September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀರಾಮ ಶಿಶು ಮಂದಿರದಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ

ಬಂದಾರು: ಸ್ವಾಮಿ ವಿವೇಕಾನಂದರ ವಿಚಾರಗಳು ವೇದಾಂತ, ಯೋಗ, ಆಧ್ಯಾತ್ಮಿಕತೆ, ರಾಷ್ಟ್ರೀಯತೆ ಮತ್ತು ಮಾನವೀಯ ಸೇವೆಯ ಸುತ್ತ ಕೇಂದ್ರೀಕೃತವಾಗಿವೆ. ಅವರು “ಎದ್ದೇಳು, ಎಚ್ಚರಗೊಳ್ಳಿ, ಗುರಿ ತಲುಪುವವರೆಗೆ ನಿಲ್ಲಬೇಡಿ” ಎಂದು ಕರೆ ನೀಡಿದರು. ಪ್ರತಿ ವ್ಯಕ್ತಿಯೊಳಗಿನ ದೈವತ್ವದ ಮೇಲೆ ನಂಬಿಕೆ, ಆತ್ಮವಿಶ್ವಾಸ, ಇಂದ್ರಿಯ ನಿಗ್ರಹ, ನಿರಂತರ ಕಲಿಕೆ, ದೇಶಭಕ್ತಿ ಮತ್ತು ಬಡವರ ಸೇವೆಯನ್ನು ಅವರ ಮುಖ್ಯ ಬೋಧನೆಗಳಲ್ಲಿ ಸೇರಿವೆ. ಅವರು ಭಾರತೀಯ ಸಂಸ್ಕೃೃತಿ ಮತ್ತು ಆಧ್ಯಾತ್ಮಿಕ ಪುನರುಜ್ಜೀವನಕ್ಕೆ ಕರೆ ನೀಡಿದರು.

ಮುಂದಿನ ಪೀಳಿಗೆಯ ಆದರ್ಶ ಪ್ರಜೆಗಳು ಮತ್ತು ಸನಾತನ ಸಂರಕ್ಷಕರಾದ ಶ್ರೀರಾಮ ಶಿಶು ಮಂದಿರದ ಮಕ್ಕಳಿಂದ ಸ್ವಾಮಿ ವಿವೇಕಾನಂದರ ಜನ್ಮ ದಿನವನ್ನು ಗೌರವಾರ್ಪಣೆ ಸಲ್ಲಿಸುವ ಮೂಲಕ ಸಂಭ್ರಮದಿಂದ ಆಚರಿಸಿದರು.


ಮುಖ್ಯ ಅತಿಥಿಗಳಾಗಿ ಬಂದಾರು ಗ್ರಾಮ ಪಂಚಾಯಿತಿ ಸದಸ್ಯ ಬಾಲಕೃಷ್ಣ ಗೌಡ ಇವರು ಯುವ ದಿನವನ್ನು ಆಚರಿಸುವ ಮಹತ್ವವನ್ನು, ಮತ್ತು ವಿವೇಕಾನಂದರ ವಿಚಾರ ಧಾರೆಗಳನ್ನು ಮಕ್ಕಳಿಗೆ ವಿವರಿಸಿದರು. ಕೇಶವ ಜಾಲ್ನಡೆ ಮತ್ತು ರಮೇಶ್ ನೆಕ್ಕರಜೆ ಉಪಸ್ಥಿತರಿದ್ದರು.

Related posts

ಕಣಿಯೂರು ಮಹಾಶಕ್ತಿ ಕೇಂದ್ರ ಬಿಜೆಪಿ ಯುವಮೋರ್ಚಾ ಸಂಚಾಲಕರಾಗಿ ಹರಿಪ್ರಸಾದ್

Suddi Udaya

ಗುರುವಾಯನಕೆರೆಯಲ್ಲಿ ಎಂ.ಆರ್.ಪಿ.ಎಲ್ ಸಂಸ್ಥೆಯ ಸಹಕಾರದೊಂದಿಗೆ ಕಾರ್ಯಾರಂಭಗೊಂಡ ಶ್ರೀ ಶಾಂತೀಶ್ವರ ಫ್ಯೂಯಲ್ ನ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹಿರಿಯ ವಕೀಲರಾದ ಲಕ್ಷ್ಮೀ ಅಯ್ಯಂಗಾರ್ ಭೇಟಿ

Suddi Udaya

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರವರಿಂದ ಅರಸಿನಮಕ್ಕಿಯಲ್ಲಿ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರ ಉದ್ಘಾಟನೆ

Suddi Udaya

ಇಳಂತಿಲದಲ್ಲಿ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

Suddi Udaya

ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಏಳು ವರ್ಷದ ಎಕ್ಸೆಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

Suddi Udaya
error: Content is protected !!