಅಥವಾ ಬೆಂಗಳೂರು ಎಫ್ಎಸ್ಎಲ್ ಪರೀಕ್ಷೆಗಾಗಿ ಕಳುಹಿಸಿಕೊಡಲಾಗುವುದು ಎನ್ನಲಾಗಿದೆ.

ಚಿರತೆಯ ಶವಪರೀಕ್ಷೆ ವೇಳೆ ಬಂಟ್ವಾಳ ಪಶುವೈದ್ಯ ಅಶೋಕ್ ಶೆಟ್ಟಿ ತಂಡ ಹಾಗೂ ಮೂಡಬಿದಿರೆ ಎಸಿಎಫ್ ಶ್ರೀಧರ್.ಪಿ, ವೇಣೂರು ವಲಯ ಅರಣ್ಯಾಧಿಕಾರಿ ಭರತ್.ಯು.ಜಿ, ಡಿ.ಆರ್.ಎಫ್ ಅಶ್ವಿತ್, ಸುನಿಲ್ ಕುಮಾರ್, ಗಸ್ತು ಅರಣ್ಯ ಪಾಲಕ ಸುರೇಶ್ ಮತ್ತು ದಿವಕರ್ ಹಾಗೂ ಇತರ ಸಿಬ್ಬಂದಿ ಭಾಗಿಯಾಗಿದ್ದರು.

Related posts

ಮೈರೋಳ್ತಡ್ಕ ಪುತ್ತಿಲ ನಿವಾಸಿ ಕಮಲ ನಿಧನ

Suddi Udaya

ಸುಲ್ಕೇರಿ ಮಹಮ್ಮಾಯಿ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಭಂಡಾರಿಗೋಳಿ ಬಸ್ ಸ್ಟಾಂಡ್ ಗೆ ಹೊಸ ಶೀಟು ಅಳವಡಿಕೆ

Suddi Udaya

ಎ.25: ನಿವೃತ್ತ ಸರಕಾರಿ ನೌಕರರ ಸಂಘದ ರಜತ ಸಂಭ್ರಮ- ರೂ.40 ಲಕ್ಷ ವೆಚ್ಚದಲ್ಲಿ ಅಚ್ಚಿನಡ್ಕ ಕೆಲ್ಲಗುತ್ತು ನಲ್ಲಿ ನಿರ್ಮಿಸಲಾದ ಸಂಘದ ನೂತನ ಕಟ್ಟಡ ‘ಪ್ರಬುದ್ಧ’ ಉದ್ಘಾಟನೆ

Suddi Udaya

ಹವ್ಯಾಸಿ ಕಲಾವಿದ ಶಶಿಧರ.ಕೆ ಅವರ ಷಷ್ಟ್ಯಬ್ಧ ಕಾರ್ಯಕ್ರಮದ ಪ್ರಯುಕ್ತ ಯಕ್ಷಭಾರತಿಯಿಂದ ಅಭಿನಂದನೆ ಮತ್ತು ತಾಳಮದ್ದಳೆ

Suddi Udaya

ಆದಿದ್ರಾವಿಡ ಸಮಾಜ ಸೇವಾ ಸಂಘ ತಾಲೂಕು ಘಟಕದ ಸಮಿತಿ ರಚನೆ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಪ್ರ.ದ. ಕಾಲೇಜಿನಲ್ಲಿ ಬಿ.ಕಾ೦ ವಿದ್ಯಾರ್ಥಿಗಳಿಗೆ ಪ್ರಾಡಕ್ಟ್ ಲಾಂಚ್ ಸ್ಪರ್ಧೆ

Suddi Udaya
error: Content is protected !!