July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀರಾಮ ಶಿಶು ಮಂದಿರದಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ

ಬಂದಾರು: ಸ್ವಾಮಿ ವಿವೇಕಾನಂದರ ವಿಚಾರಗಳು ವೇದಾಂತ, ಯೋಗ, ಆಧ್ಯಾತ್ಮಿಕತೆ, ರಾಷ್ಟ್ರೀಯತೆ ಮತ್ತು ಮಾನವೀಯ ಸೇವೆಯ ಸುತ್ತ ಕೇಂದ್ರೀಕೃತವಾಗಿವೆ. ಅವರು “ಎದ್ದೇಳು, ಎಚ್ಚರಗೊಳ್ಳಿ, ಗುರಿ ತಲುಪುವವರೆಗೆ ನಿಲ್ಲಬೇಡಿ” ಎಂದು ಕರೆ ನೀಡಿದರು. ಪ್ರತಿ ವ್ಯಕ್ತಿಯೊಳಗಿನ ದೈವತ್ವದ ಮೇಲೆ ನಂಬಿಕೆ, ಆತ್ಮವಿಶ್ವಾಸ, ಇಂದ್ರಿಯ ನಿಗ್ರಹ, ನಿರಂತರ ಕಲಿಕೆ, ದೇಶಭಕ್ತಿ ಮತ್ತು ಬಡವರ ಸೇವೆಯನ್ನು ಅವರ ಮುಖ್ಯ ಬೋಧನೆಗಳಲ್ಲಿ ಸೇರಿವೆ. ಅವರು ಭಾರತೀಯ ಸಂಸ್ಕೃೃತಿ ಮತ್ತು ಆಧ್ಯಾತ್ಮಿಕ ಪುನರುಜ್ಜೀವನಕ್ಕೆ ಕರೆ ನೀಡಿದರು.

ಮುಂದಿನ ಪೀಳಿಗೆಯ ಆದರ್ಶ ಪ್ರಜೆಗಳು ಮತ್ತು ಸನಾತನ ಸಂರಕ್ಷಕರಾದ ಶ್ರೀರಾಮ ಶಿಶು ಮಂದಿರದ ಮಕ್ಕಳಿಂದ ಸ್ವಾಮಿ ವಿವೇಕಾನಂದರ ಜನ್ಮ ದಿನವನ್ನು ಗೌರವಾರ್ಪಣೆ ಸಲ್ಲಿಸುವ ಮೂಲಕ ಸಂಭ್ರಮದಿಂದ ಆಚರಿಸಿದರು.


ಮುಖ್ಯ ಅತಿಥಿಗಳಾಗಿ ಬಂದಾರು ಗ್ರಾಮ ಪಂಚಾಯಿತಿ ಸದಸ್ಯ ಬಾಲಕೃಷ್ಣ ಗೌಡ ಇವರು ಯುವ ದಿನವನ್ನು ಆಚರಿಸುವ ಮಹತ್ವವನ್ನು, ಮತ್ತು ವಿವೇಕಾನಂದರ ವಿಚಾರ ಧಾರೆಗಳನ್ನು ಮಕ್ಕಳಿಗೆ ವಿವರಿಸಿದರು. ಕೇಶವ ಜಾಲ್ನಡೆ ಮತ್ತು ರಮೇಶ್ ನೆಕ್ಕರಜೆ ಉಪಸ್ಥಿತರಿದ್ದರು.

Related posts

ಉಜಿರೆ: ಜೆಸಿಐ ಬೆಳ್ತಂಗಡಿಯಿಂದ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರಕ್ಕೆ ಭೇಟಿ

Suddi Udaya

ಮೌಲ್ಯ ನಾಯಕ್ ರವರಿಗೆ ಸಂಸ್ಕೃತ ಒಲಂಪಿಯಾಡ್ ನಲ್ಲಿ ಸ್ವರ್ಣಪದಕ

Suddi Udaya

ಬೆನ್ನುಹುರಿ ಅಪಘಾತದ ಬಗ್ಗೆ ಮಾಹಿತಿ ಕಾರ್ಯಗಾರ

Suddi Udaya

ಉಜಿರೆ: ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜು ಎನ್ ಎಸ್ ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

Suddi Udaya

ಸೌದಿ ಅರೇಬಿಯಾದಲ್ಲಿ ಬಿಲ್ಲವ ಅಸೋಸಿಯೇಶನ್ ಸಮಿತಿ ರಚನೆ : ಅಧ್ಯಕ್ಷರಾಗಿ ಕಿಶೋರ್ ಪೂಜಾರಿ, ಪ್ರ. ಕಾರ್ಯದರ್ಶಿಯಾಗಿ ಜಯಕರ ಎಂ. ಪೂಜಾರಿ

Suddi Udaya

ಬೆಳ್ತಂಗಡಿ: ದೀಪಾವಳಿ ಹಬ್ಬದ ಪ್ರಯುಕ್ತ ಆಧಿನಾಥ್ ಬಜಾಜ್‌ನಲ್ಲಿ ಗ್ರಾಹಕರಿಗೆ ವಿಶೇಷ ಆಫರ್

Suddi Udaya
error: Content is protected !!