July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯುವದಿನಾಚರಣೆ

ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯುವದಿನಾಚರಣೆಯ ಕಾರ್ಯಕ್ರಮವನ್ನು ಆಚರಿಸಲಾಯಿತು.

ಮುಖ್ಯ ಅತಿಥಿಗಳಾಗಿ ಎಸ್‌ಡಿಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜು ಉಜಿರೆ ಮತ್ತು ಆಸ್ಪತ್ರೆ ಶಾಂತಿವನ ಇದರ ಉಪನ್ಯಾಸಕರು ಮತ್ತು ವೈದ್ಯಾಧಿಕಾರಿಗಳು ಆಗಿರುವ ಡಾ. ಪಕೃತಿ ಕೆದಿಲಾ ಇವರು ಆಗಮಿಸಿದ್ದರು. ಇವರು ವಿವಿಧ ಚಟುವಟಿಕೆಗಳ ಮುಖಾಂತರ ವಿಧ್ಯಾರ್ಥಿಗಳಿಗೆ ಶಿಸ್ತು, ಸಮಯಪಾಲನೆ, ಯೋಜನೆ ,ಯೋಗ ಜ್ಞಾನ ಇತ್ಯಾದಿಗಳ ಕುರಿತು ಮಾಹಿತಿ ನೀಡಿದರು.

ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ ವಿ ಇವರು ಯುವಜನತೆಯಲ್ಲಿ ಇರಬೇಕಾದ ವಿಶೇಷ ಗುಣಗಳು, ಗುರಿ ತಲುಪುವ ಮಾರ್ಗಗಳು ಇತ್ಯಾದಿಗಳನ್ನು ವಿಧ್ಯಾರ್ಥಿಗಳಿಗೆ ವಿವರಿಸಿದರು. ಶಾಲಾ ವಿದ್ಯಾರ್ಥಿ ಸಾರ್ಥಕ್ ನಿರ್ವಹಿಸಿದ ಕಾರ್ಯಕ್ರಮದಲ್ಲಿ ಶ್ರವಣ್ ಸ್ವಾಗತಿಸಿ, ಕುಮಾರಿ ಯಜ್ಞ ಅತಿಥಿಗಳ ಕಿರು ಪರಿಚಯ ಮಾಡಿಕೊಟ್ಟರು. ಶಾಲಾ ವಿದ್ಯಾರ್ಥಿ ಶಿಕಿನ್ ಧನ್ಯವಾದವಿತ್ತರು. ಶಾಲಾ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಈ ಕಾರ್ಯಕ್ರಮಕ್ಕೆ ಸಾಕ್ಷಿಗಳಾದರು.

Related posts

ನೀರಿನಲ್ಲಿ ಕೊಚ್ಚಿ ಹೋದ ಬೈಕ್ ಪ್ರಕರಣ: ಸ್ಥಳಕ್ಕೆ ರಕ್ಷಿತ್ ಶಿವರಾಂ ಭೇಟಿ, ಪರಿಶೀಲನೆ

Suddi Udaya

ಲಾಯಿಲ ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವದ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಬೆಳ್ತಂಗಡಿ ಹಾಗೂ ವೇಣೂರು ಠಾಣೆ ವ್ಯಾಪ್ತಿಯ ಸೂಕ್ಷ ಸ್ಥಳಗಳಲ್ಲಿ ಅರೆಸೇನಾಪಡೆ ಹಾಗೂ ಸ್ಥಳೀಯ ಪೊಲೀಸ್ ಅಧಿಕಾರಿಗಳಿಂದ ಪಥ ಸಂಚಲನ

Suddi Udaya

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ
“ಮಹಿಳಾ ಉದ್ದಿಮೆದಾರರ ಕಾರ್ಯಾಗಾರ” ಉದ್ಘಾಟನೆ

Suddi Udaya

ಗೇರುಕಟ್ಟೆ: ಎ.ಪಿ.ಉಸ್ತಾದ್ ರಿಂದ ಪರಪ್ಪು ಜಮಾಅತ್ ನ ಗೌರವಾಧ್ಯಕ್ಷರಾಗಿ ಕಾಜೂರು ತಂಙಳ್, ಅಧ್ಯಕ್ಷರಾಗಿ ಜಿ.ಡಿ.ಅಶ್ರಫ್ ಆಯ್ಕೆ

Suddi Udaya

ಕರ್ನಾಟಕ ಮುಸ್ಲಿಂ ಜಮಾಅತ್ ಉಜಿರೆ ಸರ್ಕಲ್ ವತಿಯಿಂದ “ಸ್ವಾತಂತ್ರ್ಯ ಸಂಗಮ” ಕಾರ್ಯಕ್ರಮ

Suddi Udaya
error: Content is protected !!